Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಸುರಕ್ಷಿತ ಅಂತರ ಕಾಪಾಡದೆ...

ಮಂಗಳೂರು : ಸುರಕ್ಷಿತ ಅಂತರ ಕಾಪಾಡದೆ ಲಾಕ್ ಡೌನ್ ನಡುವೆ ನೂರಾರು ವಲಸೆ ಕಾರ್ಮಿಕರ ಜಮಾವಣೆ

ವಾರ್ತಾಭಾರತಿವಾರ್ತಾಭಾರತಿ28 April 2020 4:39 PM IST
share
ಮಂಗಳೂರು : ಸುರಕ್ಷಿತ ಅಂತರ ಕಾಪಾಡದೆ ಲಾಕ್ ಡೌನ್ ನಡುವೆ ನೂರಾರು ವಲಸೆ ಕಾರ್ಮಿಕರ ಜಮಾವಣೆ

ಮಂಗಳೂರು, ಎ.28: ಲಾಕ್‌ಡೌನ್‌ನಿಂದ ಅಡಕತ್ತರಿಯಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ಪ್ರಕ್ರಿಯೆ ದ.ಕ. ಜಿಲ್ಲೆಯಲ್ಲಿ ಬಿರುಸುಗೊಂಡಿರುವ ಮಧ್ಯೆಯೇ ಮಂಗಳವಾರ ನಗರದ ಪುರಭವನದ ಆವರಣದಲ್ಲಿ ‌ನೂರಾರು ವಲಸೆ ಕಾರ್ಮಿಕರು ಜಮಾಯಿಸಿದ್ದಾರೆ.

ಆಶ್ಚರ್ಯದ ಸಂಗತಿ ಅಂದರೆ ಇಲ್ಲಿ ಸುರಕ್ಷಿತ ಅಂತರವಿರಲಿಲ್ಲ.‌ ಹಲವು ವಲಸೆ ಕಾರ್ಮಿಕರು ಮಾಸ್ಕ್ ಧರಿಸದಿದ್ದುದು ಕಂಡು ಬಂತು. ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ವಲಸೆ‌ ಕಾರ್ಮಿಕರನ್ನು ‌ಅವರವರ ಊರಿಗೆ ‌ಕಳುಹಿಸಿಕೊಡುವ ಪ್ರಕ್ರಿಯೆ ‌ನಡೆಯುತ್ತಿದೆ. ಅದರಂತೆ ಯಾರೋ ನೀಡಿದ ಮಾಹಿತಿ ಮೇರೆಗೆ ಸುಮಾರು 500ಕ್ಕೂ ಅಧಿಕ ಕಾರ್ಮಿಕರು ‌ಮಂಗಳವಾರ ಪುರಭವನದ ಬಳಿ ಜಮಾಯಿಸಿದ್ದರು.

ಸುರಕ್ಷಿತ ಅಂತರವಿಲ್ಲದೆ ಗುಂಪಾಗಿ ವಲಸೆ ಕಾರ್ಮಿಕರು ಸೇರಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಸ್ಥಳಕ್ಕೆ ತೆರಳಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡುವ ಬಗ್ಗೆ ವ್ಯವಸ್ಥೆ ಕಲ್ಪಿಸಿದರು. ಈ ವೇಳೆ 'ವಾರ್ತಾಭಾರತಿ' ಜೊತೆ ಮಾತನಾಡಿದ ಸಹಾಯಕ ಆಯುಕ್ತ ಮದನ್ ಮೋಹನ್ ಯಾರ ಸೂಚನೆಯ ಮೇರೆಗೆ ಕಾರ್ಮಿಕರು ಇಲ್ಲಿ ಜಮಾಯಿಸಿದ್ದಾರೆ ಎಂಬುದು ತಿಳಿದಿಲ್ಲ. ಆದರೂ ಅವರನ್ನು ಊರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗುವುದು. ಸೋಮವಾರ ಮನಪಾ ವ್ಯಾಪ್ತಿಯ 800ಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳಿಸಲಾಗಿದೆ. ಇವರು ನೈಜ ವಲಸೆ ಕಾರ್ಮಿಕರು ಹೌದೋ... ಅಲ್ಲವೋ ಎಂದು ಕಾರ್ಮಿಕ ಇಲಾಖೆಯ ಮೂಲಕ ಪರಿಶೀಲನೆ ನಡೆಸಲಾಗುವುದು. ಅವರ ಆರೋಗ್ಯವನ್ನೂ ತಪಾಸಣೆಗೊಳಪಡಿಸಲಾಗುವುದು. ಪ್ರತಿಯೊಂದು ಬಸ್ಸಿನಲ್ಲಿ ಶೇ. 40 ಮೀರದಂತೆ ವಲಸೆ‌ ಕಾರ್ಮಿಕರನ್ನು‌ ಕಳಿಸಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X