Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಷರತ್ತುಗಳಿಗೆ ಒಳಪಟ್ಟು ಮಲ್ಟಿಬ್ರಾಂಡ್...

ಷರತ್ತುಗಳಿಗೆ ಒಳಪಟ್ಟು ಮಲ್ಟಿಬ್ರಾಂಡ್ ಅಂಗಡಿ ತೆರೆಯಲು ಅನುಮತಿ: ಉಡುಪಿ ಡಿಸಿ ಜಗದೀಶ್

ವಾರ್ತಾಭಾರತಿವಾರ್ತಾಭಾರತಿ4 May 2020 6:21 PM IST
share
ಷರತ್ತುಗಳಿಗೆ ಒಳಪಟ್ಟು ಮಲ್ಟಿಬ್ರಾಂಡ್ ಅಂಗಡಿ ತೆರೆಯಲು ಅನುಮತಿ: ಉಡುಪಿ ಡಿಸಿ ಜಗದೀಶ್

ಉಡುಪಿ, ಮೇ 4: ಕೋವಿಡ್-19ರ ನಿಯಂತ್ರಣದ ಕುರಿತಂತೆ ತಾತ್ಕಾಲಿಕ ನಿಯಮಾವಳಿಗಳನ್ನು ಹೊರಡಿಸಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಇವುಗಳಲ್ಲಿ ಜನಸಂದಣೆ ಇರುವ ಸ್ಥಳಗಳಲ್ಲಿ/ಹೆಚ್ಚು ಗ್ರಾಹಕರು ಸೇರುವ ವಾಣಿಜ್ಯ ಮಳಿಗೆಗಳು, ಎ.ಸಿ.ಮಳಿಗೆಗಳು, ಮಾಲ್‌ಗಳನ್ನು ಮುಚ್ಚುವಂತೆ ನಿರ್ದೇಶಿಸಿರುವುದು ಸೇರಿದೆ.

ಸರಕಾರದ ಆದೇಶದಂತೆ ಕೆಲವೊಂದು ವಿಷಯಗಳಿಗೆ ವಿನಾಯಿತಿಗಳನ್ನು ನೀಡಲಾಗಿದೆ. ಈಗಾಗಲೇ ಸಿನಿಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್ ಶಾಪಿಂಗ್ ಮಾಲ್, ಎಸಿ-ಸೆಂಟ್ರಲ್ ಎಸಿ, ಸಿಂಗಲ್ ಬ್ರಾಂಡ್, ಮಲ್ಟಿ ಬ್ರಾಂಡ್, ಕ್ರೀಡಾ ಸಂಕೀರ್ಣ ಮುಂತಾದವುಗಳನ್ನು ಹೊರತು ಪಡಿಸಿ ಉಳಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಇದೀಗ ಎಸಿ, ಸೆಂಟ್ರಲ್ ಎಸಿ, ಸಿಂಗಲ್ ಬ್ರಾಂಡ್, ಮಲ್ಟಿ ಬ್ರಾಂಡ್ ಅಂಗಡಿಗಳಿಗೆ ಸಂಬಂಧಿಸಿದಂತೆ ಕೆಲವು ನಿಬಂಧನೆಗಳನ್ನು ವಿಧಿಸಿ ಪ್ರಾರಂಭಿಸಲು ಅನುಮತಿ ನೀಡುವುದು ಸೂಕ್ತವೆಂದು ನಿರ್ಧರಿಸಿದ್ದು, ಈ ಕೆಳಗಿನ ಷರತ್ತಿ ಗೊಳಪಟ್ಟು ಈ ಅಂಗಡಿಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಅನುಮತಿ ನೀಡಿದ್ದಾರೆ.

ಷರತ್ತುಗಳು

*ಚಿನ್ನಾಭರಣ ಮಳಿಗೆಗಳು, ಬಟ್ಟೆ ಅಂಗಡಿಗಳು, ಸಿಂಗಲ್ ಬ್ರ್ಯಾಂಡ್, ಮಲ್ಟಿ ಬ್ರ್ಯಾಂಡ್ ಸೇರಿದಂತೆ ಇಂತಹ ಮಳಿಗೆಗಳಲ್ಲಿ ಎಲ್ಲಾ ಮಹಡಿಗಳಲ್ಲಿ ಸೇರಿ ಒಟ್ಟು 25 ಜನ ಸಿಬ್ಬಂದಿಗಳು ಹಾಗೂ 25 ಜನ ಗ್ರಾಹಕರು ಹಾಗೂ ಮಲ್ಟಿ ಬ್ರಾಂಡ್ ಎಲೆಕ್ಟ್ರಾನಿಕ್ಸ್ ಮಳಿಗೆಗಳಲ್ಲಿ (ಪೈ ಸೇಲ್ಸ್, ಹರ್ಷ ಮುಂತಾದ) ಒಟ್ಟು 10 ಜನ ಸಿಬ್ಬಂದಿಗಳು ಹಾಗೂ 10 ಜನ ಗ್ರಾಹಕರಿಗೆ ಅವಕಾಶವನ್ನು ನೀಡಲಾಗಿದೆ.

