ಮೇ 5, 6: ನೀರು ಸರಬರಾಜಿನಲ್ಲಿ ವ್ಯತ್ಯಯ
ಮಂಗಳೂರು, ಮೇ 4: ಮಂಗಳೂರು ಮಹಾನರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಹೆಚ್ಎಲ್ಪಿಎಸ್-2 ಮತ್ತು ಎಲ್ಎಲ್ಪಿಎಸ್-2 ಸ್ಥಾವರಗಳಿಗೆ ವಿದ್ಯುತ್ ಪೂರೈಕೆ ಮಾಡುವ 33 ಕೆ.ವಿ ತಂತಿಗಳನ್ನು ಮೆಸ್ಕಾಂ ವತಿಯಿಂದ ಸ್ಥಳಾಂತರಿಸುವ ಕೆಲಸವನ್ನು ಮೇ 5ರಂದು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಮೇ 5ರಂದು ಬೆಳಗ್ಗೆ 8 ಗಂಟೆಯಿಂದ ಮೇ 6 ರಂದು ಬೆಳಗ್ಗೆ 8 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್ ಸ್ಥಾವರದಿಂದ ನೀರು ಪಡೆಯುವ ಪ್ರದೇಶಗಳಾದ ಬಜಾಲ್, ಪಡೀಲ್, ಶಕ್ತಿನಗರ, ಮಂಗಳಾದೇವಿ, ಪಾಂಡೇಶ್ವರ,ಕರಾವಳಿ ಸ್ಥಾವರ ಪ್ರದೇಶಗಳು ಕಣ್ಣೂರು, ಶಕ್ತಿನಗರ, ಬೋಂದೆಲ್, ಮರಕಡ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದು ಎಂದು ಮನಪಾ ಪ್ರಕಟನೆಯಲ್ಲಿ ತಿಳಿಸಿದೆ.
Next Story





