Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಮೇ 4ರಿಂದ ಮದ್ಯ...

ಉಡುಪಿ ಜಿಲ್ಲೆಯಲ್ಲಿ ಮೇ 4ರಿಂದ ಮದ್ಯ ಮಾರಾಟ ಆರಂಭ

ಅಬಕಾರಿ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ: ಏಳು ತಂಡಗಳ ರಚನೆ

ವಾರ್ತಾಭಾರತಿವಾರ್ತಾಭಾರತಿ3 May 2020 9:03 PM IST
share
ಉಡುಪಿ ಜಿಲ್ಲೆಯಲ್ಲಿ ಮೇ 4ರಿಂದ ಮದ್ಯ ಮಾರಾಟ ಆರಂಭ

ಉಡುಪಿ, ಮೇ 5: ಕೋವಿಡ್ -19ಗೆ ಸಂಬಂಧಿಸಿ ಹಸಿರು ವಲಯ ಆಗಿ ರುವ ಉಡುಪಿ ಜಿಲ್ಲೆಯ ನಾಳೆಯಿಂದ ಮದ್ಯ ಮಾರಾಟ ಆರಂಭವಾಗ ಲಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಯಾವುದೇ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಯಾಗದಂತೆ ತಡೆಯಲು ಅಬಕಾರಿ ಇಲಾಖೆಯಿಂದ ಏಳು ತಂಡ ಗಳನ್ನು ರಚಿಸಲಾಗಿದೆ.

ಜಿಲ್ಲೆಯಲ್ಲಿರುವ ಒಟ್ಟು 399 ಮದ್ಯ ಮಾರಾಟ ಮಳಿಗೆಗಳ ಪೈಕಿ 14 ಎಂಎಸ್‌ಐಎಲ್ ಮಳಿಗೆ ಹಾಗೂ 89 ವೈನ್‌ಶಾಪ್‌ಗಳು ಸೇರಿದಂತೆ ಒಟ್ಟು 103 ಮಳಿಗೆಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲು ಅವಕಾಶ ಕಲ್ಪಿಸ ಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ತಿಂಗಳುಗಳ ಕಾಲ ಮದ್ಯ ಸಿಗದ ಕಾರಣ ಒಮ್ಮೆಲೆ ನೂಕುನುಗ್ಗಲು ಉಂಟಾ ಗುವ ಸಾಧ್ಯತೆಗಳಿರುವುದರಿಂದ ಕೆಲವು ಮದ್ಯದಂಗಡಿಗಳ ಎದುರು ಬ್ಯಾರಿಕೇಡ್ ಗಳನ್ನು ಆಳವಡಿಸಲಾಗಿದೆ. ಈ ಸಂಬಂಧ ಸಾಕಷ್ಟು ಎಚ್ಚರ ವಹಿಸುವಂತೆ ಮದ್ಯ ಮಾರಾಟಗಾರರಿಗೆ ಈಗಾಗಲೇ ಸಭೆ ಕರೆದು ಸೂಚನೆ ನೀಡಲಾಗಿದೆ. ಸುರಕ್ಷಿತ ಅಂತರ ಕಾಪಾಡುವ ನಿಟ್ಟಿನಲ್ಲಿ ಒಂದು ಮೀಟರ್ ಅಂತರದಲ್ಲಿ ಗುರುತುಗಳನ್ನು ಹಾಕಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ತಿಳಿಸಿದ್ದಾರೆ.

ಮದ್ಯ ಖರೀದಿಸಲು ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಳಿಗೆ ತೆರೆಯುವ ಮುನ್ನ ಮತ್ತು ಬಂದ್ ಮಾಡಿದ ಬಳಿಕ ಸ್ಯಾನಿಟೈಜರ್ ಮಾಡಲು ಮಾಲಕರಿಗೆ ತಿಳಿಸಲಾಗಿದೆ. ಶಾಪ್‌ಗಳ ಸೀಲ್ ಓಪನ್ ಮಾಡುವ ಸಂದರ್ಭ ಬಹುತೇಕ ಕಡೆಗಳಲ್ಲಿ ನಮ್ಮ ಸಿಬ್ಬಂದಿಗಳು ಹಾಜರಿರುತ್ತಾರೆ. ಈ ಬಾರಿಯ ಬಜೆಟ್‌ನಲ್ಲಿ ಏರಿಕೆ ಮಾಡಲಾದ ಶೇ.6ರಷ್ಟು ಮದ್ಯದ ದರ ಏಪ್ರಿಲ್ ಒಂದರಿಂದ ಜಾರಿಗೆ ಬಂದಿದ್ದು, ಅದರಂತೆ ಮದ್ಯ ಮಾರಾಟ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ನಿಯಮ ಉಲ್ಲಂಘಿಸಿದರೆ ಕ್ರಮ

ಸದ್ಯ ಎಂಎಸ್‌ಐಎಲ್ ಮಳಿಗೆ ಹಾಗೂ ವೈನ್‌ಶಾಪ್‌ಗಳಿಗೆ ಮಾತ್ರ ತೆರೆ ಯಲು ಅವಕಾಶ ನೀಡಲಾಗಿದ್ದು, ಉಳಿದಂತೆ ಇತರ ಮದ್ಯದಂಗಡಿ ಹಾಗೂ ಬಾರ್‌ಗಳು ವ್ಯಾಪಾರ ನಡೆಸಿದರೆ ಅವುಗಳ ಪರಾವನಿಗೆಯನ್ನು ರದ್ದುಗೊಳಿಸ ಲಾಗುವುದು ಎಂದು ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ತಿಳಿಸಿದ್ದಾರೆ.

ಎಂಎಸ್‌ಐಎಲ್ ಮಳಿಗೆ ಹಾಗೂ ವೈನ್‌ಶಾಪ್‌ಗಳಲ್ಲಿ ಈಗಾಗಲೇ ಸೂಚಿಸಿ ರುವ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅವುಗಳ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಏಳು ತಂಡಗಳು ಜಿಲ್ಲೆಯಾದ್ಯಂತ ಕಾರ್ಯಾಚರಿಸಲಿವೆ. ಆದೇಶದ ಪ್ರಕಾರ ಬೆಳಗ್ಗೆ 9ಗಂಟೆ ಯಿಂದ ಸಂಜೆ 7ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಜಿಲ್ಲೆಯಲ್ಲಿ ಇತರ ಅಂಗಡಿಗಳು ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ತೆರೆದಿಡಲು ಅವಕಾಶ ಇರುವುದರಿಂದ ಇದಕ್ಕೂ ಅದೇ ಸಮಯವನ್ನು ನಿಗದಿ ಪಡಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X