Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಯಿಂದ ಮರಳಲು ಕೊರೋನ ಲಕ್ಷಣರಹಿತ...

ಯುಎಇಯಿಂದ ಮರಳಲು ಕೊರೋನ ಲಕ್ಷಣರಹಿತ ಭಾರತೀಯರಿಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ6 May 2020 8:15 PM IST
share
ಯುಎಇಯಿಂದ ಮರಳಲು ಕೊರೋನ ಲಕ್ಷಣರಹಿತ ಭಾರತೀಯರಿಗೆ ಮಾತ್ರ ಅವಕಾಶ

ದುಬೈ,ಮೇ 6: ಕೋವಿಡ್-19 ಲಾಕ್‌ಡೌನ್‌ ನಿಂದಾಗಿ ವಿದೇಶಗಳಲ್ಲಿ ಸಿಕ್ಕಿಹಾಕಿಕೊಂಡಿರುವ ತನ್ನ ಪ್ರಜೆಗಳನ್ನು ಸ್ವದೇಶಕ್ಕೆ ವಾಪಸ್ ಕರೆತರಲು ಭಾರತವು ಹಮ್ಮಿಕೊಂಡಿರುವ ಬೃಹತ್ ತೆರವು ಕಾರ್ಯಾಚರಣೆ ಗುರುವಾರ ಆರಂಭಗೊಳ್ಳಲಿದೆ. ಯುಎಇ ಅಧಿಕಾರಿಗಳಿಂದ ಅನುಮತಿಸಲ್ಪಟ್ಟಿರುವ ಮತ್ತು ಯಾವುದೇ ಲಕ್ಷಣಗಳಿಲ್ಲದ ವ್ಯಕ್ತಿಗಳು ಮಾತ್ರ ಸ್ವದೇಶಕ್ಕೆ ವಿಮಾನವನ್ನೇರಲು ಅವಕಾಶ ನೀಡಲಾಗುವುದು ಎಂದು ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಬುಧವಾರ ಪ್ರಕಟಿಸಿದೆ.

ಭಾರತವು ಈ ತೆರವು ಕಾರ್ಯಾಚರಣೆಯಲ್ಲಿ ವಿವಿಧ ದೇಶಗಳಿಂದ ಒಟ್ಟು 64 ವಿಮಾನಯಾನಗಳನ್ನು ನಿರ್ವಹಿಸಲಿದೆ.

ಗುರುವಾರ ದುಬೈನಿಂದ ಮೊದಲ ಎರಡು ವಿಶೇಷ ಯಾನಗಳಲ್ಲಿ ಕೇರಳಿಯರನ್ನು ಕರೆತರಲಾಗುವುದು. ಭಾರತಕ್ಕೆ ವಾಪಸಾಗಲು ಹೆಸರು ನೋಂದಾಯಿಸಿಕೊಂಡವರಲ್ಲಿ ಕೇರಳಿಯರು ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಯುಎಇಯಲ್ಲಿ ಭಾರತದ ರಾಯಭಾರಿ ಪವನ ಕಪೂರ್ ತಿಳಿಸಿದ್ದಾರೆ.

ಭಾರತಕ್ಕೆ ಮರಳುವ ಎಲ್ಲ ಪ್ರಯಾಣಿಕರು ನಿರ್ಗಮನ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ವೈದ್ಯಕೀಯ ತಪಾಸಣೆಗೆ ಒಳಪಡಬೇಕಿದೆ. ಯುಎಇ ಆರೋಗ್ಯಾಧಿಕಾರಿಗಳಿಂದ ಅನುಮತಿ ಪಡೆದಿರುವ ಮತ್ತು ರೋಗಲಕ್ಷಣ ರಹಿತ ವ್ಯಕ್ತಿಗಳು ಮಾತ್ರ ವಿಮಾನವನ್ನು ಹತ್ತಬಹುದಾಗಿದೆ.

