Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಪಾಸಿಟಿವ್ ಹಿನ್ನೆಲೆ: ಬೋಳೂರು...

ಕೊರೋನ ಪಾಸಿಟಿವ್ ಹಿನ್ನೆಲೆ: ಬೋಳೂರು ಪರಿಸರ ಸೀಲ್‌ಡೌನ್

135 ಮನೆಗಳು, 12 ಅಂಗಡಿಗಳು ಸೀಲ್‌ಡೌನ್ ವ್ಯಾಪ್ತಿಯಲ್ಲಿ

ವಾರ್ತಾಭಾರತಿವಾರ್ತಾಭಾರತಿ30 April 2020 1:52 PM IST
share
ಕೊರೋನ ಪಾಸಿಟಿವ್ ಹಿನ್ನೆಲೆ: ಬೋಳೂರು ಪರಿಸರ ಸೀಲ್‌ಡೌನ್

ಮಂಗಳೂರು, ಎ.30: ಕೊರೋನ ಸೋಂಕು ದೃಢಪಟ್ಟ 58ರ ಹರೆಯದ ಮಹಿಳೆಯ ಮನೆಯಿರುವ ಮನಪಾ ವ್ಯಾಪ್ತಿಯ ಬೋಳೂರು ಗ್ರಾಮದ ಬೋಳೂರು ಪರಿಸರವನ್ನು ಸೀಲ್‌ಡೌನ್ ಮಾಡಲಾಗಿದೆ. ಅಂದರೆ 135 ಮನೆಗಳು, 12 ಅಂಗಡಿಗಳು ಸೀಲ್‌ಡೌನ್ ವ್ಯಾಪ್ತಿಯಲ್ಲಿ ಬರುತ್ತಿದೆ. ಸದ್ಯ ಸುಮಾರು 640 ಮಂದಿ ಸೀಲ್‌ಡೌನ್ ವ್ಯಾಪ್ತಿಯಲ್ಲಿ ನೆಲೆಸುತ್ತಿದ್ದಾರೆ. ಇವರ ಮನೆಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಅಂದರೆ ಪೂರ್ವದಲ್ಲಿ ಜೇಮ್ಸ್ ಡಿಸೋಜರ ಮನೆ, ಪಶ್ಚಿಮದಲ್ಲಿ ಹಿಂದೂ ರುದ್ರಭೂಮಿ, ಉತ್ತರದಲ್ಲಿ ಹೊಟೇಲ್ ಬಿಜೆ ಮತ್ತು ಸುಲ್ತಾನ್ ಬತ್ತೇರಿ ರಸ್ತೆ ಹಾಗೂ ದಕ್ಷಿಣದಲ್ಲಿ ಹಿಂದೂ ರುದ್ರಭೂಮಿಯವರೆಗೆ ಕಂಟೈನ್‌ಮೆಂಟ್ ವಲಯ ಎಂದು ಗುರುತಿಸಲಾಗಿದೆ.

ಕಂಟೈನ್‌ಮೆಂಟ್ ವಲಯ ಮುಂದಿನ 28 ದಿನಗಳ ಕಾಲ ಸಂಪೂರ್ಣ ಸೀಲ್ ಡೌನ್ ಆಗಿರಲಿದೆ. ಈ ಪ್ರದೇಶದ ಮನೆಗಳ ಜನರು ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರುವಂತಿಲ್ಲ ಹಾಗೂ ಈ ಪ್ರದೇಶಕ್ಕೆ ಹೊರಗಿನ ಯಾರೂ ಪ್ರವೇಶಿಸುಂತಿಲ್ಲ. ಈ ಪ್ರದೇಶದ ಪ್ರತೀ ಮನೆಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇಲ್ಲಿನ ಜನರಿಗೆ ದಿನಸಿ, ಔಷಧ ಸಹಿತ ದಿನ ಬಳಕೆಯ ಅಗತ್ಯ ಸಾಮಗ್ರಿಗಳನ್ನು ಮನೆಗೆ ತಲುಪಿಸಲು ಆಡಳಿತ ವರ್ಗ ವ್ಯವಸ್ಥೆ ಮಾಡಲಿದೆ.

ಸೋಂಕು ಪೀಡಿತೆಯ ಮನೆಯ 5 ಕಿ.ಮೀ. ಬಫರ್ ರೆನ್ ಎಂದು ಘೋಷಿಸಲಾಗಿದೆ. ಅಂದರೆ ಪೂರ್ವದಲ್ಲಿ ಬೋಂದೆಲ್, ಪಶ್ಚಿಮದಲ್ಲಿ ಅರಬ್ಬೀ ಸಮುದ್ರ, ಉತ್ತರದಲ್ಲಿ ಎಂಸಿಎಫ್ (ರಾ.ಹೆ), ದಕ್ಷಿಣದಲ್ಲಿ ನೇತ್ರಾವತಿ ನದಿ ಬೋಳಾರ ಬಫರ್ ರೆನ್ ವ್ಯಾಪ್ತಿಗೆ ಬರುತ್ತದೆ. ಈ ಪ್ರದೇಶದಲ್ಲಿ 16,350 ಮನೆಗಳಿವೆ, 1,275 ಅಂಗಡಿ ಮುಂಗಟ್ಟುಗಳು, ಸುಮಾರು 79,800 ಜನರು ನೆಲೆಸುತ್ತಿದ್ದಾರೆ. ಇಲ್ಲಿನ ಎಲ್ಲಾ ಮನೆಗಳಿಗೆ ಆಶಾ ಕಾರ್ಯಕರ್ತರು ಭೇಟಿ ನೀಡಿ ಮನೆಮಂದಿಯ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಈ ಪ್ರದೇಶಗಳಲ್ಲೂ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಲಾಕ್‌ಡೌನ್ ಸಂದರ್ಭದಲ್ಲಿರುವ ಎಲ್ಲ ನಿಬಂಧನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸುರಕ್ಷಿತ ಅಂತರ ಕಾಪಾಡುವುದು ಮುಂದಿನ 28 ದಿನಗಳ ಕಾಲ ಜಾರಿಯಲ್ಲಿರುತ್ತದೆ.

* ಕಮಾಂಡರ್ ನೇಮಕ
ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಎಕ್ಸಿಕ್ಯೂಟಿವ್ ಇಂಜಿನಿಯರ್‌ರನ್ನು ಈ ಪ್ರದೇಶದ ಕಮಾಂಡರ್ ಆಗಿ ದ.ಕ.ಜಿಲ್ಲಾಧಿಕಾರಿ ಜವಾಬ್ದಾರಿ ವಹಿಸಿ ಆದೇಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X