Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೇ ತಿಂಗಳಲ್ಲಿ ಹೆಬ್ರಿ ವಲಯ...

ಆರೇ ತಿಂಗಳಲ್ಲಿ ಹೆಬ್ರಿ ವಲಯ ಅರಣ್ಯಾಧಿಕಾರಿಯ ವರ್ಗಾವಣೆ: ರಾಜಕೀಯ ಪ್ರಭಾವ ಆರೋಪ

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 April 2020 6:13 PM IST
share
ಆರೇ ತಿಂಗಳಲ್ಲಿ ಹೆಬ್ರಿ ವಲಯ ಅರಣ್ಯಾಧಿಕಾರಿಯ ವರ್ಗಾವಣೆ: ರಾಜಕೀಯ ಪ್ರಭಾವ ಆರೋಪ

ಉಡುಪಿ, ಎ.29: ಮರಗಳ್ಳ ರಾಜಕಾರಣಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿದ್ದ ಹಾಗೂ ಶಾಸಕರ ಮಾತಿಗೆ ಕಾನೂನು ಮೀರಿ ಹೋಗಲ್ಲ ಎಂಬ ದಿಟ್ಟ ಪ್ರತ್ಯುತ್ತರ ನೀಡಿದ್ದ ಹೆಬ್ರಿ ವಲಯ ಅರಣ್ಯಾಧಿಕಾರಿ ವಿ.ಮುನಿರಾಜು ಅವರನ್ನು ಕೇವಲ ಆರು ತಿಂಗಳಲ್ಲಿಯೇ ವರ್ಗಾವಣೆಗೊಳಿಸಲಾಗಿದ್ದು, ಇದರ ಹಿಂದೆ ರಾಜಕೀಯ ಪ್ರಭಾವ ಇರುವುದಾಗಿ ಆರೋಪಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಆರು ತಿಂಗಳ ಹಿಂದೆ ಹೆಬ್ರಿ ವಲಯ ಅರಣ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ವಿ.ಮುನಿರಾಜು ಅವರನ್ನು ಎ.27ರಂದು ರಾಜ್ಯ ಸರಕಾರ ಬಂಡೀಪುರ ವನ್ಯಜೀವಿ ವಲಯಕ್ಕೆ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್ ಮುಕ್ತಾಯಗೊಂಡ ನಂತರ ಈ ಆದೇಶ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಇವರು, ಬೇಳಂಜೆ ಗ್ರಾಮದ ಕೊಪ್ಪರಗುಂಡಿ ಎಂಬಲ್ಲಿ ಮಣ್ಣಿನ ಅಡಿಯಲ್ಲಿ ಹೂತಿಟ್ಟಿದ್ದ ಲಕ್ಷಾಂತರ ರೂ. ವೌಲ್ಯದ 87 ಮರದ ದಿಮ್ಮಿಗಳನ್ನು ವಶಪಡಿಸಿಕೊಂಡು, ಕಾರ್ಕಳ ತಾಪಂ ಬಿಜೆಪಿ ಸದಸ್ಯ ಅಮೃತ್ ಕುಮಾರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಮೂಲಕ ಇವರು ಸ್ಥಳೀಯರಿಂದ ಮೆಚ್ಚುಗೆ ಪಾತ್ರರಾಗಿ, ಪ್ರಾಮಾಣಿಕ ಅಧಿಕಾರಿ ಎಂದೇ ಜನಮನ್ನಣೆಗಳಿಸಿದರು.

ಅದರ ನಂತರ ಫೆ.24ರಂದು ಉಡುಪಿ ತಾಪಂ ಸಾಮಾನ್ಯ ಸಭೆಯಲ್ಲಿ ಮೀಸಲು ಅರಣ್ಯದಲ್ಲಿ ರಸ್ತೆ ನಿರ್ಮಿಸಲು ಅನುಮತಿ ನೀಡುವಂತೆ ಗದರಿಸಿದ್ದ ಶಾಸಕ ಕೆ.ರಘುಪತಿ ಭಟ್ ಅವರಿಗೆ ‘ಕಾನೂನು ಮೀರಿ ಯಾವುದೇ ಕೆಲಸ ಮಾಡಲ್ಲ’ ಎಂದು ಮುನಿರಾಜು ಪ್ರತ್ಯುತ್ತರ ನೀಡಿದ್ದರು. ಹೀಗೆ ಕಾನೂನು ಪ್ರಕಾರ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯನ್ನು ಲಾಕ್‌ಡೌನ್ ಮಧ್ಯೆ ಏಕಾ ಏಕಿ ವರ್ಗಾವಣೆ ಮಾಡಿರುವುದರ ವಿರುದ್ಧ ಆರೋಪ ಹಾಗೂ ಆಕ್ರೋಶಗಳು ವ್ಯಕ್ತವಾಗುತ್ತಿವೆ.

‘ಕೊಟ್ಟ ಹುದ್ದೆಯನ್ನು ನಿಷ್ಠೆಯಿಂದ ನಿರ್ವಹಿಸುವ ಮೂಲಕ ಪ್ರಾಮಾಣಿಕ ಅರಣ್ಯ ಅಧಿಕಾರಿ ಎಂಬುದಾಗಿ ಇವರು ತೋರಿಸಿ ಕೊಟ್ಟಿದ್ದಾರೆ. ಪರಿಸರ ಪ್ರೇಮಿ ಯಾಗಿ ಯುವಪೀಳಿಗೆ, ವಿದ್ಯಾರ್ಥಿಗಳ, ಪರಿಸರ ಹೋರಾಟಗಾರರ ಅಚ್ಚು ಮೆಚ್ಚಿನ ಅಧಿಕಾರಿ ಎಂದು ಎನಿಸಿಕೊಂಡಿದ್ದಾರೆ. ಅದೆಷ್ಟು ಕಾಡುಗಳ್ಳರಿಗೆ ಎದೆಯಲ್ಲಿ ನಡುಕ ಹುಟ್ಟಿಸಿ, ವಾಹನಗಳನ್ನು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಇಡೀ ಗ್ರಾಮದ ಜನತೆಯಿಂದ ಮೆಚ್ಚುಗೆಗೆ ಪಾತ್ರ ರಾಗಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

‘ಕಾಡುಪ್ರಾಣಿಗಳ ಬೇಟೆ ಹಾಗೂ ಅಕ್ರಮ ಮರಳು ದಂಧೆಕೋರಿಗೆ ಕಡಿ ವಾಣ ಹಾಕಿರುವ ಅಧಿಕಾರಿ, ರಾಜಕಾರಣಿಗಳ ಕುತಂತ್ರಕ್ಕೆ ವರ್ಗಾವಣೆ ಗೊಂಡಿದ್ದಾರೆ. ಆದುರಿಂದ ಸರಕಾರ ಇವರ ಆದೇಶವನ್ನು ರದ್ದುಗೊಳಿಸಿ ಮುಂದಿನ ಎರಡು ವರ್ಷಗಳ ಕಾಲ ಇವರಿಗೆ ಇಲ್ಲಿಯೇ ಕರ್ತವ್ಯ ನಿರ್ವಹಿ ಸಲು ಅವಕಾಶ ಕಲ್ಪಿಸಿಕೊಡುವಂತೆ ಹೆಬ್ರಿ ಜನತೆ ಸಾಮಾಜಿಕ ಜಾಲ ತಾಣಗಳ ಮೂಲಕ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X