ಗಮ್ಯ ಸ್ಥಳವನ್ನು ತಲುಪಿದ ಬಳಿಕ ಕಡ್ಡಾಯ ಕ್ವಾರಂಟೈನ್‌ಗೆ ಒಳಪಡುವುದಾಗಿ ಮತ್ತು ಅದರ ವೆಚ್ಚವನ್ನು ಸ್ವತಃ ಭರಿಸುವುದಾಗಿ ಎಲ್ಲ ಪ್ರಯಾಣಿಕರು ಮುಚ್ಚಳಿಕೆಗೆ ಸಹಿ ಹಾಕಬೇಕಾಗುತ್ತದೆ ಎಂದು ರಾಯಭಾರಿ ಕಚೇರಿಯು ತಿಳಿಸಿದೆ.

ಪ್ರತಿ ಪ್ರಯಾಣಿಕನಿಗೆ ವಿಮಾನವನ್ನು ಹತ್ತುವಾಗ ಮೂರು ಪದರಗಳ ಎರಡು ಫೇಸ್ ಮಾಸ್ಕ್‌ಗಳು, ಎರಡು ಜೊತೆ ಕೈಗವುಸುಗಳು ಮತ್ತು ಹ್ಯಾಂಡ್ ಸ್ಯಾನಿಟೈಸರ್‌ಗಳ ಪೌಚ್‌ಗಳು/ಸಣ್ಣ ಬಾಟ್ಲಿಗಳನ್ನೊಳಗೊಂಡ ಸುರಕ್ಷತಾ ಕಿಟ್ ನೀಡಲಾಗುವುದು. ಪ್ರಯಾಣಿಕರು ವಿಮಾನದಲ್ಲಿ ನಾಗರಿಕ ವಾಯುಯಾನ ಸಚಿವಾಲಯದ ಆರೋಗ್ಯ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಅದು ಹೇಳಿದೆ.

‘ವಂದೇ ಭಾರತ ಮಿಷನ್’ ಎಂದು ಹೆಸರಿಸಲಾಗಿರುವ ಈ ತೆರವು ಕಾರ್ಯಾಚರಣೆಯ ಮೊದಲ ವಾರದಲ್ಲಿ ಯುಎಇಯಿಂದ ಭಾರತಕ್ಕೆ ಮರಳಲು ಬಯಸಿರುವ 2,000ಕ್ಕೂ ಕಡಿಮೆ ಭಾರತೀಯರನ್ನು ಆರು ರಾಜ್ಯಗಳಿಗೆ ತಲುಪಿಸಲಾಗುವುದು. ಗುರುವಾರ ಕೇರಳಕ್ಕೆ ತೆರಳಲಿರುವ ಮೊದಲ ಎರಡು ವಿಮಾನಯಾನಗಳಿಗೆ ಪ್ರತಿ ಪ್ರಯಾಣಿಕರಿಗೆ 725 ದಿರ್‌ಹಮ್‌ಗಳಿಂದ 750 ದಿರಹಮ್(15,000 ರೂ.ಗೂ ಹೆಚ್ಚು) ಪ್ರಯಾಣ ಶುಲ್ಕಗಳನ್ನು ನಿಗದಿಗೊಳಿಸಲಾಗಿದೆ. ಈ ಯಾನಗಳಲ್ಲಿ ಏರ್ ಇಂಡಿಯಾ ತನ್ನ 737-800 ಬೋಯಿಂಗ್ ವಿಮಾನಗಳನ್ನು ಕಾರ್ಯಾಚರಿಸಲಿದೆ. ಇವು 186 ಇಕಾನಮಿ ಕ್ಲಾಸ್ ಆಸನ ಸಾಮರ್ಥ್ಯ ಹೊಂದಿದ್ದು,ಒಂಭತ್ತು ಆಸನಗಳನ್ನು ಐಸೊಲೇಷನ್‌ಗಾಗಿ ಮೀಸಲಿಡಲಾಗುವುದು. ಕೇವಲ 177 ಪ್ರಯಾಣಿಕರು ಒಂದು ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X