ಬೆಳಗಾವಿ ಯೋಧನ ಬಂಧನ ಪ್ರಕರಣ: ಐಜಿಪಿ ನೇತೃತ್ವದ ತನಿಖೆಗೆ ಆದೇಶ

ಬೆಂಗಳೂರು, ಎ.28: ಬೆಳಗಾವಿಯ ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಬೆಳಗಾವಿ ವಲಯ ಐಜಿಪಿ ನೇತೃತ್ವದಲ್ಲಿ ನಡೆಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಪ್ರಕರಣದ ತನಿಖೆಯನ್ನು ಬೆಳಗಾವಿ ವಲಯ ಐಜಿಪಿ ನಡೆಸಬೇಕೆಂದು ಆದೇಶಿಸಿದ್ದು, ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದೆ.
Next Story





