Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನಂದ್ ತೇಲ್ತುಂಬ್ಡೆ ಬಿಡುಗಡೆಗೆ...

ಆನಂದ್ ತೇಲ್ತುಂಬ್ಡೆ ಬಿಡುಗಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 April 2020 10:16 PM IST
share
ಆನಂದ್ ತೇಲ್ತುಂಬ್ಡೆ ಬಿಡುಗಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಕಲಬುರಗಿ, ಎ.27: ಚಿಂತಕ, ಬರಹಗಾರ ಡಾ.ಆನಂದ್ ತೇಲ್ತುಂಬ್ಡೆ ಸೇರಿದಂತೆ ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಕಲಬುರಗಿಯ ಬರಹಗಾರರು, ಪ್ರಗತಿಪರ ಸಂಘಟನೆಯ ಹೋರಾಟಗಾರರು ತೀವ್ರವಾಗಿ ಖಂಡಿಸಿದ್ದು, ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ್, ರಾಜ್ಯ ಪ್ರಾಂತ ರೈತ ಸಂಘದ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿವಿಧ ಪ್ರಗತಿಪರ ಸಂಘಟನೆಗಳ ನಾಯಕರು, ದೇಶದಲ್ಲಿ ಆನಂದ್ ತೇಲ್ತುಂಬ್ಡೆ ಸೇರಿ ಮಾನವ ಹಕ್ಕು ಹೋರಾಟಗಾರರ ಬಂಧನದ ಪ್ರಕ್ರಿಯೆಗಳು ದಿಗ್ಬ್ರಮೆಯನ್ನು ಉಂಟು ಮಾಡಿವೆ ಎಂದು ಅಭಿಪ್ರಾಯಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಡಪಂಥೀಯ ಚಿಂತಕರನ್ನು ತುಳಿಯಲಾಗುತ್ತಿದೆ. ಜಾತಿ ವ್ಯವಸ್ಥೆ ಇರಬೇಕೆಂದು, ಮನುವಾದವೇ ನಮ್ಮ ಪ್ರಜಾಪ್ರಭುತ್ವದ ಸಂವಿಧಾನವಾಗಬೇಕೆಂದು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಎಂದೂ ತಲೆಎತ್ತದಂತೆ ಮಾಡಬೇಕೆಂದು ಬಿಜೆಪಿ, ಆರೆಸ್ಸೆಸ್ ಹಾಗೂ ಸಂಘಪರಿವಾರದ ಸಂಘಟನೆಗಳು ಬಯಸುತ್ತಿವೆ. ಹೀಗಾಗಿ ಈ ಸಂಘಟನೆಗಳ ಒತ್ತಡದ ಮೇರೆಗೆ ಎಡಪಂಥೀಯ, ದಲಿತ ಹಾಗೂ ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಾ.ಆನಂದ್ ತೇಲ್ತುಂಬ್ಡೆ ಸೇರಿ ಮಾನವ ಹಕ್ಕುಗಳ ಹೋರಾಟಗಾರರ ಬಂಧನಕ್ಕೆ ಅಗತ್ಯವಾದ ಸುಳ್ಳು ಪ್ರಕರಣಗಳನ್ನು ಮತ್ತು ಕಲ್ಪಿತ ಸಂಚುಗಳನ್ನು ರೂಪಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲಿದ್ದಾರೆ ಎಂಬುದು ಕೂಡ ಇಂತಹ ಕಲ್ಪಿತ ಸಂಚಾಗಿದೆ. ಭೀಮಾ-ಕೋರಂಗಾವ್ ಪ್ರಕರಣ ಇದಕ್ಕೆ ಹೊರತಾಗಿಲ್ಲ. ಮಾವೋವಾದಿ ಸಂಘಟನೆಗೆ ಎಲ್ಲವನ್ನು ತಳುಕು ಹಾಕುತ್ತ ತಮಗೆ ಬೇಕಾದವರನ್ನು ಬಂಧಿಸುವಂತಹ ನಾಟಕವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಡಾ.ಆನಂದ್ ತೇಲ್ತುಂಬ್ಡೆ ಬಹುದೊಡ್ಡ ಬುದ್ಧಿಜೀವಿ, ದಲಿತ ಹೋರಾಟಗಾರ ಮತ್ತು ಪ್ರಜಾಪ್ರಭುತ್ವವಾದಿ, ಡಾ.ಬಿ.ಆರ್.ಅಂಬೇಡ್ಕರ್ ಕುಟುಂಬದ ಅಳಿಯ. ಇವರು ಪ್ರಜಾಪ್ರಭುತ್ವದ ಮೂಲ ತತ್ವಗಳಾದ ಸಹೋದರತೆ, ಸಮಾನತೆ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇವುಗಳಿಗೆ ಒತ್ತು ಕೊಟ್ಟು ತಮ್ಮ ಚಿಂತನೆಯ ದಿಕ್ಕನ್ನು ಕಂಡುಕೊಂಡವರು. ಇವರ ಚಿಂತನೆ ಜಾತಿ ವ್ಯವಸ್ಥೆಯನ್ನು ಬೆಂಬಲಿಸುವ ಬ್ರಾಹ್ಮಣ್ಯವನ್ನು ವಿರೋಧಿಸುವಂತಹದ್ದಾಗಿದೆ. ಹೀಗಾಗಿ ಬಲಪಂಥೀಯ ಸಂಘಟನೆಗಳ ಒತ್ತಡ ಮತ್ತು ಸಂಚಿನ ಭಾಗವಾಗಿ ಅವರನ್ನು ಬಂಧಿಸಲಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

ಆನಂದ್ ತೇಲ್ತುಂಬ್ಡೆ ಸೇರಿದಂತೆ ಮಾನವ ಹಕ್ಕು ಹೋರಾಟಗಾರರ ಬಂಧನ ನ್ಯಾಯಸಮ್ಮತವಲ್ಲ. ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರತಿಯೊಬ್ಬರು ಇವರ ಬಂಧನವನ್ನು ಒಪ್ಪುವುದಿಲ್ಲ. ಹೀಗಾಗಿ ಹಿಂದುಳಿದವರು, ದಲಿತರ, ಅಲ್ಪಸಂಖ್ಯಾತರು ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಎಲ್ಲ ಪ್ರಗತಿಪರರು ಶಾಂತಿಯುತವಾಗಿ ಬೀದಿಗಿಳಿಯುವ ಮುನ್ನ ಕೇಂದ್ರ ಸರಕಾರ ಕೂಡಲೇ ಆನಂದ್ ತೇಲ್ತುಂಬ್ಡೆ ಸೇರಿ ಎಲ್ಲ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಲಾಗಿದೆ.

ಈ ಪತ್ರಿಕಾ ಹೇಳಿಕೆಗೆ ಪ್ರೊ.ಎಸ್.ಪಿ.ಮೇಲಕೆರಿ, ಡಾ.ಈಶ್ವರಯ್ಯ ಮಠ, ಹಿರಿಯ ಸಾಹಿತಿ ಕಾಶಿನಾಥ್ ಅಂಬಲಗಿ, ಪ್ರೊ.ಎಚ್.ಟಿ.ಪೋತೆ, ಗಂಗಮ್ಮಾ ಬಿರಾದಾರ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಸದಸ್ಯೆ ಗೌರಮ್ಮ ಪಾಟೀಲ ಸೇರಿ ವಿವಿಧ ಸಂಘಟನೆಯ ಸದಸ್ಯರು ಮತ್ತು ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X