Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಯೋಧರಿಗೆ ಗೌರವ ಸಲ್ಲಿಸಲು ಹೂಗಳ...

ಕೊರೋನ ಯೋಧರಿಗೆ ಗೌರವ ಸಲ್ಲಿಸಲು ಹೂಗಳ ಸುರಿಮಳೆಗರೆದ ಸಶಸ್ತ್ರ ಪಡೆಗಳು

ವಾರ್ತಾಭಾರತಿವಾರ್ತಾಭಾರತಿ3 May 2020 11:31 AM IST
share
ಕೊರೋನ ಯೋಧರಿಗೆ ಗೌರವ ಸಲ್ಲಿಸಲು ಹೂಗಳ ಸುರಿಮಳೆಗರೆದ ಸಶಸ್ತ್ರ ಪಡೆಗಳು

ಹೊಸದಿಲ್ಲಿ, ಮೇ 3: ದೇಶಾದ್ಯಂತ ಕೊರೋನ ವೈರಸ್ ಮಹಾಮಾರಿಯ ವಿರುದ್ಧ ತಮ್ಮ ಪ್ರಾಣವನ್ನೇ ಪಣವಿಟ್ಟು ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಭಾರತೀಯ ವಾಯುಪಡೆ ರವಿವಾರ ದೇಶಾದ್ಯಂತ ವಿಶೇಷ ವಿಮಾನ ಹಾರಾಟಗಳನ್ನು ನಡೆಸಿ ಗೌರವ ಸಲ್ಲಿಸಿತು.

ಮೊದಲಿಗೆ ಜಮ್ಮುಕಾಶ್ಮೀರದ ಶ್ರೀನಗರ ದಾಲ್‌ಸರೋವರದ ಬಳಿ ವಾಯುಪಡೆಯು ಹಾರಾಟ ನಡೆಸಿ ಕೋವಿಡ್ ವೀರರಿಗೆ ಗೌರವನಮನ ಸಲ್ಲಿಸಿತು.

 ಹರ್ಯಾಣದ ಪಂಚಕುಲದಲ್ಲಿರುವ ಸರಕಾರಿ ಆಸ್ಪತ್ರೆಯ ಮೇಲೆ ಬಾನಿನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದ್ದಾಗ, ಭಾರತೀಯ ಸೇನೆಯ ಬ್ಯಾಂಡ್ ತಂಡವು ವಾದ್ಯಘೋಷಗಳನ್ನು ನಡೆಸಿತು. ಮುಂಬೈ, ಜೈಪುರ, ಲೇಹ್, ಚಂಡೀಗಢ, ಡೆಹ್ರಾಡೂನ್, ಪಟ್ನಾ, ಲಕ್ನೋ ಸೇರಿದಂತೆ ಕೋವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳ ಮೇಲೆ ವಾಯುಪಡೆಯ ಹೆಲಿಕಾಪ್ಟರ್‌ಗಳು ಹಾರಾಟ ನಡೆಸಿ ಪುಷ್ಪವೃಷ್ಟಿಗರೆದವು.

ಪಣಜಿಯಲ್ಲಿ ಗೋವಾ ಮೆಡಿಕಲ್‌ ಕಾಲೇಜ್ ಆಸ್ಪತ್ರೆಯಲ್ಲಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್‌ಗಳು ಹೂ ಮಳೆಗರೆದವು ಮತ್ತು ಸಮುದ್ರದಲ್ಲಿ ಲಂಗರುಹಾಕಿರುವ ನೌಕಾಪಡೆಯ ಹಡಗುಗಳು ದೀಪಗಳನ್ನು ಬೆಳಗಿಸಿ, ಕೋರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಲಕ್ಷಾಂತರ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತಿತರ ಮುಂಚೂಣಿಯ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಿತು.

