Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್ ಗೆ ಪ್ಲಾಸ್ಮಾ ಥೆರಪಿ ಸೂಕ್ತ...

ಕೊರೋನ ವೈರಸ್ ಗೆ ಪ್ಲಾಸ್ಮಾ ಥೆರಪಿ ಸೂಕ್ತ ಚಿಕಿತ್ಸೆ ಎನ್ನುವುದು ಇನ್ನೂ ಸಾಬೀತಾಗಿಲ್ಲ: ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ28 April 2020 5:40 PM IST
share
ಕೊರೋನ ವೈರಸ್ ಗೆ ಪ್ಲಾಸ್ಮಾ ಥೆರಪಿ ಸೂಕ್ತ ಚಿಕಿತ್ಸೆ ಎನ್ನುವುದು ಇನ್ನೂ ಸಾಬೀತಾಗಿಲ್ಲ: ಆರೋಗ್ಯ ಸಚಿವಾಲಯ

ಹೊಸದಿಲ್ಲಿ, ಎ.28: ಕೊರೋನ ವೈರಸ್ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಕ್ರಮಬದ್ಧ ಚಿಕಿತ್ಸೆ ಎಂದು ಪರಿಗಣಿಸಬಾರದು. ಇದರ ಪರಿಣಾಮತ್ವ ಸಾಬೀತುಪಡುವವರೆಗೆ ಇದನ್ನು ಸಂಶೋಧನೆ ಮತ್ತು ಪ್ರಯೋಗಾತ್ಮಕ ನೆಲೆಯಲ್ಲಿ ಮಾತ್ರ ಬಳಸಬೇಕು ಎಂದು ಕೇಂದ್ರದ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

 ಪ್ಲಾಸ್ಮಾ ಥೆರಪಿಯನ್ನು ಸೂಕ್ತವಾಗಿ ನಿರ್ವಹಿಸದಿದ್ದರೆ ಪ್ರಾಣಕ್ಕೇ ಅಪಾಯ ಉಂಟಾಗಬಹುದು ಎಂದು ಸರಕಾರ ಹೇಳಿದೆ. ಪ್ಲಾಸ್ಮಾ ಥೆರಪಿಯನ್ನು ಪ್ರಾಯೋಗಿಕ ಪರೀಕ್ಷೆಯಾಗಿ ನಿರ್ವಹಿಸಲಾಗುತ್ತಿದ್ದು, ಇದು ಸೂಕ್ತ ಚಿಕಿತ್ಸೆ ಎಂದು ಸಾಬೀತಾಗಿಲ್ಲ. ಪ್ರಾಯೋಗಿಕ ಪರೀಕ್ಷೆಯ ಹಂತದಲ್ಲಿರುವುದರಿಂದ ಸೂಕ್ತವಾಗಿ ನಿರ್ವಹಿಸದಿದ್ದರೆ ಜೀವಕ್ಕೇ ಅಪಾಯವಾಗಬಹುದು ಎಂದು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್ ಹೇಳಿದ್ದಾರೆ.

 ದೇಶದ ಅಗ್ರ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) , ಪ್ಲಾಸ್ಮಾ ಥೆರಪಿಯ ಪರಿಣಾಮ ತಿಳಿದುಕೊಳ್ಳಲು ಸಂಶೋಧನಾ ಅಧ್ಯಯನ ನಡೆಸುತ್ತಿದೆ. ಅದುವರೆಗೆ ಪರೀಕ್ಷಾ ಪ್ರಯೋಗದಲ್ಲಿ ಮಾತ್ರ ಪ್ಲಾಸ್ಮಾ ಥೆರಪಿಯನ್ನು ಬಳಸುವಂತೆ ವೈದ್ಯರಿಗೆ ಸಲಹೆ ನೀಡಲಾಗಿದೆ ಎಂದವರು ಹೇಳಿದ್ದಾರೆ.

ಕೊರೋನ ವೈರಸ್ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯ ದೇಹದಿಂದ ಪ್ಲಾಸ್ಮಾವನ್ನು ತೆಗೆದು ಸೋಂಕಿತ ವ್ಯಕ್ತಿಯ ದೇಹಕ್ಕೆ ಸೇರಿಸುವುದನ್ನು ಪ್ಲಾಸ್ಮಾ ಥೆರಪಿ ಎಂದು ಹೆಸರಿಸಲಾಗಿದೆ. ಗುಣಮುಖನಾದ ವ್ಯಕ್ತಿಯ ದೇಹದಲ್ಲಿರುವ ಪ್ಲಾಸ್ಮಾವು ವೈರಸ್ ವಿರುದ್ಧ ಹೋರಾಡುವ ಪ್ರತಿಕಾಯ(ಆ್ಯಂಟಿಬಾಡಿ)ವನ್ನು ಹೊಂದಿರುವುದರಿಂದ ರೋಗಿಗಳಲ್ಲಿ ಪ್ರತಿರಕ್ಷಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಭಾರತದಲ್ಲಿ ಈಗ ವೆಂಟಿಲೇಟರ್ ವ್ಯವಸ್ಥೆಯಲ್ಲಿರುವ ಕೊರೋನ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಬಳಸಲಾಗುತ್ತಿದೆ. ದೇಶದ ಹಲವು ವೈದ್ಯಕೀಯ ಕೇಂದ್ರಗಳು ಈಗ ಕೊರೋನ ಸೋಂಕು ಗುಣಮುಖರಾಗಿರುವ ವ್ಯಕ್ತಿಗಳಿಂದ ಪ್ಲಾಸ್ಮಾವನ್ನು ಶೇಖರಿಸಿಡುವ ಪ್ರಕ್ರಿಯೆ ಆರಂಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X