Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.: ಮನೆಗಳಲ್ಲೇ ಮೇ ದಿನ ಆಚರಿಸಿದ...

ದ.ಕ.: ಮನೆಗಳಲ್ಲೇ ಮೇ ದಿನ ಆಚರಿಸಿದ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ1 May 2020 6:01 PM IST
share

ಮಂಗಳೂರು, ಮೇ 1: ಕೊರೋನ ಸೋಂಕು ರೋಗ ತಡೆಗಟ್ಟುವ ಸಲುವಾಗಿ ಲಾಕ್‌ಡೌನ್ ವಿಧಿಸಲ್ಪಟ್ಟ ಕಾರಣ ಜಿಲ್ಲೆಯ ಬಹುತೇಕ ಕಡೆ ಕಾರ್ಮಿಕರು ಸ್ವತಃ ಮನೆಗಳಲ್ಲೇ ಶುಕ್ರವಾರ ಮೇ ದಿನ ಆಚರಿಸಿದರು.

ಸಾಮಾನ್ಯವಾಗಿ ಸಾರ್ವಜನಿಕವಾಗಿ ಮೇ ದಿನ ಆಚರಿಸುವ ಕಾರ್ಮಿಕರು, ಸಂಘಟನೆಗಳ ಮುಖಂಡರು ಈ ಬಾರಿ ವಿಶಿಷ್ಟವಾದ ರೀತಿಯಲ್ಲಿ ಆಚರಿಸಿ ಗಮನ ಸೆಳೆದರು.

ಕಾರ್ಮಿಕ ನಾಯಕರಾದ ಜಯರಾಮ ಮಯ್ಯ, ಶ್ಯಾಮರಾಜ್, ಲೋಕೇಶ್ ಕುದ್ಯಾಡಿ, ದೇವಕಿ, ಲಕ್ಷ್ಮಣ ಗೌಡ, ಜಯಶ್ರೀ, ನೆಬಿಸಾ, ಪುಷ್ಪಾ, ಡೊಂಬಯ ಗೌಡ, ಮಂಜುನಾಥ್, ನಾರಾಯಣ, ಶೇಖರ ವೇಣೂರು, ಸಂಜೀವ ನಾಯ್ಕ, ಮುಹಮ್ಮದ್ ಅನಸ್, ಈಶ್ವರಿ, ಕೇಶವ ಗೌಡ, ಈಶ್ವರಿ, ಧನಂಜಯ ಗೌಡ, ರಾಮಚಂದ್ರ ವಸಂತ ಟೈಲರ್ ಮನೆಗಳಲ್ಲೇ ಮೇ ದಿನ ಆಚರಿಸಿದರು.

ಈ ಮಧ್ಯೆ ಹಿರಿಯ ಕಮ್ಯುನಿಸ್ಟ್ ನಾಯಕ, ನ್ಯಾಯವಾದಿ ಬಿ.ಎಂ.ಭಟ್ ಕಾರ್ಮಿಕ ವರ್ಗಕ್ಕೆ ಸ್ವಾತಂತ್ರ್ಯದ ದಾರಿ ತೋರಿಸಿದ ಮರೆಯಲಾಗದ ದಿನವಿದು. ಕಾರ್ಮಿಕರು ಕೆಂಬಾವುಟ ಹಿಡಿದು ಶೋಷಣೆ ವಿರುದ್ಧ ಹೋರಾಡುವ ಪ್ರತಿಜ್ಞೆಗೈಯಬೇಕು. ಕೆಂಬಾವುಟದ ಮಹತ್ವವನ್ನು ಜಗತ್ತಿಗೆ ಸಾರಬೇಕು. ವಿಶ್ವದ ಎಲ್ಲಾ ಕಾರ್ಮಿಕರು ಒಂದಾಗಿ ಸಾಮ್ರಾಜ್ಯಶಾಹಿಗೆ, ಕೋಮುವಾದಕ್ಕೆ ದಿಕ್ಕಾರ ಕೂಗಿದ ಈ ದಿನ ಕೊರೋನ ವೈರಸ್ ವಿರುದ್ಧವೂ ಹೋರಾಟ ಮುಂದುವರಿಸಬೇಕು. ಪರಿಸರ ಸಂರಕ್ಷಣೆ ಜೊತೆಗೆ ಕನಿಷ್ಟ ವೇತನ ಜಾರಿಗಾಗಿ, ಬಾಕಿ ಇರುವ ವೇತನ, ಡಿ.ಎ., ಗ್ರಾಚ್ಯುಟಿ ಪಡೆಯಲಿಕ್ಕಾಗಿ ಹೋರಾಟ ಮುಂದುವರಿಸಬೇಕು ಎಂದರು.

ಕೊರೋನ ವೈರಸ್ ತಡೆಯುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ಲಾಕ್‌ಡೌನ್ ಜೊತೆಗೆ ಜನರು ಹಸಿವೆಯಿಂದ ನರಳದಂತೆ ನೋಡಿಕೊಳ್ಳುವುದು, ಬೆಲೆ ಏರಿಕೆಗೆ ಕಡಿವಾಣ ಹಾಕುವುದು ಸರಕಾರದ ಕರ್ತವ್ಯವಾಗಿತ್ತು. ಇದರಲ್ಲಿ ಸರಕಾರ ಎಡವಿದೆ. ಜನವರಿಯಿಂದಲೇ ಕೊರೋನ ವಿರುದ್ದ ಹೋರಾಟ ಆರಂಭಿಸಿದ್ದರೆ ಭಾರತಕ್ಕೆ ಇಂದು ಈ ಸಂಕಷ್ಟ ಬರುತ್ತಿರಲಿಲ್ಲ ಎಂದ ಬಿಎಂ ಭಟ್ ಬಿಸಿಯೂಟ, ಅಂಗನವಾಡಿ ಅಟೋ ಮತ್ತಿತರ ವಾಹನಗಳ ಚಾಲಕರು, ಕಟ್ಟಡ, ಕೃಷಿಕೂಲಿ, ಬೀಡಿ ಕಾರ್ಮಿಕರಿಗೆ ಸರಕಾರ ಉಚಿತ ಪ್ಯಾಕೇಜು ನೀಡಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X