Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಕಾನೂನು-ನ್ಯಾಯವ್ಯವಸ್ಥೆ ಶ್ರೀಮಂತರ,...

ದೇಶದ ಕಾನೂನು-ನ್ಯಾಯವ್ಯವಸ್ಥೆ ಶ್ರೀಮಂತರ, ಪ್ರಬಲರ ಪರ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ದೀಪಕ್ ಗುಪ್ತಾ

ವಾರ್ತಾಭಾರತಿವಾರ್ತಾಭಾರತಿ7 May 2020 1:22 PM IST
share
ದೇಶದ ಕಾನೂನು-ನ್ಯಾಯವ್ಯವಸ್ಥೆ ಶ್ರೀಮಂತರ, ಪ್ರಬಲರ ಪರ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ದೀಪಕ್ ಗುಪ್ತಾ

ಹೊಸದಿಲ್ಲಿ : ‘ದೇಶದ ಕಾನೂನು ಹಾಗೂ  ನ್ಯಾಯ ವ್ಯವಸ್ಥೆ ಸಂಪೂರ್ಣವಾಗಿ ಶ್ರೀಮಂತರು ಹಾಗೂ ಪ್ರಬಲರ ಪರವಾಗಿದೆ’ ಎಂದು ಬುಧವಾರ ನಿವೃತ್ತರಾದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ದೀಪಕ್ ಗುಪ್ತಾ ಖೇದ ವ್ಯಕ್ತಪಡಿಸಿದ್ದಾರೆ.

“ಈಗಿನ ದಿನಗಳಲ್ಲಿ ಹಾಗೂ ಈಗಿನ ಕಾಲದಲ್ಲಿ ನ್ಯಾಯಾಧೀಶರು ದಂತದ ಗೋಪುರಗಳಲ್ಲಿ ಬಾಳಲು ಸಾಧ್ಯವಿಲ್ಲ, ಬದಲಾಗಿ  ಜಗತ್ತಿನಲ್ಲಿ ತಮ್ಮ ಸುತ್ತಲೂ ಏನು ನಡೆಯುತ್ತಿದೆ ಎಂಬ ಅರಿವು ಅವರಿಗಿರಬೇಕು'' ಎಂದು ಅವರು ಹೇಳಿದ್ದಾರೆ.

ಬುಧವಾರ ಜಸ್ಟಿಸ್ ದೀಪಕ್ ಗುಪ್ತಾ ಅವರ ಕೊನೆಯ ಕರ್ತವ್ಯ ದಿನವಾಗಿದ್ದರಿಂದ ನಿವೃತ್ತರಾಗುತ್ತಿರುವ ಅವರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಆಯೋಜಿಸಿದ್ದ ವಿದಾಯ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

“ಶ್ರೀಮಂತರು ಅಥವಾ ಪ್ರಭಾವಿಗಳು ಯಾರಾದರೂ ಜೈಲುಗಂಬಿಯ ಹಿಂದಿದ್ದರೆ  ಅವರು ಆಗಾಗ  ಉನ್ನತ ನ್ಯಾಯಾಲಯದ ಕದ ತಟ್ಟುತ್ತಾ ಇರುತ್ತಾರೆ. ಕೊನೆಗೆ ಅವರ ಪ್ರಕರಣದ  ವಿಚಾರಣೆಯನ್ನು ಶೀಘ್ರಗೊಳಿಸುವಂತಹ ಆದೇಶ ಬರುವ ತನಕ ಇದು ಮುಂದುವರಿಯುತ್ತದೆ. ಅದೇ ಸಮಯ ಬಡ ಕಕ್ಷಿಗಾರನೊಬ್ಬ ಉನ್ನತ ನ್ಯಾಯಾಲಯದ ಕದ ತಟ್ಟುವಷ್ಟು ಆರ್ಥಿಕವಾಗಿ ಸಬಲನಾಗಿಲ್ಲದೇ ಇರುವುದರಿಂದ ಆತನ ಪ್ರಕರಣ ವಿಚಾರಣೆ ಬಾಕಿಯುಳಿಯುತ್ತದೆ'' ಎಂದು ಅವರು ಹೇಳಿದರು.

ಬಡವರ ಪ್ರಕರಣಗಳ ವಿಚಾರಣೆ ಹೆಚ್ಚು ವಿಳಂಬವಾಗದಂತೆ ನೋಡಿಕೊಳ್ಳುವ ಹೊಣೆ ನ್ಯಾಯಾಂಗ ವ್ಯವಸ್ಥೆಗಿದೆ ಎಂದು ಅವರು ಹೇಳಿದರು.

“ನಿಜವಾಗಿಯೂ ನ್ಯಾಯ ದಕ್ಕಬೇಕೆಂದರೆ, ದುರ್ಬಲ ವರ್ಗಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯ ದೊರಕಬೇಕು'' ಎಂದು  ಹೇಳಿದ ಅವರು, ನ್ಯಾಯಾಧೀಶರು  ತಮ್ಮ ರಾಜಕೀಯ ಮತ್ತಿತರ ನಂಟುಗಳನ್ನು ಮರೆತು ಕೋರ್ಟುಗಳಲ್ಲಿ ಸಂಪೂರ್ಣವಾಗಿ ಕಾನೂನಿಗೆ ಬದ್ಧವಾಗಿ ವಾದಾಡಬೇಕೆಂದೂ ಸಲಹೆ ನೀಡಿದರು.

ಸ್ವತಂತ್ರ ಕಾರ್ಯನಿರ್ವಹಣೆ, ನಿರ್ಭೀತಿ ಹಾಗೂ ಅಸಾಮಾನ್ಯ ವಿಶ್ವಾಸಾರ್ಹತೆ ನ್ಯಾಯಾಂಗ ಮತ್ತು ನ್ಯಾಯಾಧೀಶರಿಗೆ ಅತ್ಯಗತ್ಯ  ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X