Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸರಳವಾದ ಉತ್ತರ ಬೇಕು’: ಆರ್‌ಬಿಐ ಪಟ್ಟಿ...

‘ಸರಳವಾದ ಉತ್ತರ ಬೇಕು’: ಆರ್‌ಬಿಐ ಪಟ್ಟಿ ಕುರಿತು ವಿತ್ತಸಚಿವೆಗೆ ಕಾಂಗ್ರೆಸ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ29 April 2020 9:28 PM IST
share
‘ಸರಳವಾದ ಉತ್ತರ ಬೇಕು’: ಆರ್‌ಬಿಐ ಪಟ್ಟಿ ಕುರಿತು ವಿತ್ತಸಚಿವೆಗೆ ಕಾಂಗ್ರೆಸ್ ತಿರುಗೇಟು

ಹೊಸದಿಲ್ಲಿ, ಎ.29: ವಿಜಯ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ದೇಶಭ್ರಷ್ಟ ಉದ್ಯಮಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ‘ಉದ್ದೇಶಪೂರ್ವಕ ಸುಸ್ತಿದಾರರು,ಕೆಟ್ಟ ಸಾಲಗಳು ಮತ್ತು ಸಾಲಮನ್ನಾಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳು ಮತ್ತು ಜನರನ್ನು ದಾರಿ ತಪ್ಪಿಸುವ ಅವರ ಪ್ರಯತ್ನಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಸರಣಿ ಟ್ವೀಟ್‌ಗಳಲ್ಲಿ ಮಾಡಿರುವ ಕಟುವಾಗಿ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಅವರು, ವಿತ್ತಸಚಿವರಂತಹ ಘನತೆಯ ಹುದ್ದೆಯಲ್ಲಿದ್ದು ತಪ್ಪು ಮಾಹಿತಿಗಳನ್ನು ಒದಗಿಸುವುದು ಅನ್ಯಾಯವಾಗುತ್ತದೆ ಎಂದು ಹೇಳಿದ್ದಾರೆ. ಮಲ್ಯ,ಮೋದಿ ಮತ್ತು ಚೋಕ್ಸಿ ಅವರಿಂದ ಮರುವಸೂಲಿ ಮಾಡಲಾಗಿದೆ ಎನ್ನಲಾಗಿರುವ ಹಣದ ಮೊತ್ತದಲ್ಲಿಯ ವ್ಯತ್ಯಾಸವನ್ನು ಅವರು ಬೆಟ್ಟುಮಾಡಿದ್ದಾರೆ.

‘ಮೋದಿ-ಚೋಕ್ಸಿ-ಮಲ್ಯ ಅವರಿಂದ 2,780.50 ಕೋ.ರೂ.ಗಳನ್ನು ಮರುವಸೂಲಿ ಮಾಡಲಾಗಿದೆ ಎಂದು ನೀವು(ಸೀತಾರಾಮನ್) ಟ್ವೀಟಿಸಿದ್ದೀರಿ. ಜಾರಿ ನಿರ್ದೇಶನಾಲಯವು ಐದು ವರ್ಷಗಳ ಅವಧಿಯಲ್ಲಿ ಪಿಎಂಎಲ್‌ಎ-ಫೆಮಾದಡಿ ಕೇವಲ 96.93 ಕೋ.ರೂ.ಗಳನ್ನು ಮರುವಸೂಲಿ ಮಾಡಿದೆ ಎಂದು 2020,ಮಾ.16ರಂದು ಸಂಸತ್ತಿಗೆ ತಿಳಿಸಲಾಗಿತ್ತು ’ಎಂದು ಸುರ್ಜೆವಾಲಾ ಟ್ವೀಟಿಸಿದ್ದಾರೆ.

