Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಈ ಜಿಲ್ಲೆಗಳಲ್ಲಿ ಮೇ 3ರ ಬಳಿಕ...

​ಈ ಜಿಲ್ಲೆಗಳಲ್ಲಿ ಮೇ 3ರ ಬಳಿಕ ಲಾಕ್‌ಡೌನ್ ಸಡಿಲ

ವಾರ್ತಾಭಾರತಿವಾರ್ತಾಭಾರತಿ30 April 2020 9:03 AM IST
share
​ಈ ಜಿಲ್ಲೆಗಳಲ್ಲಿ ಮೇ 3ರ ಬಳಿಕ ಲಾಕ್‌ಡೌನ್ ಸಡಿಲ

ಹೊಸದಿಲ್ಲಿ, ಎ.30: ಹಸಿರು ಮತ್ತು ಆರೆಂಜ್ ಪ್ರದೇಶಗಳಲ್ಲಿ ಮೇ 3ರ ಬಳಿಕ ಲಾಕ್‌ಡೌನ್ ಸಡಿಲವಾಲಿದ್ದು, ಆರ್ಥಿಕ ಚಟುವಟಿಕೆ ಹೆಚ್ಚಿಸಲು ಮತ್ತು ಜನಜೀವನ ಸಹಜ ಸ್ಥಿತಿಗೆ ಬರಲು ಇದು ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಹೊಸ ಮಾರ್ಗಸೂಚಿ ಮೇ 4ರಿಂದ ಜಾರಿಗೆ ಬರಲಿದ್ದು, ಇದರಲ್ಲಿ ಹಲವು ಜಿಲ್ಲೆಗಳಿಗೆ ದೊಡ್ಡ ಪ್ರಮಾಣದ ಸಡಿಲಿಕೆ ಇರಲಿದೆ ಎಂದು ಘೋಷಿಸಿದೆ.

ಈ ಕುರಿತ ವಿವರಗಳನ್ನು ಒಂದೆರಡು ದಿನಗಳಲ್ಲಿ ಒದಗಿಸಲಾಗುವುದು ಎಂದು ಗೃಹ ಸಚಿವಾಲಯ ಹೇಳಿದೆ. ಇದುವರೆಗೆ ಕೋವಿಡ್-19 ಪ್ರಕರಣ ವರದಿಯಾಗದ ಜಿಲ್ಲೆಗಳಲ್ಲಿ ಮತ್ತು 28 ದಿನಗಳಿಂದ ಕೋವಿಡ್-19 ಪ್ರಕರಣ ವರದಿಯಾಗದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಅನಿವಾರ್ಯ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಸತತ 14 ದಿನಗಳಲ್ಲಿ ಯಾವುದೇ ಸೋಂಕು ಕಂಡುಬಾರದ ಜಿಲ್ಲೆಗಳನ್ನು ಆರೆಂಜ್ ವಲಯ ಎಂದು ಘೋಷಿಸಲಾಗಿದ್ದು, ಇದಕ್ಕೆ ಕೂಡಾ ಸಾಕಷ್ಟು ಪ್ರಯೋಜನ ಲಭ್ಯವಾಗಲಿದೆ. ಆದರೆ ಕೆಂಪು ವಲಯಗಳಿಗೆ ಮಾತ್ರ ಅಲ್ಪ ಪ್ರಮಾಣದ ಸಡಿಲಿಕೆ ಇರುತ್ತದೆ. ಅದು ಕೂಡಾ ಹಾಟ್‌ಸ್ಪಾಟ್‌ಗಳನ್ನು ಹೊರತುಪಡಿಸಿ ಉಳಿದ ಪ್ರದೇಶಕ್ಕೆ ಸೀಮಿತವಾಗಿರುತ್ತದೆ.

ಆದರೆ ಸಮಸ್ಯೆಯೆಂದರೆ ಕೇಂದ್ರ ಸರ್ಕಾರ ಈಗಾಗಲೇ ಕೆಂಪು ವಲಯ ಎಂದು ಗುರುತಿಸಿರುವ 129 ಜಿಲ್ಲೆಗಳಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆಗಳು ಕೇಂದ್ರಿತವಾಗಿವೆ. ಇಲ್ಲಿ ಪತ್ತೆ, ಪರೀಕ್ಷೆ, ಪ್ರತ್ಯೇಕವಾಗಿಡುವಂಥ ಪ್ರಕ್ರಿಯೆ ಮುಂದುವರಿಯಲಿದೆ.

ದಿಲ್ಲಿ, ಮುಂಬೈ, ಅಹ್ಮದಾಬಾದ್ ಮತ್ತು ಚೆನ್ನೈನಂಥ ಮಹಾನಗರಗಳು ಕೆಂಪು ವಲಯವಾಗಿದ್ದು, ದೊಡ್ಡ ಸಂಖ್ಯೆಯ ಹಾಟ್‌ಸ್ಪಾಟ್‌ಗಳು ಕೂಡಾ ಇಲ್ಲಿವೆ. ಇಲ್ಲಿನ ಜನತೆಗೆ ಸೀಮಿತ ಪರಿಹಾರ ಸಿಗಲಿದೆ. ಹಂತ ಹಂತವಾಗಿ ಅಂಗಡಿಗಳನ್ನು ತೆರೆಯುವ ಬಗ್ಗೆ ಕೂಡಾ ಕೇಂದ್ರ ಪರಿಶೀಲನೆ ನಡೆಸುತ್ತಿದೆ. ಆದರೆ ಮನೆ ಕೆಲಸದವರೂ ಸೇರಿದಂತೆ ಕಾರ್ಮಿಕರ ಚಲನೆಗೆ ಹಸಿರು ವಲಯದಲ್ಲಿ ಮಾತ್ರ ಅವಕಾಶ ಇರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X