Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವಲಯಗಳಲ್ಲಿ ಕ್ಷೌರದಂಗಡಿಗಳಿಗೂ...

ಈ ವಲಯಗಳಲ್ಲಿ ಕ್ಷೌರದಂಗಡಿಗಳಿಗೂ ಲಾಕ್‌ಡೌನ್‌ನಿಂದ ವಿನಾಯಿತಿ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ2 May 2020 9:06 PM IST
share
ಈ ವಲಯಗಳಲ್ಲಿ ಕ್ಷೌರದಂಗಡಿಗಳಿಗೂ ಲಾಕ್‌ಡೌನ್‌ನಿಂದ ವಿನಾಯಿತಿ ಭಾಗ್ಯ

ಹೊಸದಿಲ್ಲಿ,ಮೇ 2: ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಸೋಮವಾರದಿಂದ ಆರಂಭಗೊಳ್ಳುವ ಮೂರನೇ ಹಂತದ ಲಾಕ್‌ಡೌನ್ ಅವಧಿಯಲ್ಲಿ ಗ್ರೀನ್ ಮತ್ತು ಆರೆಂಜ್ ವಲಯಗಳಲ್ಲಿ ಕ್ಷೌರದಂಗಡಿಗಳು ಮತ್ತು ಸೆಲೂನ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಶನಿವಾರ ಸ್ಪಷ್ಟಪಡಿಸಿದೆ. ಜೊತೆಗೆ ಇ-ಕಾಮರ್ಸ್ ವೇದಿಕೆಗಳ ಮೂಲಕ ಅತ್ಯಗತ್ಯವಲ್ಲದ ಸರಕುಗಳ ಮಾರಾಟಕ್ಕೂ ಅವಕಾಶ ದೊರೆಯಲಿದೆ.

 ಮೇ 3ಕ್ಕೆ ಅಂತ್ಯಗೊಳ್ಳಬೇಕಾಗಿದ್ದ ಎರಡನೇ ಹಂತದ ಲಾಕ್‌ಡೌನ್ ಅನ್ನು ಶುಕ್ರವಾರ ಮೇ 17ರವರೆಗೆ ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಿದ್ದ ಗೃಹ ಸಚಿವಾಲಯವು, ಗ್ರೀನ್ ಮತ್ತು ಆರೆಂಜ್ ವಲಯಗಳಲ್ಲಿನ ಹಲವಾರು ನಿರ್ಬಂಧಗಳನ್ನು ಹಿಂದೆಗೆದುಕೊಂಡಿತ್ತು.

ಗ್ರೀನ್ ಮತ್ತು ಆರೆಂಜ್ ವಲಯಗಳಲ್ಲಿ ಇ-ಕಾಮರ್ಸ್ ವೇದಿಕೆಗಳಿಂದ ಅತ್ಯಗತ್ಯವಲ್ಲದ ಸರಕುಗಳ ಮಾರಾಟಕ್ಕೆ ನಿರ್ಬಂಧವಿಲ್ಲ ಮತ್ತು ಈ ವಲಯಗಳಲ್ಲಿ ಕ್ಷೌರದಂಗಡಿ ಮತ್ತು ಸೆಲೂನ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ರೆಡ್ ಝೋನ್‌ಗಳಲ್ಲಿ ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಇ-ಕಾಮರ್ಸ್ ಕಂಪನಿಗಳಿಗೆ ಅವಕಾಶ ನೀಡಲಾಗಿದೆ.

ಕ್ಷೌರದಂಗಡಿಗಳು ಮತ್ತು ಸೆಲೂನ್‌ಗಳು ಸರಕುಗಳಾಗಿರದೆ ಸೇವೆಗಳಾಗಿರುವುದರಿಂದ ರೆಡ್ ಝೋನ್‌ಗಳಲ್ಲಿ ಇವುಗಳನ್ನು ತೆರೆಯಲು ಅವಕಾಶ ನೀಡಲಾಗಿಲ್ಲ.

