Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡಿಸೆಂಬರ್-ಜನವರಿಯಲ್ಲಿ ಇಂಡಿಯಾ ಓಪನ್...

ಡಿಸೆಂಬರ್-ಜನವರಿಯಲ್ಲಿ ಇಂಡಿಯಾ ಓಪನ್ ಆತಿಥ್ಯಕ್ಕೆ ಬಿಎಐ ಸಜ್ಜು

ವಾರ್ತಾಭಾರತಿವಾರ್ತಾಭಾರತಿ29 April 2020 11:30 AM IST
share
ಡಿಸೆಂಬರ್-ಜನವರಿಯಲ್ಲಿ ಇಂಡಿಯಾ ಓಪನ್ ಆತಿಥ್ಯಕ್ಕೆ ಬಿಎಐ ಸಜ್ಜು

ಹೊಸದಿಲ್ಲಿ, ಎ.29: ಕೋವಿಡ್-19 ಪಿಡುಗು ಕಡಿಮೆಯಾಗಿ, ಸರಕಾರ ಅನುಮತಿ ನೀಡಿದರೆ ಭಾರತದ ಬ್ಯಾಡ್ಮಿಂಟನ್ ಸಂಸ್ಥೆ(ಬಿಎಐ) ಈ ವರ್ಷದ ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿಯಲ್ಲಿ 4,00,000 ಅಮೆರಿಕನ್ ಡಾಲರ್ ಬಹುಮಾನ ಮೊತ್ತದ ಇಂಡಿಯಾ ಓಪನ್ ಟೂರ್ನಿಯ ಆತಿಥ್ಯವಹಿಸಿಕೊಳ್ಳಲು ಸಜ್ಜಾಗಿದೆ.

ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್- 500 ಟೂರ್ನಮೆಂಟ್ ನಡೆಸುವ ಕುರಿತಂತೆ ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ(ಬಿಡಬ್ಲುಎಫ್)ಕಳೆದ ವಾರ ಬಿಎಐಗೆ ಪತ್ರ ಕಳುಹಿಸಿಕೊಟ್ಟಿತ್ತು. ಕೊರೋನ ವೈರಸ್‌ನಿಂದಾಗಿ ಇತರ ಟೋಕಿಯೊ ಒಲಿಂಪಿಕ್ಸ್ ಕ್ವಾಲಿಫೈಯರ್‌ಗಳ ಜೊತೆಗೆ ಇಂಡಿಯಾ ಓಪನ್ ಟೂರ್ನಿಯನ್ನು ರದ್ದುಪಡಿಸಲಾಗಿತ್ತು.

ತಾನು ಡಿಸೆಂಬರ್ ಅಥವಾ ಜನವರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಸಿದ್ಧವಿದ್ದು, ಸರಕಾರದ ಅನುಮತಿ ಬಾಕಿ ಇದೆ ಎಂದು ಬಿಡಬ್ಲುಎಫ್‌ಗೆ ನೀಡಿದ ಉತ್ತರದಲ್ಲಿ ಬಿಎಐ ತಿಳಿಸಿದೆ.

‘‘ಡಿಸೆಂಬರ್ ಅಥವಾ ಜನವರಿಯಲ್ಲಿ ಇಂಡಿಯಾ ಓಪನ್ ನಡೆಸಲು ಸಿದ್ಧವಿರುವುದಾಗಿ ನಾವು ಬಿಡಬ್ಲುಎಫ್‌ಗೆ ತಿಳಿಸಿದ್ದೇವೆ. ಆದರೆ, ಎಲ್ಲವೂ ಜಾಗತಿಕ ಆರೋಗ್ಯ ಬಿಕ್ಕಟ್ಟು ಹೇಗೆ ನಿಯಂತ್ರಣಕ್ಕೆ ಬರಲಿದೆ ಹಾಗೂ ಸರಕಾರ ಅನುಮತಿ ಪಡೆಯುವುದನ್ನು ಅವಲಂಬಿಸಿದೆ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಕೆ.ಸಿಂಘಾನಿಯ ಹೇಳಿದ್ದಾರೆ.

‘‘ನಾವು ಕಳೆದ ವಾರ ಬಿಡಬ್ಲುಎಫ್‌ನಿಂದ ಇ-ಮೇಲ್ ಸ್ವೀಕರಿಸಿದ್ದೆವು. ಸೆಪ್ಟಂಬರ್‌ನಲ್ಲಿ ಟೂರ್ನಿ ಆಯೋಜಿಸಲು ಸಾಧ್ಯವೇ ಎಂದು ನಮ್ಮಲ್ಲಿ ಕೇಳಲಾಗಿತ್ತು. ಆದರೆ, ಅನಿಶ್ಚಿತತೆ ಮನೆ ಮಾಡಿರುವ ಹಿನ್ನೆಲೆಯಲ್ಲಿ ನಾವು ಡಿಸೆಂಬರ್ ಮೊದಲ ಆಯ್ಕೆ ಹಾಗೂ ಜನವರಿ ಎರಡನೇ ಆಯ್ಕೆಯಾಗಿರುವುದಾಗಿ ತಿಳಿಸಿದ್ದೇವೆ. ಇದು ಸಾಕಷ್ಟು ಅಂಶಗಳನ್ನು ಅವಲಂಬಿಸಿದೆ. ಇದೀಗ ಅಂತರ್‌ರಾಷ್ಟ್ರೀಯ ಪ್ರಯಾಣವನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಏನಾಗುತ್ತದೋ ನೋಡಬೇಕು’’ ಎಂದು ಪಿಟಿಐ ಸುದ್ಧಿಸಂಸ್ಥೆಗೆ ಸಿಂಘಾನಿಯ ಹೇಳಿದ್ದಾರೆ.

ಇಂಡಿಯಾ ಓಪನ್ ಸೂಪರ್-500 ಸ್ಪರ್ಧೆಯು ಹೊಸದಿಲ್ಲಿಯಲ್ಲಿ ಮಾರ್ಚ್ 24ರಿಂದ 29ರ ತನಕ ನಿಗದಿಯಾಗಿತ್ತು. ಒಲಿಂಪಿಕ್ಸ್ ಅರ್ಹತೆಯ ಅಂತಿಮ ಗಡುವಾಗಿರುವ ಎಪ್ರಿಲ್ 28ರ ಒಳಗೆ ನಿಗದಿಯಾಗಿರುವ ಸ್ವಿಸ್ ಓಪನ್ ಸೂಪರ್-300(ಮಾ.17-22), ಮಲೇಶ್ಯ ಓಪನ್ ಸೂಪರ್ 750(ಮಾ.31-ಎ.5), ಸಿಂಗಾಪುರ ಓಪನ್ ಸೂಪರ್- 500(ಮಾ.7-12) ಹಾಗೂ ಬ್ಯಾಡ್ಮಿಂಟನ್ ಏಶ್ಯ ಚಾಂಪಿಯನ್‌ಶಿಪ್(ಎ.21-26)ಸಹಿತ ಇತರ ಎಲ್ಲ ಟೂರ್ನಿಗಳು ರದ್ದಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X