Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 'ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ...

ಉಡುಪಿ: 'ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ' ಸರಕಾರದ ವಿರುದ್ಧ ಹಿರಿಯ ಮಹಿಳೆ ಕೆಂಡಾಮಂಡಲ

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ4 May 2020 10:58 PM IST
share
ಉಡುಪಿ: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಸರಕಾರದ ವಿರುದ್ಧ ಹಿರಿಯ ಮಹಿಳೆ ಕೆಂಡಾಮಂಡಲ

ಉಡುಪಿ, ಮೇ 4: ಲಾಕ್‌ಡೌನ್ ನಡುವೆಯೂ ಮದ್ಯ ಮಾರಾಟ ಮಾಡಲು ಅನುಮತಿ ನೀಡಿದ ಸರಕಾರದ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದು ಕೊಂಡಿರುವ ಉಡುಪಿ ಸಮೀಪದ ಕಟಪಾಡಿಯ ಹಿರಿಯ ಮಹಿಳೆಯೊಬ್ಬರು ತನ್ನ ಆಕ್ರೋಶವನ್ನು ವಿಡಿಯೋ ಒಂದರಲ್ಲಿ ಹೊರಹಾಕಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಸರಕಾರದ ಈ ಕ್ರಮದಿಂದ ನಿನ್ನೆಯವರೆಗೆ ಊಟಕ್ಕೂ ಹಣವಿಲ್ಲ ಎಂದು ಯಾರು ಅಂಗಲಾಚುತ್ತಿದ್ದರೋ, ಅವರೆಲ್ಲ ಇಂದು ವೈನ್‌ಶಾಪ್‌ಗಳ ಮುಂದೆ 500 ರೂ. ನೋಟು ಹಿಡಿದು ಸಾಲು ನಿಂತಿದ್ದಾರೆ.’ ಎಂದು ಕಾಪು ತಾಲೂಕು ಕಟಪಾಡಿಯ ಸುಲತಾ ಕಾಮತ್ ಸರಕಾರದ ವಿರುದ್ಧ ಕೆಂಡಾಮಂಡಲರಾಗಿ ನುಡಿದ್ದಾರೆ. ಸುಲತಾ ಕಾಮತ್ ಕ್ರೀಡಾಪಟುವಾಗಿದ್ದು, ಹಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದಾರೆ.

‘ನಾವು ದುಡಿದು ಸಂಪಾದಿಸೋಣ ಎಂದರೆ ಅಂಗಡಿ ತೆರೆಯಲು ನಮಗೆ ಅವಕಾಶ ನೀಡಲಿಲ್ಲ. ಆದರೆ ಈಗ ಬಾರ್‌ಗಳನ್ನು ತೆರೆಸಲು ಅನುಮತಿ ನೀಡಿದ ನಿಮಗೆ ಏನೂ ಅನ್ನಿಸುತ್ತಿಲ್ಲವಾ? ನಿಮಗೆ ನೈತಿಕತೆ ಇದೆಯೇ? ದುಡ್ಡು ಬರುತ್ತದೆ ಎಂದು ಇಂಥ ಕೆಲಸವನ್ನು ಸರಕಾರ ಮಾಡಬೇಕಿತ್ತಾ’ ಎಂದವರು ಪ್ರಶ್ನಿಸಿದ್ದಾರೆ.

‘ ಸರಕಾರ ಇಂಥವರಿಗೆ ಅಕ್ಕಿ, ಹಣ್ಣುಹಂಪಲು, ಹಾಲು ಮೊದಲಾದವುಗಳನ್ನು ನೀಡಿ ಇಷ್ಟು ದಿನ ಸಾಕುತ್ತಿತ್ತು. ಆದರೆ ನಮ್ಮಂತಹ ಬಡವರು ಚಹಾ ಮಾರಿ ಜೀವನ ಸಾಗಿಸುತ್ತೇವೆ ಎಂದರೆ ನಮಗೆ ಅಂಗಡಿ ತೆರೆಯಲು ಕೂಡ ಅವಕಾಶ ಕೊಡುತ್ತಿಲ್ಲ.’ ಎಂದು ಸರಕಾರದ ನೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮ್ಯಾರಥಾನ್ ಓಟಗಾರ್ತಿಯಾಗಿರುವ ಸುಲತಾ ಕಾಮತ್ ಅವರಿಗೆ ಉಡುಪಿ ಯಲ್ಲಿ ಈ ಹಿಂದೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಣ್ಣಾಮಲೈ ಚಾ ಅಂಗಡಿ ತೆರೆಯಲು ಸಹಾಯ ಮಾಡಿದ್ದರು. ಅವರ ಅಂಗಡಿ ಈಗ ಲಾಕ್ ಡೌನ್ ಕಾರಣ ಮುಚ್ಚಲ್ಪಟ್ಟಿದೆ.