*ಮಳಿಗೆ ತೆರೆಯುವ ಮುನ್ನಾ ನಿಯೋಜಿಸಲಾಗುವ ಸಿಬ್ಬಂದಿಗಳ ಆರೋಗ್ಯ ತಪಾಸಣೆಯನ್ನು ವೈದ್ಯರಿಂದ ಮಾಡಿಸಬೇಕು. ಅದೇ ಸಿಬ್ಬಂದಿ ಗಳನ್ನು ಮುಂದುವ ರಿಸಬೇಕು. ಸಿಬ್ಬಂದಿಗಳಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಕರ್ತವ್ಯಕ್ಕೆ ನಿಯೋಜಿಸಬಾರದು.
*ಮಳಿಗೆಗಳಲ್ಲಿ ಎ.ಸಿ.ಯನ್ನು ಕಡ್ಡಾಯವಾಗಿ ಬಳಸುವಂತಿಲ್ಲ.
*ಮಾಸ್ಕ್, ಗ್ಲೌಸ್ ಮತ್ತು ಸ್ಯಾನಿಟೈಸರ್‌ಗಳನ್ನು ಸಿಬ್ಬಂದಿಗಳು ಕಡ್ಡಾಯವಾಗಿ ಬಳಸಬೇಕು ಮತ್ತು ಗ್ರಾಹಕರು ಸಹ ಮಾಸ್ಕ್‌ನ್ನು ಕಡ್ಡಾಯವಾಗಿ ಬಳಸಬೇಕು.
*ಪ್ರತಿದಿನ ವ್ಯವಹಾರ ಪ್ರಾರಂಭಿಸುವ ಮೊದಲು ಮತ್ತು ಮುಕ್ತಾಯದ ನಂತರ ಶಾಪ್ಳನ್ನು ಸ್ಯಾನಿಟೈಸ್ ಮಾಡಬೇಕು.
*ಮಳಿಗೆಯನ್ನು ಪ್ರವೇಶಿಸುವ ಮುನ್ನ ಗ್ರಾಹಕರು ಸ್ಯಾನಿಟೈಸರ್ ಬಳಸಿ ಒಳ ಪ್ರವೇಶಿಸುವುದಕ್ಕೆ ಮಳಿಗೆ ಮಾಲಕರು/ ವ್ಯವಸ್ಥಾಪಕರು ಏರ್ಪಾಡು ಮಾಡಿ ಕೊಳ್ಳಬೇಕು ಹಾಗೂ ಖಾತ್ರಿ ಪಡಿಸಿಕೊಳ್ಳಬೇಕು. ಅದೇ ರೀತಿ ಪ್ರತಿಯೊಬ್ಬ ಸಿಬ್ಬಂದಿ/ಗ್ರಾಹಕರಿಗೆ ಉಷ್ಣತಾ ಪರೀಕ್ಷೆ (ಥರ್ಮಲ್ ಸ್ಕೃಿನಿಂಗ್) ಮಾಡಿಸಿಯೇ ಮಳಿಗೆಗಳನ್ನು ಪ್ರವೇಶಿಸಲು ಅವಕಾಶ ನೀಡಬೇಕು.
 *60ವರ್ಷಕ್ಕಿಂತ ಅಧಿಕ ಪ್ರಾಯದ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಮತ್ತು ಗರ್ಭಿಣಿಯರು ಮಳಿಗೆಗಳಿಗೆ ಬರುವುದನ್ನು ನಿರ್ಬಂಧಿಸಲಾಗಿದೆ.

*ಪ್ರತಿ ಮಳಿಗೆಗಳಿಗೆ ಆಗಮಿಸುವ ಶೀತ, ಕೆಮ್ಮು ಮತ್ತು ಜ್ವರದ ಲಕ್ಷಣ ಇರುವ ಗ್ರಾಹಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನು ಮಳಿಗೆಗಳ ಮಾಲಕರು/ವ್ಯವಸ್ಥಾಪಕರು ಖಚಿತ ಪಡಿಸಿಕೊಳ್ಳಬೇಕು.

ಸರದಿಯಲ್ಲಿರುವ ಇತರ ಗ್ರಾಹಕರಿಗೆ ಮಳಿಗೆಯ ಹೊರಗೆ ಸುರಕ್ಷಿತ ಅಂತರ ಕಾಪಾಡಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X