Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19: ಹಸಿರು ವಲಯದತ್ತ ಹೆಜ್ಜೆ...

ಕೋವಿಡ್-19: ಹಸಿರು ವಲಯದತ್ತ ಹೆಜ್ಜೆ ಹಾಕುತ್ತಿರುವ ಭಟ್ಕಳ

ಕೇವಲ ಒಂದು ಪ್ರಕರಣ ಬಾಕಿ

ಎಂ.ಆರ್. ಮಾನ್ವಿ.ಎಂ.ಆರ್. ಮಾನ್ವಿ.29 April 2020 10:54 PM IST
share
ಕೋವಿಡ್-19: ಹಸಿರು ವಲಯದತ್ತ ಹೆಜ್ಜೆ ಹಾಕುತ್ತಿರುವ ಭಟ್ಕಳ

ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನ ಕೊರೋನ ಸೋಂಕಿನ ಪ್ರಥಮ ಪ್ರಕರಣ ದಾಖಲಾಗಿದ್ದು ಮಾ.19 ಹಾಗೂ ಕೊನೆಯ ಪ್ರಕರಣ ದಾಖಲಾಗಿದ್ದು ಎ.14 ಈ 27 ದಿನಗಳ ಅವಧಿಯಲ್ಲಿ ಒಟ್ಟು 11 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 300ಕ್ಕೂ ಅಧಿಕ ಮಂದಿಯನ್ನು ಈ ಸಂಬಂಧ ಕ್ವಾರೆನ್‍ಟೈನ್ ಮಾಡಲಾಗಿದ್ದು ಅವರು ತಮ್ಮ 14 ದಿನಗಳ ಅವಧಿಯನ್ನು ಪೂರ್ತಿಗೊಳಿಸಿ ತಮ್ಮ ತಮ್ಮ ಮನೆಗೆ ಹಿಂತಿರುಗಿದ್ದಾರೆ.

ಕಾರವಾರದ ಪತಂಜಲಿ ಆಸ್ಪತ್ರೆಯಲ್ಲಿ ಕೇವಲ ಒಂದು ಪ್ರಕರಣ ಮಾತ್ರ ಸಕ್ರಿಯವಾಗಿದ್ದು ಇನ್ನೆರಡು ದಿನಗಳಲ್ಲಿ ಅದು ಸಹ ನೆಗೆಟಿವ್ ವರದಿಯಾಗಿ ಕೊರೋನಾ ಮುಕ್ತ ಜಿಲ್ಲೆ ಎಂದು ಘೋಷಣೆ ಮಾಡುವ ನಿರೀಕ್ಷೆಯಿದೆ ಹಾಗಾಗಿ ಇನ್ನೆರಡದು ದಿನಗಳಲ್ಲಿ ಉ.ಕ ಜಿಲ್ಲೆಯನ್ನು ಹಸಿರು ವಲಯಕ್ಕೆ ಸೇರಿಸುವುದರ ಮೂಲಕ ಇಲ್ಲಿನ ಜನರು ಮೊದಲಿನಂತೆ ಬದುಕಲು ಅವಕಾಶ ದೊರೆಯುವುದೆಂಬ ಭರವಸೆಯಲ್ಲಿದ್ದಾರೆ.

