Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.ಕ್ಕೆ 6 ಲಕ್ಷ ವಲಸಿಗ ಕಾರ್ಮಿಕರು...

ಉ.ಪ್ರ.ಕ್ಕೆ 6 ಲಕ್ಷ ವಲಸಿಗ ಕಾರ್ಮಿಕರು ವಾಪಾಸಾಗುವ ನಿರೀಕ್ಷೆ

ಕ್ವಾರಂಟೈನ್ ಕೇಂದ್ರ, ಸಾಮುದಾಯಿಕ ಅಡುಗೆ ಮನೆ, ಆಶ್ರಯ ಶಿಬಿರಗಳಿಗೆ ಏರ್ಪಾಡು

ವಾರ್ತಾಭಾರತಿವಾರ್ತಾಭಾರತಿ30 April 2020 11:08 PM IST
share
ಉ.ಪ್ರ.ಕ್ಕೆ 6 ಲಕ್ಷ ವಲಸಿಗ ಕಾರ್ಮಿಕರು ವಾಪಾಸಾಗುವ ನಿರೀಕ್ಷೆ

ಹೊಸದಿಲ್ಲಿ,ಎ.30: ಕನಿಷ್ಠ ಪಕ್ಷ ಆರು ಲಕ್ಷ ವಲಸಿಗರು ಉತ್ತರಪ್ರದೇಶದಲ್ಲಿರುವ ತಮ್ಮ ಊರುಗಳಿಗೆ ವಾಪಾಸಾಗುವ ನಿರೀಕ್ಷೆಯಿರುವುದರಿಂದ, ಅವರ ಪುನರಾಗಮನಕ್ಕೆ ಕಾರ್ಯಯೋಜನೆಯೊಂದನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಆರು ಲಕ್ಷ ಮಂದಿಗಾಗಿ ಕ್ವಾರಂಟೈನ್ ಕೇಂದ್ರಗಳು, ಆಶ್ರಯಶಿಬಿರಗಳು ಹಾಗೂ ಸಾಮುದಾಯಿಕ ಪಾಕಶಾಲೆಗಳನ್ನು ಸಿದ್ಧಪಡಿಸುವಂತೆಯೂ ತಾನು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಯೋಗಿ ಆದಿತ್ಯನಾಥ್ ಟ್ವೀಟಿಸಿದ್ದಾರೆ.

ಈ ಮಧ್ಯೆ ಬೇರೆ ರಾಜ್ಯಗಳಲ್ಲಿರುವ ತಮ್ಮ ನಿವಾಸಿಗರನ್ನು ಮರಳಿ ಕರೆತರಲು ಶ್ರಮಿಸುತ್ತಿರುವುದಾಗಿ ಕರ್ನಾಟಕ ಹಾಗೂ ದಿಲ್ಲಿ ಸರಕಾರಗಳು ತಿಳಿಸಿವೆ.

ತಮ್ಮ ಊರುಗಳಿಗೆ ವಾಪಸಾಗಲು ಇಚ್ಛಿಸುವ ಹೊರರಾಜ್ಯಗಳ ವಿದ್ಯಾರ್ಥಿಗಳು ಹಾಗೂ ವಲಸಿಗ ಕಾರ್ಮಿಕರ ಸಂಚಾರಕ್ಕೆ ಒಂದು ಬಾರಿಗೆ ಅವಕಾಶ ನೀಡಲು ಕರ್ನಾಟಕ ಸರಕಾರ ನಿರ್ಧರಿಸಿದೆ. ರಾಜಸ್ಥಾನದ ಕೋಟಾದಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಶೀಘ್ರದಲ್ಲೇ ಏರ್ಪಾಡುಗಳನ್ನು ಮಾಡುವುದಾಗಿ ದಿಲ್ಲಿ ಸರಕಾರವು ತಿಳಿಸಿದೆ.

ಮೇಘಾಲಯ ಸರಕಾರವು ರಾಜ್ಯದ 11 ಜಿಲ್ಲೆಗಳ ಪೈಕಿ 10ನ್ನು ಹಸಿರು ವಲಯವೆಂದು ಘೋಷಿಸಲು ನಿರ್ಧರಿಸಿದ್ದು, ಅಲ್ಲಿ ಅಂತರ್ ಜಿಲ್ಲಾ ಸಂಚಾರಕ್ಕೆ ಅನುಮತಿ ನೀಡಿದೆ. ಮೇಘಾಲಯದಲ್ಲಿ ಒಂದು ಸಾವು ಸೇರಿದಂತೆ ಕೋವಿಡ್-19ನ ಎಲ್ಲಾ 12 ಪ್ರಕರಣಗಳು ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯಲ್ಲಿರುವ ರಾಜ್ಯದ ರಾಜಧಾನಿ ಶಿಲ್ಲಾಂಗ್‌ನಲ್ಲಿ ವರದಿಯಾಗಿವೆ.

ಕೊರೋನಾ ವೈರಸ್‌ಸೋಂಕಿನ ಲಕ್ಷಣಗಳಿಲ್ಲದ ವಲಸಿಗ ಕಾರ್ಮಿಕರು, ವಿದ್ಯಾರ್ಥಿಗಳು ಅಥವಾ ಪ್ರವಾಸಿಗರು ತಮ್ಮ ತವರು ರಾಜ್ಯಗಳಿಗೆ ಮರಳಬಹುದೆಂದು ಕೇಂದ್ರ ಸರಕಾರ ಗುರುವಾರ ತಿಳಿಸಿದ್ದು, ಈ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

 ಕೋವಿಡ್-19 ಸೋಂಕು ಇಲ್ಲದ ವಲಸಿಗ ಕಾರ್ಮಿಕರಿಗೆ ಅವರ ತವರುರಾಜ್ಯಗಳಿಗೆ ತೆರಳಲು ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ಆಲಿಕೆಯನ್ನು ಬುಧವಾರ ನಡೆಸಿದ ಸುಪ್ರೀಂಕೋರ್ಟ್ , ಈ ಬಗ್ಗೆ ಕೇಂದ್ರದಿಂದ ಉತ್ತರ ಕೇಳಿದ ಮರುದಿನವೇ ಈ ಮಾರ್ಗಸೂಚಿ ಪ್ರಕಟವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X