Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಪರೀಕ್ಷಾ ಕಿಟ್‌ಗಳಿಗೆ...

ಕೋವಿಡ್-19 ಪರೀಕ್ಷಾ ಕಿಟ್‌ಗಳಿಗೆ ಬೇಡಿಕೆಯನ್ನು ಭಾರತ ರದ್ದುಗೊಳಿಸಿರುವುದು ಕಳವಳಕಾರಿ: ಚೀನಾ

ವಾರ್ತಾಭಾರತಿವಾರ್ತಾಭಾರತಿ28 April 2020 10:59 PM IST
share
ಕೋವಿಡ್-19 ಪರೀಕ್ಷಾ ಕಿಟ್‌ಗಳಿಗೆ ಬೇಡಿಕೆಯನ್ನು ಭಾರತ ರದ್ದುಗೊಳಿಸಿರುವುದು ಕಳವಳಕಾರಿ: ಚೀನಾ

ಹೊಸದಿಲ್ಲಿ, ಎ.28: ಎರಡು ಚೀನಿ ಕಂಪನಿಗಳು ತಯಾರಿಸಿರುವ ಕೋವಿಡ್-19 ರ್ಯಾಪಿಡ್ ಆ್ಯಂಟಿಬಾಡಿ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸುವ ಭಾರತದ ನಿರ್ಧಾರದ ಬಗ್ಗೆ ಮಂಗಳವಾರ ತೀವ್ರ ಕಳವಳವನ್ನು ವ್ಯಕ್ತಪಡಿಸಿದ ಚೀನಾ, ಭಾರತವು ವಿಷಯವನ್ನು ನ್ಯಾಯಯುತವಾಗಿ ಬಗೆಹರಿಸಲಿದೆ ಎಂದು ಆಶಯ ವ್ಯಕ್ತಪಡಿಸಿದೆ.

ಬೇಡಿಕೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಹಣವನ್ನು ಪಾವತಿಸಲಾಗಿಲ್ಲ, ಹೀಗಾಗಿ ಚೀನಿ ಕಂಪನಿಗಳಿಂದ ದೋಷಯುಕ್ತ ಪರೀಕ್ಷಾ ಕಿಟ್‌ಗಳ ಪೂರೈಕೆಯಿಂದಾಗಿ ಭಾರತವು ಒಂದೇ ಒಂದು ರೂಪಾಯಿಯನ್ನು ಕಳೆದುಕೊಳ್ಳುತ್ತಿಲ್ಲ ಎಂದು ಸರಕಾರವು ಸೋಮವಾರ ತಿಳಿಸಿತ್ತು.

‘ಪರೀಕ್ಷಾ ಫಲಿತಾಂಶಗಳ ಮೌಲ್ಯಾಂಕನ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಯ ನಿರ್ಧಾರದಿಂದ ನಮಗೆ ತೀವ್ರ ಕಳವಳವಾಗಿದೆ. ರಫ್ತು ಮಾಡಲಾಗುವ ವೈದ್ಯಕೀಯ ಉತ್ಪನ್ನಗಳ ಗುಣಮಟ್ಟಕ್ಕೆ ಚೀನಾ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ’ಎಂದು ಇಲ್ಲಿಯ ಚೀನಿ ರಾಯಭಾರಿ ಕಚೇರಿಯ ವಕ್ತಾರರಾದ ಜಿ ರಾಂಗ್ ತಿಳಿಸಿದ್ದಾರೆ.

ಚೀನಾದ ಗ್ವಾಂಕ್‌ಝೌ ವಾಂಡ್ಫೊ ಬಯೊಟೆಕ್ ಮತ್ತು ಝುಹೈ ಲಿವ್‌ಝಾನ್ ಡಯಾಗ್ನಾಸ್ಟಿಕ್ಸ್ ತಯಾರಿಸಿರುವ ಪರೀಕ್ಷಾ ಕಿಟ್‌ಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ಹೇಳಿರುವ ಐಸಿಎಂಆರ್, ಅವುಗಳ ಬಳಕೆಯನ್ನು ನಿಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆಯಲ್ಲದೆ,ಅವುಗಳನ್ನು ಪೂರೈಕೆದಾರರಿಗೆ ವಾಪಸ್ ಮಾಡುವಂತೆ ತಿಳಿಸಿದೆ.

ಕೆಲವು ವ್ಯಕ್ತಿಗಳು ಚೀನಿ ಉತ್ಪನ್ನಗಳಿಗೆ ದೋಷಯುಕ್ತ ಎಂದು ಹಣೆಪಟ್ಟಿ ಹಚ್ಚುತ್ತಿರುವುದು ಮತ್ತು ವಿಷಯಗಳನ್ನು ಪೂರ್ವಾಗ್ರಹದಿಂದ ನೋಡುತ್ತಿರುವುದು ಅನ್ಯಾಯ ಮತ್ತು ಬೇಜವಾಬ್ದಾರಿಯಿಂದ ಕೂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಜಿ,ತಾನು ಪ್ರಸ್ತಾಪಿಸಿರುವ ವ್ಯಕ್ತಿಗಳು ಯಾರು ಎನ್ನುವುದನ್ನು ಸ್ಪಷ್ಟಪಡಿಸಿಲ್ಲ.

ಕೊರೋನ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ತನ್ನ ಬೆಂಬಲ ಮುಂದುವರಿಯುತ್ತದೆ ಮತ್ತು ಉಭಯ ದೇಶಗಳ ಜನರನ್ನು ಸೋಂಕಿನಿಂದ ರಕ್ಷಿಸಲು ಶೀಘ್ರ ಸವಾಲನ್ನು ಮೆಟ್ಟಿ ನಿಲ್ಲುವಲ್ಲಿ ಭಾರತ ಸರಕಾರದೊಂದಿಗೆ ಜಂಟಿಯಾಗಿ ಶ್ರಮಿಸುತ್ತೇನೆ ಎಂದು ಚೀನಾ ಹೇಳಿದೆ.

ಭಾರತವು ಚೀನಾದ ಸದ್ಭಾವನೆ ಮತ್ತು ಪ್ರಾಮಾಣಿಕತೆಯನ್ನು ಗೌರವಿಸುತ್ತದೆ ಮತ್ತು ಚೀನಾದ ಕಂಪನಿಗಳ ಜೊತೆಗೆ ಸಮಯೋಚಿತ ಮಾತುಕತೆ ನಡೆಸಿ ವಾಸ್ತವವನ್ನು ಅರಿತುಕೊಂಡು ಸಮಸ್ಯೆಯನ್ನು ನ್ಯಾಯಯುತವಾಗಿ ಬಗೆಹರಿಸುತ್ತದೆ ಎಂದು ಚೀನಾ ಆಶಿಸಿದೆ ಎಂದೂ ಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X