ಜಗತ್ತಿನಾದ್ಯಂತ ಲಾಕ್‍ಡೌನ್ ಆರಂಭಗೊಂಡಾಗಲೆ ಪ್ರಪಂಚದ ಬೇರೆ ಬೇರೆ ಕಡೆ ವಾಸಿಸುತ್ತಿರುವ ಭಟ್ಕಳ ಮೂಲದ ನಾಗರೀಕರು ಭಟ್ಕಳ ತಲುಪುವ ಪ್ರಯತ್ನ ಕೈಗೊಂಡು ಕೆಲವೊಂದಿಷ್ಟು ಮಂದಿ ಭಟ್ಕಳಕ್ಕೆ ಬಂದು ಅದು ಗಲ್ಫ್ ರಾಷ್ಟ್ರಗಳಿಂದ ಹೆಚ್ಚು ಜನರು ಭಟ್ಕಳಕ್ಕೆ ಆಗಮನವಾಯಿತು. ಮಂಗಳೂರಿನ ದುಬೈಯಿಂದ ಭಟ್ಕಳಕ್ಕೆ ಬರುತ್ತಿದ್ದ ಯುವಕನ್ನು ಸ್ಕ್ರೀನಿಂಗ್ ಮಾಡಲಾಗಿ ಆತನಲ್ಲಿ ಕೊರೋನ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ಸಾಗಿಸಿ ಅತನನ್ನು ಎಲ್ಲೋ ಹೋಗಲು ಬಿಡದೆ ಮಂಗಳೂರಿನಲ್ಲಿಲ್ಲೆ ಕೂಡಿ ಹಾಕಿ ಚಿಕಿತ್ಸೆ ನೀಡಿದ್ದರ ಫಲವಾಗಿ ಕರಾವಳಿ ಭಾಗದಲ್ಲಿ ಮೊತ್ತ ಮೊದಲ ಗುಣಮುಖ ಹೊಂದಿದ ಪ್ರಕರಣವಾಗಿ ಗುರುತಿಸಿಕೊಂಡಿದ್ದು ಅಲ್ಲಿಂದ ಬೇರೆ ಬೇರೆ ದಿನದಂದು ಭಟ್ಕಳದಲ್ಲಿ ಗುರುತಿಸಿ ಕೊಂಡಿದ್ದ 10 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖ ಹೊಂದಿದ್ದು ಒಂದು ಪ್ರಕರಣ ಮತ್ರ ಸಕ್ರಿಯ ಪ್ರಕರಣವಿದ್ದು ಒಂದು ವರದಿ ನೆಗೆಟಿವ್ ಆಗಿದ್ದು ಮತ್ತೊಂದು ವರದಿಗಾಗಿ ಕಾಯಲಾಗುತ್ತಿದೆ. ಅದಿನ್ನು ಎರಡು ದಿನಗಳೊಳಗಾಗಿ ಬರುತ್ತಿದ್ದು ಅದು ಕೂಡ ನೆಗೆಟಿವ್ ಆಗಿರುತ್ತದೆ ಎಂಬ ವಿಶ್ವಾಸವನ್ನು ವೈದ್ಯರು, ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಜಾದು ಮಾಡಿದ ಜಿಲ್ಲಾಡಳಿತ: ಕೇವಲ 27 ದಿನಗಳಲ್ಲಿ ಕೊರೋನ ಸೋಂಕನ್ನು ನಿಯಂತ್ರಣದಲ್ಲಿಟ್ಟು ಅದನ್ನು ಹತೋಟಿಗೆ ತಂದಿರುವ ಜಿಲ್ಲಾಡಳಿತ ನಿಜಕ್ಕೂ ಜಾದು ನಡೆಸಿದೆ ಎಂಬ ಪ್ರಸಂಶನೀಯ ಮಾತುಗಳು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಭಟ್ಕಳದಂತಹ ಅತಿ ಹೆಚ್ಚು ಜನ ಓಡಾಟ ಇರುವ ನಗರದಲ್ಲಿ ಮಾತ್ರ ಕೊರೋನಾ ಸೋಂಕು ಕಾಣಿಸಿಕೊಂಡು ತಾಲೂಕಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಈ ಸಂಬಂಧ ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್, ಜಿ.ಪಂ. ಸಿ.ಇ.ಒ ಮುಹಮ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜು ಅವರು ನಿರಂತರ ಶ್ರಮ  ಹಾಗೂ ಭಟ್ಕಳದ ಮಜ್ಲಿಸೆ-ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ಸಹಾಯ ಸಹಕಾರದಿಂದಾಗಿ ಈ ಜಾದು ಸಾಧ್ಯವಾಯಿತು. ಇಲ್ಲದೆ ಹೋದರೆ ಭಟ್ಕಳದಂತಹ ಪ್ರದೇಶದಲ್ಲಿ ಇದು ಅಸಾಧ್ಯದ ಮಾತು. ಏಕೆಂದರೆ ಇಲ್ಲಿನ ಜನರನ್ನು ನಿಯಂತ್ರಿಸಲು ಅಷ್ಟು ಸುಲಭದ ಮಾತಲ್ಲ ಎಂದು ಹೇಳುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು. ತಂಝೀಮ್ ಸಂಸ್ಥೆಯು ಪದೇ, ಪದೇ ಸೂಚನೆ ನೀಡುವುದರ ಮೂಲಕ ಅವರಲ್ಲಿ ಕೊರೋನ ವೈರಸ್ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಅಲ್ಲದೆ ಇಲ್ಲಿನ ಇಬ್ಬರು ಪ್ರಧಾನ ಖಾಝಿಗಳು ಕೂಡ ತಮ್ಮ ವಿಡಿಯೋ ಸಂದೇಶದ ಮೂಲಕ ಕೊರೋನ ಕುರಿತಂತೆ ಮಾತನಾಡಿ ಜನರನ್ನು ಮನೆಯಿಂದ ಹೊರಗಡೆ ಬರದಂತೆ ತೆಡೆಯೊಡ್ಡಿದರು. ಆ ಕಾರಣಕ್ಕಾಗಿ ಭಟ್ಕಳದಲ್ಲಿ ಕೇವಲ 27 ದಿನಗಳಲ್ಲಿ ಮಹಾಮಾರಿ ಕೊರೋನಾ ಹಿಡಿತಕ್ಕೆ ಬಂತು. ಇನ್ನೇನು ಈ ಜಿಲ್ಲೆ ಹಸಿರು ವಲಯ ಎಂದು ಘೋಷಿಸಿಕೊಳ್ಳಲಿದೆ. ಆದರೆ ವಲಯ ಹಸಿರಾದ ಮಾತ್ರಕ್ಕೆ ಇಲ್ಲಿನ ಆಡಳಿತ ಮಾತ್ರ ಇದನ್ನು ಅಷ್ಟು ಬೇಗನೆ ಸಡಿಲುಗೊಳಿಸಲು ಅಸಾಧ್ಯವೆಂಬ ಸಂದೇಶಗಳನ್ನು ಆಗಾಗ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ನೀಡುತ್ತ ಬಂದಿರುವುದು ಕಂಡರೆ ಭಟ್ಕಳದಲ್ಲಿ ಮಾತ್ರ ಮೇ ಕೊನೆಯವರೆಗೂ ಲಾಕ್‍ಡೌನ್ ನಿಯಮಗಳು ಜಾರಿಯಲ್ಲಿರಬಹುದೆಂದು ಅನುಮಾನಗಳು ಮೂಡಿ ಬರುತ್ತಿವೆ.

