Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರದ ಕೊರೋನ ಅವ್ಯವಹಾರ ನೋಡಿಕೊಂಡು...

ಸರಕಾರದ ಕೊರೋನ ಅವ್ಯವಹಾರ ನೋಡಿಕೊಂಡು ಸುಮ್ಮನೆ ಕೂರಲ್ಲ: ಡಿಕೆಶಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ30 April 2020 9:45 PM IST
share
ಸರಕಾರದ ಕೊರೋನ ಅವ್ಯವಹಾರ ನೋಡಿಕೊಂಡು ಸುಮ್ಮನೆ ಕೂರಲ್ಲ: ಡಿಕೆಶಿ ಕಿಡಿ

ಬೆಂಗಳೂರು, ಎ.30: ಕಳೆದ ಒಂದು ತಿಂಗಳಿಂದ ಸಂಕಷ್ಟದ ಸಮಯದಲ್ಲಿ ನಾವು ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ರಾಜಕಾರಣ ಮಾಡಬಾರದು ಹಾಗೂ ಮಾನವೀಯತೆ ದೃಷ್ಟಿಯಿಂದ ನಾವು ಸರಕಾರದ ಜೊತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರಕಾರ ಏನು ಮಾಡಿದೆ ಎಂಬುದನ್ನು ನೀವೆಲ್ಲ ನೋಡಿದ್ದೀರಿ. ಸಚಿವರ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕೂರಲು ಇನ್ನು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಜನರಿಗೆ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ.20ರಷ್ಟು ಕೆಲಸ ಆಗಿರುವುದು ಬಿಟ್ಟರೆ, ಆರೋಗ್ಯದ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ ಎಂದು ದೂರಿದರು.

ಆದಾಯ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ. ಇದನ್ನು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಕೊರೋನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇರಲಿ, ಜೆಡಿಎಸ್ ಇರಲಿ ಇತರೆ ಸಂಘಟನೆಗಳಿರಲಿ ಎಲ್ಲವೂ ಸ್ವಹಿತಾಸಕ್ತಿ ಮರೆತು ರಸ್ತೆಗಿಳಿದು ಜನರಿಗೆ ಸಹಾಯ ಮಾಡಿವೆ. ಶಕ್ತಿ ಮೀರಿ ಜನಪರವಾಗಿ ಶ್ರಮಿಸಿವೆ ಎಂದು ಅವರು ಹೇಳಿದರು.

ಈ ವಿಚಾರದಲ್ಲಿ ನಾವು ರಾಜಕಾರಣವನ್ನು ದೂರವಿಟ್ಟೆವು. ಆದರೆ, ಈಗ ಸಮಯ ಮೀರುತ್ತಿದೆ. ಇನ್ನು ನಾವು ಸುಮ್ಮನೆ ಕೂತರೆ ಜನರಿಗೆ, ನಮ್ಮ ಜವಾಬ್ದಾರಿಗೆ ಮೋಸ ಮಾಡಿದಂತಾಗುತ್ತದೆ. ಹಾಲು ಕೊಡಿ ಅಂದರೆ ಅದರಲ್ಲೂ ವ್ಯಾಪಾರ, ಅಕ್ಕಿ ಕೊಡುವುದರಲ್ಲೂ ಅವ್ಯವಹಾರ. ಈವರೆಗೂ ಸರಕಾರ ಒಂದೇ ಒಂದು ಕಡೆ ತರಕಾರಿಗಳನ್ನು ಖರೀದಿ ಮಾಡಿರುವ ದಾಖಲೆ ನಿಮ್ಮ ಬಳಿ ಇದ್ದರೆ ಕೊಡಿ. ಅವರು ಖರೀದಿಸಿಲ್ಲ ಅಂದರೆ ಹೊರ ರಾಜ್ಯಗಳಿಗೆ ಕಳುಹಿಸಿದ್ದಾರಾ? ಅದಕ್ಕೆ ಅವಕಾಶ ಸಿಕ್ಕಿದ್ಯಾ? ಇದ್ಯಾವುದರ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ವಾಹನ ಸಾಲ ಪಡೆದಿರುವವರಿಗೆ ಕಂತಿನ ವಿನಾಯಿತಿ, ಬಡ್ಡಿ ಮನ್ನಾ ಅಥವಾ ವಿಮೆ ಕಂತು ತಡವಾಗಿ ಕಟ್ಟಲು ಅವಕಾಶ ಕಲ್ಪಿಸಲಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಲ್ಲ ವಿಚಾರದಲ್ಲೂ ವಿಫಲವಾಗಿರುವುದು ಎದ್ದು ಕಾಣುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರಗಳು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದನ್ನು ನಾನು ಈವರೆಗೂ ನೋಡಿರಲಿಲ್ಲ ಎಂದು ಅವರು ಟೀಕಿಸಿದರು.

ತೋಟಗಳಲ್ಲಿ ಫಲಗಳು ಕೊಳೆಯುತ್ತಿವೆ. ಮುಸಲ್ಮಾನ ವ್ಯಾಪಾರಿಗಳಿಗೆ ತೋಟದೊಳಗೆ ಕಾಲಿಡಲು ಅವಕಾಶ ನೀಡುತ್ತಿಲ್ಲ. ಬೇರೆ ರಾಜ್ಯದವರು ಬರುವಂತಿಲ್ಲ. ಕೋಳಿಗಳನ್ನು ಜೀವಂತವಾಗಿ ಮಣ್ಣಲ್ಲಿ ಮುಚ್ಚಿದ್ದಾರೆ. ಇದೆಲ್ಲವನ್ನೂ ನೋಡಿದರೆ ಇಂದು ಎಲ್ಲ ವರ್ಗದ ಜನರ ಬದುಕು ಶೋಚನೀಯವಾಗಿದೆ. ಈ ವರ್ಗದ ಜನರನ್ನು ಬದುಕಿಯೂ ಸಾಯುವಂತೆ ಮಾಡಲಾಗಿದೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X