ಸಿಎಂ ಯಡಿಯೂರಪ್ಪ ಅವರನ್ನು ಮಾತ್ರವಲ್ಲದೇ, ಮದ್ಯಕ್ಕೆಂದು ಮುಗಿ ಬಿದ್ದಿರುವ ಜನರನ್ನೂ ತರಾಟೆಗೆ ತೆಗೆದುಕೊಂಡಿರುವ ಸುಲತಾ, ಇಷ್ಟು ದಿನ ಊಟಕ್ಕೆ ಹಣ ಇಲ್ಲದವರ ಹತ್ತಿರ ಇವತ್ತು ಮದ್ಯ ಖರೀದಿಗೆ ಹಣ ಎಲ್ಲಿಂದ ಬಂತು? ನಿನ್ನೆಯವರೆಗೆ ಉಚಿತ ಊಟಕ್ಕೆ ಸಾಲಲ್ಲಿ ನಿಂತವರು ಇವತ್ತು ವೈನ್ ಶಾಪ್ ಮುಂದೆ ನಿಂತಿದ್ದಾರೆ. ನಿನ್ನೆ ಇಲ್ಲದ ದುಡ್ಡು ಇಂದು ಎಲ್ಲಿಂದ ಬಂತು ಎಂದವರು ಖಡಕ್ಕಾಗಿ ಪ್ರಶ್ನಿಸಿದ್ದಾರೆ.

ಊಟಕ್ಕೆ ಇಲ್ಲ ಎಂದು ಕೂತು, ಇಂದು ಮದ್ಯಕ್ಕೆ ಮುಗಿಬಿದ್ದಿರುವ ಕುಡುಕರಿಗೆ ನೀವೇಕೆ ದಿನಸಿ ಕೊಟ್ಟಿರಿ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಅಕ್ಕಿ, ಹಣ್ಣು, ಹಂಪಲು ಎಲ್ಲವನ್ನೂ ನೀವು ಇಂಥವರಿಗೆ ಕೊಟ್ಟಿರಿ. ಇವರೆಲ್ಲ ಕೆಲಸಕ್ಕೆ ಹೋಗುತ್ತಾರಾ? ಇಂಥ ಸಮಯದಲ್ಲಿ ಸರಕಾರ ಮದ್ಯದಂಗಡಿ ತೆರೆದಿದೆ. ಐನೂರು ಕೊಟ್ಟು ಕುಡಿಯಲು ಎಲ್ಲ ಹೋಗುತ್ತಿದ್ದಾರೆ. ಹೆಂಡತಿ, ಮಕ್ಕಳನ್ನೂ ಬೀದಿಗೆ ತಳ್ಳುತ್ತಾರೆ. ಸರಕಾರಕ್ಕೆ ಬುದ್ಧಿ ಇಲ್ಲವಾ, ದುಡ್ಡು ಬರುತ್ತದೆ ಎಂದು ಇಂಥ ಕೆಲಸ ಮಾಡಬಹುದಾ? ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ.

ಒಂದು ಹೊತ್ತು ಊಟಕ್ಕೆ ಗತಿ ಇಲ್ಲ ಎಂದು ಹೇಳಿದವರೆಲ್ಲ ಇಂದು ಐನೂರು ರೂಪಾಯಿ ಕೊಟ್ಟು ಮದ್ಯ ತೆಗೆದುಕೊಳ್ಳುತ್ತಿದ್ದಾರೆ. ಒಳ್ಳೆ ಕೆಲಸ ಮಾಡುವವರಿಗೆ ನೀವು ಸಹಾಯ ಮಾಡುವುದಿಲ್ಲ. ಕುಡಿಯಲು ಅವಕಾಶ ಮಾಡಿಕೊಟ್ಟು ನೀವು ಯಾರನ್ನು ನಾಶ ಮಾಡಲು ಹೊರಟಿದ್ದೀರಿ? ನೀವು ಕೊರೋನ ನಾಶ ಮಾಡುತ್ತಿಲ್ಲ, ದೇಶವನ್ನೇ ನಾಶ ಮಾಡಲು ಹೊರಟಿದ್ದೀರಿ ಎಂದು ಸುಲತಾ ಕಾಮತ್ ಗುಡುಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X