ಲಾಕ್ ಡೌನ್ ನಂತರದ ಭಟ್ಕಳ ಹೇಗಿರಬಹುದು?: ಹೌದು ಇಂತಹದ್ದೊಂದು ಪ್ರಶ್ನೆ ಜನರಲ್ಲಿ ಈಗಾಗಲೆ ಮನೆಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೇ.3 ರ ತನಕ ಲಾಕ್‍ಡೌನ್ ಘೋಷಿಸಿದೆ. ಅದರ ನಂತರ ಏನು ? ದೇಶದಾದ್ಯಂತ ಲಾಕ್ ಡೌನ್ ಸಂಪೂರ್ಣ ಸಡಿಲಿಕೆಯಾಗುತ್ತಾ ? ಈ ಕುರಿತಂತೆ ಕೇಂದ್ರ ವಿವಿಧ ರಾಜ್ಯಗಳಿಗೆ ಮಾರ್ಗದರ್ಶನ ನೀಡಿದ್ದು ಅದರಂತೆ ರಾಜ್ಯಗಳು ತಮ್ಮ ಪರಿಸ್ಥಿತಿಯನ್ನು ನೋಡಿಕೊಂಡು ಎಲ್ಲಿ ಲಾಕ್ ಸಡಿಲಿಸಬೇಕು ಎಲ್ಲಿ ಜಾರಿಯಲ್ಲಿಡಬೇಕು ಎಂಬ ನಿರ್ಧಾರಕ್ಕೆ ಬರುತ್ತಾರೆ. 

