Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಕೋಮುದ್ವೇಷದ ಪೋಸ್ಟ್ ಮಾಡಿದ...

ಯುಎಇ: ಕೋಮುದ್ವೇಷದ ಪೋಸ್ಟ್ ಮಾಡಿದ ಕಿನ್ನಿಗೋಳಿಯ ಯುವಕ ಸೇರಿ ಮೂವರ ವಿರುದ್ಧ ಕ್ರಮ

ಕೆಲಸದಿಂದ ಅಮಾನತು

ವಾರ್ತಾಭಾರತಿವಾರ್ತಾಭಾರತಿ2 May 2020 10:57 PM IST
share
ಯುಎಇ: ಕೋಮುದ್ವೇಷದ ಪೋಸ್ಟ್ ಮಾಡಿದ ಕಿನ್ನಿಗೋಳಿಯ ಯುವಕ ಸೇರಿ ಮೂವರ ವಿರುದ್ಧ ಕ್ರಮ

ದುಬೈ: ದ್ವೇಷದ ಪೋಸ್ಟ್ ಗಳ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಎಚ್ಚರಿಕೆ ನೀಡಿದ್ದರೂ ದ್ವೇಷ ಹಂಚುವುದನ್ನು ಮುಂದುವರಿಸಿದ ಮೂವರು ಅನಿವಾಸಿ ಭಾರತೀಯರ ವಿರುದ್ಧ ಯುಎಇಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು gulfnews.com ವರದಿ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಮೋಫೋಬಿಯಾ ಪೋಸ್ಟ್ ಗಳನ್ನು ಹಾಕಿದ್ದಕ್ಕಾಗಿ ಕಳೆದೊಂದು ವಾರದಲ್ಲಿ ಕನಿಷ್ಟ ಮೂವರು ಅನಿವಾಸಿ ಭಾರತೀಯರನ್ನು ಉದ್ಯೋಗದಿಂದ ಅಮಾನತುಗೊಳಿಸಲಾಗಿದೆ ಅಥವಾ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇಟಾಲಿಯನ್ ಶೆಫ್ ರಾವತ್ ರೋಹಿತ್, ಸ್ಟೋರ್ ಕೀಪರ್ ಸಚಿನ್ ಕಿನ್ನಿಗೋಳಿ ಮತ್ತು ಇನ್ನೊಬ್ಬನ ವಿರುದ್ಧ ಯುಎಇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

ದ್ವೇಷದ ಪೋಸ್ಟ್ ಹಾಕಿದ್ದಕ್ಕಾಗಿ ರಾವತ್ ರೋಹಿತ್ ಎಂಬಾತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದ್ದು, ಶಿಸ್ತುಕ್ರಮ ಕೈಗೊಳ್ಳುವ ಕುರಿತು ತನಿಖೆ ನಡೆಯುತ್ತಿದೆ ಎಂದು ದುಬೈಯ ಇಟಾಲಿಯನ್ ರೆಸ್ಟೋರೆಂಟ್ ಚೈನ್ ಆದ ಅಝಾದಿಯಾ ಗ್ರೂಪ್ ಮಾಹಿತಿ ನೀಡಿದೆ.

ಶಾರ್ಜಾ ಮೂಲದ ನ್ಯೂಮಿಕ್ಸ್ ಆಟೋಮೇಶನ್ ನಲ್ಲಿ ಉದ್ಯೋಗದಲ್ಲಿದ್ದ ಸ್ಟೋರ್ ಕೀಪರ್ ಸಚಿನ್ ಕಿನ್ನಿಗೋಳಿ ಎಂಬಾತನನ್ನು ಅಮಾನತುಗೊಳಿಸಲಾಗಿದೆ ಎಂದು ಸಂಸ್ಥೆಯು ಸ್ಪಷ್ಟಪಡಿಸಿದೆ.

“ನಾವು ಆತನ ವೇತನವನ್ನು ತಡೆ ಹಿಡಿದಿದ್ದೇವೆ ಮತ್ತು ಕೆಲಸಕ್ಕೆ ಬರದಂತೆ ತಿಳಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇಂತಹದ್ದನ್ನು ನಾವು ಸಹಿಸುವುದಿಲ್ಲ. ಬೇರೆ ಯಾವುದೇ ಧರ್ಮವನ್ನು ನಿಂದಿಸಿದರೆ ಅಂತಹವು ಕಠಿಣ ಕ್ರಮಗಳನ್ನು ಎದುರಿಸಬೇಕಾದೀತು” ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ವಿಶಾಲ್ ಠಾಕೂರ್ ಹೆಸರಿನಲ್ಲಿ ತನ್ನ ಫೇಸ್‌ಬುಕ್ ಪುಟದಲ್ಲಿ ಹಲವಾರು ಇಸ್ಲಾಮ್ ವಿರೋಧಿ ಸಂದೇಶಗಳನ್ನು ಹಾಕಿರುವ ಉದ್ಯೋಗಿಯೊಬ್ಬನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ದುಬೈಯ ಟ್ರಾನ್ಸ್‌ಗಾರ್ಡ್ ಗ್ರೂಪ್ ತಿಳಿಸಿದೆ.

ಆಂತರಿಕ ವಿಚಾರಣೆಯ ಬಳಿಕ, ಈ ಉದ್ಯೋಗಿಯ ಅಸಲಿ ಗುರುತನ್ನು ಪತ್ತೆಹಚ್ಚಲಾಯಿತು. ಆತನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಹಾಗೂ ಯುಎಇ ಸೈಬರ್ ಅಪರಾಧ ಕಾನೂನಿನ ಅನ್ವಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಅವನು ಈಗ ದುಬೈ ಪೊಲೀಸರ ಸುಪರ್ದಿಯಲ್ಲಿದ್ದಾನೆ ಎಂದು ಗಲ್ಫ್ ನ್ಯೂಸ್‌ಗೆ ನೀಡಿದ ಹೇಳಿಕೆಯೊಂದರಲ್ಲಿ ಟ್ರಾನ್ಸ್‌ಗಾರ್ಡ್ ವಕ್ತಾರರೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X