Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರ ನಂತರ ಇದೀಗ ಸಿಖ್ಖರನ್ನು...

ಮುಸ್ಲಿಮರ ನಂತರ ಇದೀಗ ಸಿಖ್ಖರನ್ನು ‘ಕೊರೋನ ಹರಡುವವರು’ ಎನ್ನುತ್ತಿರುವ ಮಾಧ್ಯಮಗಳು, ಟ್ರೋಲ್ ಗಳು

ವಾರ್ತಾಭಾರತಿವಾರ್ತಾಭಾರತಿ2 May 2020 4:35 PM IST
share
ಮುಸ್ಲಿಮರ ನಂತರ ಇದೀಗ ಸಿಖ್ಖರನ್ನು ‘ಕೊರೋನ ಹರಡುವವರು’ ಎನ್ನುತ್ತಿರುವ ಮಾಧ್ಯಮಗಳು, ಟ್ರೋಲ್ ಗಳು

ಅಮೃತಸರ್: ಪಂಜಾಬ್ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿರುವ ಬೆಳವಣಿಗೆ ಮತೀಯ ಬಣ್ಣ ಪಡೆದುಕೊಂಡಿದೆ. ನಂದೇಡ್‍ ನಿಂದ ವಾಪಸಾದ ಸಿಖ್ ತೀರ್ಥಯಾತ್ರಿಗಳನ್ನು ಇದೀಗ ಕೆಲ ಮಾಧ್ಯಮಗಳು ಹಾಗೂ ಕೆಲ ಸಾಮಾಜಿಕ ಜಾಲತಾಣಿಗರು ದೂರುತ್ತಿದ್ದಾರೆ.

ಉದಾಹರಣೆಗೆ ಎಬಿಪಿ ನ್ಯೂಸ್ ಈ ಬೆಳವಣಿಗೆಗೆ ‘ಕೊರೋನ ವಿಸ್ಫೋಟ್' ಅಥವಾ ಕೊರೋನ ಸ್ಫೋಟ ಎಂದು ಬಣ್ಣಿಸಿದೆ. ತಬ್ಲೀಗಿ ಜಮಾತ್‍ ನಲ್ಲಿ ಭಾಗವಹಿಸಿದವರಿಂದ ಕೊರೋನ ಹರಡಿದೆ ಎಂದು `ಕೊರೋನ ಜಿಹಾದ್'  ಪದ ಬಳಕೆ ಮಾಡಿದಂತೆಯೇ ಈಗಲೂ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ನಿಂದನೆ ಮುಂದುವರಿದಿದೆ.

ವರದಿಗಳ ಪ್ರಕಾರ ನಂದೇಡ್‍ ನಿಂದ ವಾಪಸಾದ 183 ತೀರ್ಥಯಾತ್ರಿಗಳು ಇಲ್ಲಿಯ ತನಕ ಕೋವಿಡ್-19 ಪಾಸಿಟಿವ್ ಆಗಿದ್ದಾರೆ. ಈ ಸಂಖ್ಯೆ ಪಂಜಾಬ್‍ನ ಒಟ್ಟು ಕೊರೋನ ಪ್ರಕರಣಗಳ ಪೈಕಿ ಮೂರನೇ ಒಂದಂಶದಷ್ಟಾಗಿದೆ.  ನಂದೇಡ್‍ನ ಹುಜೂರ್ ಸಾಹಿಬ್ ಗುರುದ್ವಾರದಲ್ಲಿ ಲಾಕ್ ಡೌನ್‍ನಿಂದಾಗಿ ಸಿಕ್ಕಿ ಹಾಕಿಕೊಂಡಿದ್ದ ಸುಮಾರು 4,000 ತೀರ್ಥಯಾತ್ರಿಗಳನ್ನು ವಾಪಸ್ ಕರೆತರಲು ಸರಕಾರ ಕ್ರಮ ಕೈಗೊಂಡಿತ್ತು.

ಆದರೆ ಮಹಾರಾಷ್ಟ್ರ ಸರಕಾರ ನೀಡಿದ ಮಾಹಿತಿಯಂತೆ ನಂದೇಡ್ ಜಿಲ್ಲೆಯಲ್ಲಿ ಇಲ್ಲಿಯ ತನಕ ಕೇವಲ ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳಿವೆ. ಆದರೆ ಪಂಜಾಬ್‍ ಗೆ ಆಗಮಿಸಿದ ನಂತರ ಹಲವರು ಕೊರೋನ ಪಾಸಿಟಿವ್ ಆದರೆಂದರೆ ಮಹಾರಾಷ್ಟ್ರದಲ್ಲಿ ಅವರನ್ನು ಸೂಕ್ತವಾಗಿ ತಪಾಸಣೆ ನಡೆಸಲಾಗಿಲ್ಲವೇ ಎಂಬ ಪ್ರಶ್ನೆಯೂ ಇದೆ.

ದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಧಕ್ಕೆಯುಂಟು ಮಾಡುವ ಉದ್ದೇಶದಿಂದಲೇ ನಿಂದನೆಗಳನ್ನು ಮಾಡಲಾಗುತ್ತಿದೆ ಎಂದು ಅಕಾಲ್ ತಖ್ತ್‍ನ ಜಾತೆದಾರ್ ಗಿಯಾನಿ ಹರಪ್ರೀತ್ ಸಿಂಗ್  ಹೇಳುತ್ತಾರೆ. “ತಬ್ಲೀಗಿ ಜಮಾತ್ ನೆಪವಾಗಿಟ್ಟುಕೊಂಡು ಮುಸ್ಲಿಂ ಸಮುದಾಯವನ್ನು ದೂರಿದಂತೆ ಇದೀಗ ಸಿಖ್ ಸಮುದಾಯವನ್ನು ನಂದೇಡ್ ನೆಪವಾಗಿಟ್ಟುಕೊಂದು ದೂಷಿಸಲಾಗುತ್ತಿದೆ. ಇದೊಂದು ಸಂಚು'' ಎಂದು ಅವರು ಹೇಳುತ್ತಾರೆ.

“ನಂದೇಡ್‍ನಲ್ಲಿ ಕೇವಲ 3 ಕೊರೋನ ಪಾಸಿಟಿವ್ ಪ್ರಕರಣ ಇತ್ತೆಂದಾದರೆ ಇವರೆಲ್ಲರೂ ಪಂಜಾಬ್‍ ಗೆ ಆಗಮಿಸಿದ ಕೂಡಲೇ ಹೇಗೆ ಕೊರೋನ ಪತ್ತೆ ಪರೀಕ್ಷೆಯಲ್ಲಿ ಪಾಸಿಟಿವ್ ಆದರು?'' ಎಂದು ಅವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X