ರೆಡ್ ಝೋನ್‌ಗಳಲ್ಲಿ ಮನೆಗೆಲಸದಾಳುಗಳಿಗೆ ಕೆಲಸಕ್ಕೆ ಅವಕಾಶ ನೀಡುವ ಕುರಿತಂತೆ ಗೃಹ ಸಚಿವಾಲಯದ ಅಧಿಕಾರಿ,ಹೊರಗಿನವರ ಚಲನವಲನಗಳಿಗೆ ಅವಕಾಶ ನೀಡುವ ಕುರಿತು ಅಪಾರ್ಟ್‌ಮೆಂಟ್‌ಗಳ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್‌ಡಬ್ಲುಎ)ಗಳು ತೀರ್ಮಾನ ಕೈಗೊಳ್ಳಬೇಕು. ಮನೆಗೆಲಸದಾಳುಗಳು ಮತ್ತು ಮಾಲಿಕರು ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸಬೇಕು. ಏನಾದರೂ ಅವಘಡಗಳು ಸಂಭವಿಸಿದರೆ ಹೊಣೆಗಾರಿಕೆ ಮನೆಗೆಲಸದಾಳನ್ನು ನೇಮಿಸಿಕೊಂಡಿರುವ ವ್ಯಕ್ತಿಯದ್ದಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಕೋವಿಡ್-19 ಅಪಾಯ ಮಟ್ಟಗಳನ್ನು ಆಧರಿಸಿ ದೇಶವ್ಯಾಪಿ ಜಿಲ್ಲೆಗಳನ್ನು ರೆಡ್,ಆರೆಂಜ್ ಮತ್ತು ಗ್ರೀನ್ ವಲಯಗಳನ್ನಾಗಿ ವರ್ಗೀಕರಿಸಲಾಗಿದೆ. ಈವರೆಗೆ ಯಾವುದೇ ದೃಢೀಕೃತ ಕೊರೋನ ವೈರಸ್ ಪ್ರಕರಣ ಇಲ್ಲದಿದ್ದರೆ ಅಥವಾ ಕಳೆದ 21 ದಿನಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿರದಿದ್ದರೆ ಆ ಜಿಲ್ಲೆಯನ್ನು ಗ್ರೀನ್ ವಲಯವೆಂದು ಪರಿಗಣಿಸಲಾಗುತ್ತದೆ.

ಮೇ 17ರವರೆಗೆ ವಿಮಾನಯಾನ ಸ್ಥಗಿತ

ಗೃಹ ಸಚಿವಾಲಯವು ದೇಶವ್ಯಾಪಿ ಲಾಕ್‌ಡೌನ್ ಅನ್ನು ಮೇ 4ರಿಂದ ಇನ್ನೂ ಎರಡು ವಾರಗಳ ಅವಧಿಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ನಾಗರಿಕ ವಾಯುಯಾನ ಮಹಾನಿರ್ದೇಶನಾಲಯ(ಡಿಜಿಸಿಎ)ವು ಮೇ 17ರವರೆಗೆ ಎಲ್ಲ ದೇಶಿಯ ಮತ್ತು ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಯಾನಗಳನ್ನು ಅಮಾನತುಗೊಳಿಸಿ ಶನಿವಾರ ಸುತ್ತೋಲೆಯನ್ನು ಹೊರಡಿಸಿದೆ.

ಆದರೆ,ಈ ನಿರ್ಬಂಧವು ಡಿಜಿಸಿಎ ಅನುಮತಿಯೊಂದಿಗೆ ಕಾರ್ಯಾಚರಿಸುವ ಅಂತರರಾಷ್ಟ್ರೀಯ ಸರಕು ಸಾಗಣೆ ವಿಮಾನಯಾನಗಳಿಗೆ ಅನ್ವಯಿಸುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X