Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಯ ಆಸ್ಪತ್ರೆಯಲ್ಲಿ ಕಳೇಬರಗಳ...

ಮುಂಬೈಯ ಆಸ್ಪತ್ರೆಯಲ್ಲಿ ಕಳೇಬರಗಳ ಪಕ್ಕದಲ್ಲಿಯೇ ಮಲಗಿರುವ ಕೋವಿಡ್-19 ರೋಗಿಗಳು!

ಆಘಾತಕಾರಿ ವೀಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ7 May 2020 3:00 PM IST
share
ಮುಂಬೈಯ ಆಸ್ಪತ್ರೆಯಲ್ಲಿ ಕಳೇಬರಗಳ ಪಕ್ಕದಲ್ಲಿಯೇ ಮಲಗಿರುವ ಕೋವಿಡ್-19 ರೋಗಿಗಳು!

ಮುಂಬೈ, ಮೇ 7: ಮುಂಬೈನ ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ಸುತ್ತಿಟ್ಟ ಶವಗಳ ಸಮೀಪವೇ ಕೊರೋನ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣ ವೈರಲ್ ಆಗಿದೆ.

 ನಗರದ ಮಹಾನಗರ ಪಾಲಿಕೆಯಿಂದ ನಡೆಸಲ್ಪಡುತ್ತಿರುವ ಸಯನ್ ಆಸ್ಪತ್ರೆಯಲ್ಲಿ ಈ ಭಯಾನಕ ದ್ಯಶ್ಯ ಕಂಡುಬಂದಿದೆ. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಾರ್ಡ್‌ನಲ್ಲಿ ಕನಿಷ್ಠ ಏಳು ಮೃತದೇಹಗಳನ್ನು ಇಡಲಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ಇಲ್ಲಿಡಲಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಪಕ್ಷ ಬಿಜೆಪಿಯ ಶಾಸಕ ನಿತೇಶ್ ರಾಣೆ ಬುಧವಾರ ವೀಡಿಯೊವನ್ನು ಪೋಸ್ಟ್ ಮಾಡಿದ್ದು, "ಸಯನ್ ಆಸ್ಪತ್ರೆಯಲ್ಲಿ ರೋಗಿಗಳು ಮೃತದೇಹಗಳ ಬಳಿಯೇ ಮಲಗಿದ್ದಾರೆ...ಇದು ವಿಪರೀತ..ಇದು ಯಾವ ರೀತಿಯ ಆಡಳಿತ! ಇದು ನಾಚಿಕೆಗೇಡು" ಎಂದು ಟ್ವೀಟ್ ಮಾಡಿದ್ದಾರೆ.

ಸಯನ್ ಆಸ್ಪತ್ರೆಯ ಡೀನ್ ಪ್ರಮೋದ್ ಇಂಗಳೆ ಈ ಕುರಿತು ಪ್ರತಿಕ್ರಿಯಿಸುತ್ತಾ, "ಕೋವಿಡ್‌ನಿಂದ ಮೃತಪಟ್ಟವರ ಸಂಬಂಧಿಕರು ಶವಗಳನ್ನು ಸ್ವೀಕರಿಸಲು ಹಿಂಜರಿಯುತ್ತಾರೆ. ಶವಗಳನ್ನು ಗಮನಿಸದೆ ಅಲ್ಲಿಡಲು ಅದೂ ಕಾರಣವಾಗಿದೆ. ಇದೀಗ ಶವಗಳನ್ನು ಅಲ್ಲಿಂದ ತೆಗೆಯಲಾಗಿದೆ. ಈ ವಿಚಾರದ ಬಗ್ಗೆ ತನಿಖೆ ನಡೆಸುತ್ತೇವೆ'' ಎಂದು ಪಿಟಿಐಗೆ ತಿಳಿಸಿದರು.

ಶವಗಳನ್ನು ಶವಾಗಾರಕ್ಕೆ ಏಕೆ ಸಾಗಿಸಲಾಗಿಲ್ಲ ಎಂದು ಡಾ.ಪ್ರಮೋದ್‌ ರಲ್ಲಿ ಕೇಳಿದಾಗ, "ಆಸ್ಪತ್ರೆಯ ಶವಾಗಾರದಲ್ಲಿ 15 ಸ್ಲಾಟ್‌ಗಳಿದ್ದು ಈಗಾಗಲೇ 11 ಸ್ಲಾಟ್ ಭರ್ತಿಯಾಗಿದೆ. ನಾವು ಎಲ್ಲ ಮೃತದೇಹವನ್ನು ಅಲ್ಲಿಗೆ ಸಾಗಿಸಿದರೆ ಕೋವಿಡ್‌ನಿಂದ ಮೃತಪಡದ ಶವಗಳಿಗೆ ಇದರಿಂದ ಸಮಸ್ಯೆಯಾಗುತ್ತದೆ'' ಎಂದರು.

ಒಮ್ಮೆ ಶವವನ್ನು ಚೀಲದೊಳಿಗೆ ಪ್ಯಾಕ್ ಮಾಡಿದ ಬಳಿಕ ಸೋಂಕು ಹರಡುವ ಸಾಧ್ಯತೆಯಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಪಷ್ಟೀಕರಣವು ಶವಗಳ ಪಕ್ಕದಲ್ಲಿ ಮಲಗಿದ್ದ ರೋಗಿಗಳ ಭಯಾನಕತೆಯನ್ನು ಸ್ವಲ್ಪ ಕಡಿಮೆ ಮಾಡಿದೆ.

ದೇಶದಲ್ಲಿ ಅದರಲ್ಲೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನ ವೈರಸ್ ಪ್ರಕರಣಗಳು ಗರಿಷ್ಠ ಸಂಖ್ಯೆಯಲ್ಲಿದೆ. ಈಗಾಗಲೆ 16,800 ಪ್ರಕರಣಗಳು ದಾಖಲಾಗಿದ್ದು, ಮುಂಬೈಯೊಂದರಲ್ಲಿ 10,714 ಸೋಂಕಿತರಿದ್ದಾರೆ. 400ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

In Sion hospital..patients r sleeping next to dead bodies!!!
This is the extreme..what kind of administration is this!
Very very shameful!! @mybmc pic.twitter.com/NZmuiUMfSW

— nitesh rane (@NiteshNRane) May 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X