Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತನಿಗಿಂತ ದೇಶಕ್ಕೆ ದ್ರೋಹ ಬಗೆದವರು...

ರೈತನಿಗಿಂತ ದೇಶಕ್ಕೆ ದ್ರೋಹ ಬಗೆದವರು ಮುಖ್ಯವಾದರೇ?: ಕೇಂದ್ರದ ವಿರುದ್ಧ ಕುಮಾರಸ್ವಾಮಿ ವಾಗ್ಧಾಳಿ

ವಾರ್ತಾಭಾರತಿವಾರ್ತಾಭಾರತಿ28 April 2020 10:42 PM IST
share
ರೈತನಿಗಿಂತ ದೇಶಕ್ಕೆ ದ್ರೋಹ ಬಗೆದವರು ಮುಖ್ಯವಾದರೇ?: ಕೇಂದ್ರದ ವಿರುದ್ಧ ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು, ಎ. 28: ಇಡೀ ದೇಶವೇ ಆರ್ಥಿಕ ಸಂಕಷ್ಟದಲ್ಲಿರುವಾಗ ದೇಶದ ಹಿತ ನೋಡದೆ, ಮ್ಯೂಚುವಲ್ ಫಂಡ್‍ಗಳ ಹಿತ ಕಾಪಾಡಲು ಆರ್‍ಬಿಐ ಮೂಲಕ 50 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಸುತ್ತಿರುವ ಕೇಂದ್ರ ಸರಕಾರದ ನಡೆ ಹಿಂದೆ ಯಾರ ಹಿತ ಅಡಗಿದೆ? ಸಾಮಾನ್ಯ ಜನರದ್ದೋ ಅಥವಾ ಉದ್ದೇಶಪೂರ್ವಕ ಸುಸ್ತಿದಾರ ಉದ್ಯಮಿಗಳದ್ದೋ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ಸಂಕಷ್ಟದಲ್ಲಿರುವವರಿಗಾಗಿ(?) ಕೇಂದ್ರ ಸರಕಾರ ಮರುಗಿದೆ! ಅವರ ಆರ್ಥಿಕ ಪುನಶ್ಚೇತನಕ್ಕಾಗಿ ಧಾರಾಳ ನೆರವು ನೀಡಿದೆ. ಈ ಕಷ್ಟಕಾಲದಲ್ಲೂ ಮಲ್ಯ, ಮೆಹುಲ್ ಚೋಕ್ಸಿ, ಸಂಜಯ್ ಜುಂಜನ್ ವಾಲ, ಬಾಬಾ ರಾಮದೇವ ಅಂತಹ ಉದ್ದೇಶಪೂರ್ವಕ ಸುಸ್ತಿದಾರರ 68 ಸಾವಿರ ಕೋಟಿ ರೂ.ಸಾಲವನ್ನು ಮನ್ನಾ ಮಾಡಿದೆ. ಮ್ಯುಚುವಲ್ ಫಂಡ್ ಉದ್ದಿಮೆದಾರರಿಗೆ 50 ಸಾವಿರ ಕೋಟಿ ರೂ.ನೆರವು ನೀಡಲಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕೆಂಬ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಬೇಡಿಕೆಗೆ ಕೇಂದ್ರ ಸರಕಾರ ಪ್ರತಿಕ್ರಿಯಿಸದೆ ಮೌನಕ್ಕೆ ಶರಣಾಗಿದೆ. 'ನ ಕಾವುಂಗಾ, ನಾ ಖಾನೆ ದುಂಗಾ' ಎಂದಿದ್ದ ಪ್ರಧಾನಿ ಉದ್ದಿಮೆದಾರರ ಹಿತರಕ್ಷಣೆಗೆ ಮಾತ್ರ ಮುಂದಾಗಿರುವುದು ಸರಿಯೇ?' ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಲಾಕ್‍ಡೌನ್‍ನಿಂದಾಗಿ ರೈತರು ಕೈಗೆ ಬಂದ ಬೆಳೆ ಕಳೆದುಕೊಂಡು ನಷ್ಟದಲ್ಲಿದ್ದಾರೆ, ಲಕ್ಷಾಂತರ ಜನರ ಉದ್ಯೋಗ ನಷ್ಟವಾಗಿದೆ, ಸಂಬಳವಿಲ್ಲದೆ ಅದೆಷ್ಟೋ ಕುಟುಂಬಗಳು ಪರಿತಪಿಸುತ್ತಿವೆ. ಕೆಲವರು ಆಹಾರವಿಲ್ಲದೇ, ಇನ್ನೂ ಕೆಲವರು ದೂರದೂರುಗಳಿಗೆ ನಡೆದು ಕೊನೆಯುಸಿರೆಳೆದಿದ್ದಾರೆ ಎಂದು ಕುಮಾರಸ್ವಾಮಿ ಗಮನ ಸೆಳೆದಿದ್ದಾರೆ.

ಈ ಸಂದರ್ಭದಲ್ಲಿ ಸರಕಾರಕ್ಕೆ ನೆನಪಾಗಬೇಕಿದ್ದು, ಪ್ರತಿನಿತ್ಯ ದುಡಿಮೆಯ ಶ್ರಮಿಕ ವರ್ಗ, ರೈತರು, ಅಸಂಘಟಿತ ಕಾರ್ಮಿಕರು ಮತ್ತು ಬಡವರು. ಆದರೆ, ಕೇಂದ್ರ ಸರಕಾರಕ್ಕೆ ಕಂಡವರು ಅತಿ ಶ್ರೀಮಂತರು. ದೇಶದಲ್ಲಿ ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆದಾಗ ಅವರ ಸಾಲಮನ್ನಾ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ರಾಜ್ಯ ಸರಕಾರಗಳೂ ಸಾಲಮನ್ನಾಕ್ಕೆ ಒತ್ತಾಯಿಸಿದ್ದವು. ಆದರೆ, ಆಗ ರೈತರತ್ತ ತಿರುಗಿಯೂ ನೋಡದ ಕೇಂದ್ರ ಸರಕಾರ ಈಗ ಮಲ್ಯ, ಚೋಕ್ಸಿಯಂತವರನ್ನು ಸಾಲಮನ್ನಾ ಮಾಡಿದೆ. ರೈತನಿಗಿಂತ ದೇಶಕ್ಕೆ ದ್ರೋಹ ಬಗೆದವರೇ ಕೇಂದ್ರ ಸರಕಾರಕ್ಕೆ ಮುಖ್ಯವಾದರೇ? ಇದೇನಾ ದೇಶ ಪ್ರೇಮ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಆರ್ಥಿಕ ಚಟುವಟಿಕೆಗಳಿಲ್ಲದೇ, ಆದಾಯವಿಲ್ಲದೇ ಸೊರಗುತ್ತಿರುವ ಈ ವೇಳೆ ರಾಜ್ಯಗಳು ಅನುದಾನ ಕೇಳುತ್ತಿರುವ ಹೊತ್ತಿನಲ್ಲಿ ಮ್ಯೂಚುವಲ್ ಫಂಡ್ ಉದ್ದಿಮೆಗಳ ನೆರವಿಗೆ ಓಡೋಡಿ ಹೋಗುವಂತಹ ತುರ್ತು ಈಗೇನಿತ್ತು? ಸರಕಾರ ಮೊದಲು ಒಕ್ಕೂಟ, ಅದರೊಳಗಿನ ನಾಗರಿಕರ ಹಿತ ಕಾಪಾಡಬೇಕಲ್ಲವೇ?’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X