ಆರ್‌ಬಿಐ ಮಂಗಳವಾರ ಭಾರತೀಯ ಬ್ಯಾಂಕುಗಳಿಗೆ ವಂಚಿಸಿರುವ ಆರೋಪಿಗಳಾದ 50 ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬಳಿಕ ರಾಹುಲ್,ಅದರಲ್ಲಿ ಆಡಳಿತ ಪಕ್ಷದ ಆಪ್ತರ ಹೆಸರುಗಳಿರುವುದರಿಂದ ಬಿಜೆಪಿಯು ಪಟ್ಟಿಯನ್ನು ಸಂಸತ್ತಿನಿಂದ ಮರೆಮಾಚಿತ್ತು ಎಂದು ಆರೋಪಿಸಿದ್ದರು.

ಮೋದಿ-ಚೋಕ್ಸಿ-ಮಲ್ಯ ಸೇರಿದಂತೆ ಪಟ್ಟಿಯಲ್ಲಿರುವವರ 68,607 ಕೋ.ರೂ.ಸಾಲವನ್ನು ನರೇಂದ್ರ ಮೋದಿ ಸರಕಾರವು ಮನ್ನಾ ಮಾಡಿದೆ ಎನ್ನುವುದು ಕಾಂಗ್ರೆಸ್ ಮತ್ತು ರಾಹುಲ್ ಆರೋಪವಾಗಿದೆ.

2009-10ರಿಂದ 2013-14ರವರೆಗೆ ಯುಪಿಎ ಆಡಳಿತದ ಅವಧಿಯಲ್ಲಿ ಸರಕಾರಿ ಸ್ವಾಮ್ಯದ ಬ್ಯಾಂಕುಗಳು 1,45,226 ಕೋ.ರೂ.ಗಳ ಸಾಲಗಳನ್ನು ತಮ್ಮ ಲೆಕ್ಕದ ಪುಸ್ತಕಗಳಿಂದ ತೊಡೆದುಹಾಕಿದ್ದವು ಎಂದು ತನ್ನ ಟ್ವೀಟ್‌ನಲ್ಲಿ ಬೆಟ್ಟು ಮಾಡಿರುವ ಸೀತಾರಾಮನ್,ಅನುತ್ಪಾದಿತ ಆಸ್ತಿಗಳಿಗೆ ಸಂಬಂಧಿಸಿಂತೆ ಈ ಕ್ರಮವು ಆರ್‌ಬಿಐ ನಿಯಮಗಳಿಗೆ ಅನುಗುಣವಾಗಿದೆ ಮತ್ತು ಸಾಲಗಳನ್ನು ಲೆಕ್ಕದ ಪುಸ್ತಕಗಳಿಂದ ತೊಡೆದುಹಾಕಿದ್ದರೂ ಅವುಗಳ ಮರುವಸೂಲಿಗೆ ಬ್ಯಾಂಕುಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತವೆ ಎಂದು ತಿಳಿಸಿದ್ದಾರೆ.

ಯುಪಿಎದ ಫೋನ್ ಬ್ಯಾಂಕಿಂಗ್‌ನಿಂದ ಅದರೊಂದಿಗೆ ಉತ್ತಮ ಸಂಬಂಧಗಳನ್ನು ಹೊಂದಿದ್ದ ಉದ್ಯಮಿಗಳು ಲಾಭ ಮಾಡಿಕೊಂಡಿದ್ದರು ಎಂದು ಸೀತಾರಾಮನ್ ತಿರುಗೇಟು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರು,ಇಂತಹ ನಿಯಮವನ್ನು ಉದ್ದೇಶಪೂರ್ವಕ ಸುಸ್ತಿದಾರರಿಗೆ ಅನ್ವಯಿಸುವುದನ್ನು ಯಾರೂ ನಿರಾಕರಿಸಲಾಗದು. ಆದರೆ ದೇಶದಿಂದ ಪರಾರಿಯಾಗಿರುವ ಮೋದಿ-ಚೋಕ್ಸಿ-ಮಲ್ಯ ಅವರಿಗೆ ನೀವು ಈ ನಿಯಮವನ್ನು ಅನ್ವಯಿಸಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X