ಮೇ 3 ನಂತರ ಲಾಕ್‍ಡೌನ್ ಹೇಗಿರಬಹುದು ? : ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಲಾಕ್‍ಡೌನ್ ನಲ್ಲಿ ಸಂಪೂರ್ಣ ಸಡಿಲಿಕೆಯಾಗುವ ನಿರೀಕ್ಷೆ ಇದೆ. ಆದರೆ, ಅನಾವಶ್ಯಕವಾಗಿ ನಗರ ಪ್ರದೇಶಗಳಿಗೆ ಜನರು ಬರುವುದನ್ನು ನಿರ್ಬಂಧಿಸುವ ಸಾಧ್ಯತೆ ಇದೆ. ಈ ಕೊರೋನ ನಡುವೆ ಮಲೆನಾಡು/ ಗ್ರಾಮೀಣ ಭಾಗಗಳಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿರುವುದರಿಂದ ಅರಣ್ಯದಲ್ಲಿ ಜನರ ಓಡಾಟಕ್ಕೆ ಷರತ್ತುಗಳನ್ನು ವಿಧಿಸುವ ಸಾಧ್ಯತೆ ಇದೆ. ಇನ್ನು ನಗರ ಪ್ರದೇಶಗಳಲ್ಲಿ ಅಂಗಡಿ- ಮುಂಗಟ್ಟುಗಳು, ದೈನಂದಿನ ಚಟುವಟಿಕೆಗಳು ಆರಂಭವಾಗಲಿದೆ ಎನ್ನಲಾಗಿದೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ಹಾಗೂ ಶುಚಿತ್ವ ಕಾಪಾಡಿಕೊಳ್ಳುವಿಕೆಯನ್ನು ಅನುಸರಿಸಬೇಕಿದೆ. ಜನರು ಗುಂಪುಗೂಡುವುದು ಹಾಗೂ ಅನಾವಶ್ಯಕವಾಗಿ ರಸ್ತೆಗಳಲ್ಲಿ ಅಡ್ಡಾಡುವುದಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳನ್ನು ಮನೆಮನೆಗೆ ಪೂರೈಕೆ ಮಾಡುವುದನ್ನು ಜಿಲ್ಲಾಡಳಿತ ಮುಂದುವರಿಸುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಸಾಗಾಟ ಹೊರತುಪಡಿಸಿ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳುವುದನ್ನು ನಿರ್ಬಂಧಿಸಬಹುದು. ಪ್ರಯಾಣಿಕ ವಾಹನಗಳ ಓಡಾಟ ನಗರ ಪ್ರದೇಶದಲ್ಲಿ ವಿರಳವಾಗಿರುವ ಸಾಧ್ಯತೆ ಇರಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಲಾಕ್‍ಡೌನ್ ಕೀಲಿ ಕೈ:  ಉ.ಕ.ಜಿಲ್ಲೆಗೆ ಸಂಬಂಧಿಸಿದ ನಿರ್ಧಾರಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿಯನ್ನು ನೀಡಲಾಗಿದ್ದು ಅವರು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ಯೋಚಿಲಾಗು ವುದೆಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಈಗ ಜಿಲ್ಲೆಯ ಲಾಕ್‍ಡೌನ್ ತೆಗೆಯುವ ಕೀಲಿ ಕೈ ಮಾತ್ರ ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಇದ್ದು ಸೂಕ್ತ ಸಮಯದಲ್ಲಿ ಜಿಲ್ಲೆಗೆ ಜಡಿದ ಬೀಗವನ್ನು ತೆರೆಯಲಿದ್ದಾರೆ.

share
ಎಂ.ಆರ್. ಮಾನ್ವಿ.
ಎಂ.ಆರ್. ಮಾನ್ವಿ.
Next Story
X