ದಿಲ್ಲಿಯ ರಾಜ್‌ಪಥ್‌ನಲ್ಲಿ ವಾಯುಪಡೆಯ ಸುಖೋಯ್-30 ಎಂಕೆಐ, ಮಿಗ್-29 ಹಾಗೂ ಜಾಗ್ವಾರ್ ಯುದ್ಧ ವಿಮಾನಗಳನ್ನು ಆಗಸದಲ್ಲಿ ಸುಮಾರು 30 ನಿಮಿಶಗಳ ಕಾಲ ವಿಶೇಷ ವ್ಯೆಹವನ್ನು ರಚಿಸಿ ಹಾರಾಟ ನಡೆಸಿದವು.

 ಕೋರೋನಾ ವೀರರಿಗೆ ಕೃತಜ್ಞತೆ ಅರ್ಪಿಸಲು ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಯು ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆಯೆಂದು ತ್ರಿಪಡೆಗಳ ವರಿಷ್ಠ ಬಿಪಿನ್ ರಾವತ್ ಶುಕ್ರವಾರ ಪ್ರಕಟಿಸಿದ್ದರು.

ದಿಲ್ಲಿ ಮತ್ತಿತರ ನಗರಗಳಲ್ಲಿ ಪೊಲೀಸ್ ಸ್ಮಾರಕಗಳಿಗೆ ಪುಷ್ಪಗುಚ್ಛಗಳನ್ನು ಇರಿಸುವ ಮೂಲಕ ಕೋವಿಡ್ ವೀರರಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮಗಳು ಆರಂಭಗೊಂಡವು.

ಚಂಡೀಗಢ, ಭೋಪಾಲ್, ಮುಂಬೈ, ಹೈದರಾಬಾದ್, ಬೆಂಗಳೂರು, ಕೊಯಮತ್ತೂರು ಹಾಗೂ ತಿರುವನಂತಪುರಂ ಸೇರಿದಂತೆ ಹಲವು ನಗರಗಳಲ್ಲಿ ವಾಯುಪಡೆಯ ಫೈಟರ್ ಜೆಟ್‌ಗಳು ವಿಶೇಷ ಹಾರಾಟಗಳನ್ನು ನಡೆಸಿ ಕೊರೋನ ಯೋಧರಿಗೆ ಗೌರವಾರ್ಪಣೆ ಸಲ್ಲಿಸಿದವು.

ದೇಶಾದ್ಯಂತ ವಿವಿಧೆಡೆ ಸೇನಾಪಡೆಯ ಬ್ಯಾಂಡ್‌ಗಳು ಕೊರೋನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳ ಹೊರಗಡೆ ವಾದ್ಯಘೋಷ ನಡೆಸಿದವು.

ಕೊರೋನಾ ವೈರಸ್ ಪಿಡುಗನ್ನು ನಿಭಾಯಿಸುವಲ್ಲಿ ಇಡೇ ದೇಶವು ಒಗ್ಗಟ್ಟಾಗಿ ನಿಂತುಕೊಂಡಿದೆ ಹಾಗೂ ಪ್ರತಿರೋಧವನ್ನು ಪ್ರದರ್ಶಿಸಿದೆ. ಭಾರತೀಯ ಸಶಸ್ತ್ರಪಡೆಗಳ ಪರವಾಗಿ ವೈದ್ಯರು,ನರ್ಸ್‌ಗಳು, ನೈರ್ಮಲ್ಯ ಕಾರ್ಮಿಕರು, ಪೊಲೀಸರು, ಗೃಹರಕ್ಷಕದಳ,ಡೆಲಿವರಿ ಬಾಯ್‌ಗಳು ಹಾಗೂ ಮಾಧ್ಯಮ ಮಂದಿಗೆ ಕೃತಜ್ಞತೆಯನ್ನು ಅರ್ಪಿಸಲು ಬಯಸುತ್ತೇವೆ.

ಜನರಲ್ ರಾವತ್, ತ್ರಿಪಡೆಗಳ ಸೇನಾ ವರಿಷ್ಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X