Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ‘ದ್ವೇಷ ಪ್ರಚಾರಕ’ ಟಿವಿ ವಾಹಿನಿಗಳ...

‘ದ್ವೇಷ ಪ್ರಚಾರಕ’ ಟಿವಿ ವಾಹಿನಿಗಳ ವಿರುದ್ಧ ಭಾರತ ಕ್ರಮ ಕೈಗೊಳ್ಳಲಿ: ‘ಗಲ್ಫ್ ನ್ಯೂಸ್’ ಸಂಪಾದಕೀಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 May 2020 4:53 PM IST
share
‘ದ್ವೇಷ ಪ್ರಚಾರಕ’ ಟಿವಿ ವಾಹಿನಿಗಳ ವಿರುದ್ಧ ಭಾರತ ಕ್ರಮ ಕೈಗೊಳ್ಳಲಿ: ‘ಗಲ್ಫ್ ನ್ಯೂಸ್’ ಸಂಪಾದಕೀಯ ಆಗ್ರಹ

ಹೊಸದಿಲ್ಲಿ: ‘ವಿಷಕಾರಿ' ಭಾರತೀಯ ಟಿವಿ ವಾಹಿನಿಗಳಿಗೆ ‘ಇಸ್ಲಾಮೋಫೋಬಿಯಾ ಹರಡಲು ಹಾಗೂ ವಾತಾವರಣವನ್ನು ಇನ್ನಷ್ಟು ಹದಗಡಿಸಲು’ ಅನುಮತಿಸಬಾರದು ಎಂದು  ದುಬೈ ಮೂಲದ ಗಲ್ಫ್ ನ್ಯೂಸ್ ತನ್ನ ಮೇ 6ರ ಸಂಪಾದಕೀಯದಲ್ಲಿ ಬರೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್ ಮಾಡಿದ್ದಕ್ಕಾಗಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ ಹಲವು ಭಾರತೀಯ ವಲಸಿಗರನ್ನು ಅವರ ಮಾಲಕರು ಉದ್ಯೋಗಗಳಿಂದ ವಜಾಗೊಳಿಸಿದ  ಅಥವಾ ಅವರ ‘ದ್ವೇಷದ ಭಾವನೆ ಹಾಗೂ ಧಾರ್ಮಿಕ ತಾರತಮ್ಯ'ಕ್ಕಾಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವು ನಿದರ್ಶನಗಳಿವೆ ಎಂದು ‘ಸ್ಟಾಪ್ ಇಂಡಿಯನ್ ಮೀಡಿಯಾ ಫ್ರಮ್ ಎಕ್ಸ್‍ಪೋರ್ಟಿಂಗ್ ಹೇಟ್ ಟು ಗಲ್ಫ್' ಎಂಬ ಶೀರ್ಷಿಕೆಯ ಈ ಸಂಪಾದಕೀಯದಲ್ಲಿ ಬರೆಯಲಾಗಿದೆ.

‘ಭಾರತದ ಜನಪ್ರಿಯ ವಾಹಿನಿಗಳು ಸುದ್ದಿಯನ್ನು ತಿರುಚಿ ನಕಲಿ ವಿವರಣೆಗಳನ್ನು ನೀಡುವ ಮೂಲಕ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ’ ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ. “ಉದಾಹರಣೆಯಾಗಿ ಕೊರೋನವೈರಸ್ ಹರಡಲು ಮುಸ್ಲಿಮರು ಹಣ್ಣುಗಳ ಮೇಲೆ ಉಗುಳುತ್ತಿರುವ ನಕಲಿ ಸುದ್ದಿಗಳನ್ನು ಪ್ರಟಿಸಿವೆ. ಜನರು ಇದನ್ನು ನಿಜವೆಂದೇ ನಂಬುವ ತನಕ ಈ ನಕಲಿ ಸುದ್ದಿಯನ್ನು ಹಲವು ಸುದ್ದಿ ವಾಹಿನಿಗಳು ಸತತ ಪ್ರಸಾರ ಮಾಡಿವೆ. ಈ ದ್ವೇಷಪೂರಿತ ವಿಚಾರಗಳು ಯುಎಇ ಸಹಿತ ಗಲ್ಫ್ ರಾಷ್ಟ್ರಗಳನ್ನು ಪ್ರೈಮ್ ಟೈಮ್ ಸಂದರ್ಭ ತಲುಪುತ್ತವೆ'' ಎಂದೂ ಬರೆಯಲಾಗಿದೆ.

`ದ್ವೇಷ ಪ್ರಚಾರಕ' ಟಿವಿ ವಾಹಿನಿಗಳು, ಮುಖ್ಯವಾಗಿ ರಿಪಬ್ಲಿಕ್ ಟಿವಿ, ಝೀ ನ್ಯೂಸ್, ಇಂಡಿಯಾ ಟಿವಿ, ಆಜ್ ತಕ್, ಎಬಿಪಿ ಹಾಗೂ ಟೈಮ್ಸ್ ನೌ ವಾಹಿನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದೂ ಸಂಯುಕ್ತ ಅರಬ್ ಸಂಸ್ಥಾನದ ಆಡಳಿತವನ್ನು ಗಲ್ಫ್ ನ್ಯೂಸ್ ಕೇಳಿಕೊಂಡಿದೆ. “ವಿವಿಧ ಜಾತಿಗಳ ಹಾಗೂ ಧಾರ್ಮಿಕ ಹಿನ್ನೆಲೆಯುಳ್ಳ ಜನರು ಶಾಂತಿಯುತವಾಗಿ ಕೆಲಸ ಮಾಡಿಕೊಂಡಿರುವ ಗಲ್ಫ್ ರಾಷ್ಟ್ರಗಳಲ್ಲಿ ಸಾಮಾಜಿಕ ಸಾಮರಸ್ಯದ ವಾತಾವರಣವನ್ನು ಹದಗೆಡಿಸಲು ಅವರಿಗೆ ಅನುಮತಿಸಬಾರದು'' ಎಂದೂ ಗಲ್ಫ್ ನ್ಯೂಸ್ ಸಂಪಾದಕೀಯ ಕೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X