Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕಿತರ ಸಂಪರ್ಕಿತ 8 ಮಂದಿಯ ವರದಿ...

ಕೊರೋನ ಸೋಂಕಿತರ ಸಂಪರ್ಕಿತ 8 ಮಂದಿಯ ವರದಿ ನೆಗೆಟಿವ್: ಹಾಸನ ಜಿಲ್ಲಾಧಿಕಾರಿ ಗಿರೀಶ್

ಚನ್ನರಾಯಪಟ್ಟಣ ತಾಲೂಕಿನ 4 ಗ್ರಾಮಗಳಲ್ಲಿ ಸಂಚಾರ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ28 April 2020 9:52 PM IST
share
ಕೊರೋನ ಸೋಂಕಿತರ ಸಂಪರ್ಕಿತ 8 ಮಂದಿಯ ವರದಿ ನೆಗೆಟಿವ್: ಹಾಸನ ಜಿಲ್ಲಾಧಿಕಾರಿ ಗಿರೀಶ್

ಹಾಸನ, ಎ.28: ಕೊರೋನ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಜಿಲ್ಲೆಯ 8 ಮಂದಿಯನ್ನು ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಚನ್ನರಾಯಪಟ್ಟಣ ತಾಲೂಕಿನ 4 ಗ್ರಾಮಗಳನ್ನು ಸೀಝ್ ಮಾಡಿ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ತಿಳಿಸಿದ್ದಾರೆ.

ಮಂಗಳವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ನಾಗಮಂಗಲದಲ್ಲಿ ಕೋವಿಡ್-19 ಪಾಸಿಟಿವ್ ಎಂದು ಪತ್ತೆಯಾಗಿರುವ ಸೋಂಕಿತನೊಂದಿಗೆ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ ಎಲ್ಲಾ 9 ಮಂದಿಯನ್ನು ಗುರುತಿಸಲಾಗಿದ್ದು, ಅದರಲ್ಲಿ ಒಬ್ಬರು ಮುಂಬೈನಲ್ಲಿದ್ದು ಇನ್ನು ಉಳಿದ 8 ಮಂದಿಯ ಗಂಟಲು ದ್ರವ್ಯವನ್ನು ತಪಾಸಣೆ ಮಾಡಲಾಗಿದೆ. ಇದಲ್ಲದೆ 2ನೇ ಹಂತದ ಸಂಪರ್ಕ ಹೊಂದಿದ್ದ 71 ಮಂದಿಯನ್ನು ಹೋಂ ಕ್ವಾರಟೈನ್‍ನಲ್ಲಿ ಇರಿಸಿದ್ದು ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 25 ಮಂದಿಯ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲ್ಲಾ ಪ್ರಾಥಮಿಕ ಹಾಗೂ 2ನೇ ಹಂತದ ಸಂಪರ್ಕ ಹೊಂದಿದ್ದವರನ್ನು 5ನೇ ದಿನದಂದು ಪರೀಕ್ಷೆಗೆ ಒಳಪಡಿಸಲಾಗಿದೆ. ನಿಯಾಮಾನುಸಾರ 12ನೇ ದಿನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದ ನಂತರ ನೆಗೆಟಿವ್ ವರದಿ ಬಂದ ನಂತರ ಆಸ್ಪತ್ರೆ ಕ್ವಾರಟೈನ್‍ನಲ್ಲಿ ಇರುವವರನ್ನು ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಪ್ರಾಥಮಿಕ ಹಂತದ ಸಂಪರ್ಕ ಹೊಂದಿದ್ದ 8 ಮಂದಿ ಚನ್ನರಾಯಪಟ್ಟಣ ತಾಲೂಕಿನ ಹೆಗ್ಗಡ್ಡಹಳ್ಳಿ, ನುಗ್ಗೆಹಳ್ಳಿ ಹೋಬಳಿಯ ಕಗ್ಗೆರೆ ಗ್ರಾಮ ಮತ್ತು ಶ್ರವಣಬೆಳಗೊಳ ಹೋಬಳಿಯ ದೇವರ ಹಳ್ಳಿ ಮತ್ತು ಶಿವಪುರ ಗ್ರಾಮಗಳಿಗೆ ಸೇರಿದ್ದು ಈ ಗ್ರಾಮಗಳ ನಡುವಿನ ಸಂಚಾರವನ್ನು ನಿಷೇಧಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೋವಿಡ್-19 ಹಾಸನ ಹಸಿರು ವಲಯದಲ್ಲಿರುವುದರಿಂದ ಸರ್ಕಾರ ಕೆಲವೊಂದು ವಿನಾಯಿತಿ ನೀಡಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ನಗರದ ಹೊರವಲಯದಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಎಲೆಕ್ಟ್ರಿಕಲ್ ಅಂಗಡಿಗಳು, ಸಿಮೆಂಟ್ ಮತ್ತು ಕಬ್ಬಿಣ ಮಾರಾಟ ಹಾಗೂ ವಾಣಿಜ್ಯ ಉದ್ದೇಶದ ಗೂಡ್ಸ್ ವಾಹನಗಳ ಸರ್ವೀಸ್ ಸೆಂಟರ್ ಗಳನ್ನು ತೆರೆಯಲು ಅನುಮತಿ ನೀಡಿದೆ. ಸಾರ್ವಜನಿಕರು ಮೇ 3ರ ವರೆಗೆ ಇದೇ ರೀತಿ ಸಹಕರಿಸುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಕೋರಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X