Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಟ್ಟೆ ಅಂಗಡಿಗಳನ್ನು ತೆರೆಯಲು ಅನುಮತಿ:...

ಬಟ್ಟೆ ಅಂಗಡಿಗಳನ್ನು ತೆರೆಯಲು ಅನುಮತಿ: ದ.ಕ.ಜಿಲ್ಲೆಯ ವಿವಿಧ ಸಂಘಟನೆಗಳ ಖಂಡನೆ

ವಾರ್ತಾಭಾರತಿವಾರ್ತಾಭಾರತಿ7 May 2020 5:59 PM IST
share

ಮಂಗಳೂರು, ಮೇ 7: ದ.ಕ.ಜಿಲ್ಲೆಯಲ್ಲಿ ಪ್ರತಿ ದಿನವೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಡಳಿತವು ಬಟ್ಟೆ, ಫ್ಯಾನ್ಸಿ ಹಾಗೂ ಪಾದರಕ್ಷೆಗಳ ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟಿರುವುದು ಖಂಡನೀಯ ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈದುಲ್ ಫಿತ್ರ್  ಹಬ್ಬ ಸಮೀಪಿಸುತ್ತಿರುವ ವೇಳೆ ಈ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟರೆ ಜನಸಂದಣಿಯನ್ನು ನಿಯಂತ್ರಿಸು ವುದು ಕಷ್ಟವಾಗಬಹುದು. ಜನಸಂದಣಿಯಿಂದ ಕೊರೋನ ಸೋಂಕು ಹರಡುವ ಭೀತಿ ಇದೆ. ಆದುದರಿಂದ ಬಟ್ಟೆ, ಫ್ಯಾನ್ಸಿ ಮತ್ತು ಪಾದರಕ್ಷೆಯ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬಾರದು ಎಂದು ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಉಡುಪಿ ಖಾಝಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಕೂಡ ಅದಕ್ಕೆ ಸ್ಪಂದಿಸದೆ ಅನುಮತಿ ನೀಡಿರುವುದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಜಿಲ್ಲಾಡಳಿತದ ಈ ಅಚಾತುರ್ಯದಿಂದ ಕೊರೋನ ಹರಡಿದರೆ ಇದರ ಸಂಪೂರ್ಣ ಹೊಣೆಯನ್ನು ಇಲ್ಲಿನ ಸಂಸದರು, ಉಸ್ತುವಾರಿ ಸಚಿವರು, ಶಾಸಕರು ಮತ್ತು ಜಿಲ್ಲಾಡಳಿತ ಹೊರಬೇಕಾಗಿದೆ. ಇದರೊಂದಿಗೆ ಇಲ್ಲಿನ ಕೆಲವು ಮಾಧ್ಯಮಗಳು ಕೂಡ ಕೋಮು ವಿಷವನ್ನೇ ಕಾರುವುದರಲ್ಲಿ ಯಾವ ಸಂಶಯವೂ ಇಲ್ಲ. ಅಲ್ಲದೆ ಇಷ್ಟರವರೆಗಿನ ಲಾಕ್‌ಡೌನ್ ಕೂಡ ವ್ಯರ್ಥ ವಾಗಲಿದೆ ಎಂದು ಅಶ್ರಫ್ ತಿಳಿಸಿದ್ದಾರೆ.

ಕೊರೋನ ಸೋಂಕು ನಿಯಂತ್ರಣ ಕಾರ್ಯದಲ್ಲಿ ಮುಸ್ಲಿಂ ಸಮುದಾಯವು ಈವರೆಗೆ ಸರಕಾರದೊಂದಿಗೆ ಸಂಪೂರ್ಣ ಸಹಕಾರವನ್ನು ನೀಡಿದೆ. ಸರಕಾರದ ಎಲ್ಲಾ ಕ್ರಮಗಳಿಗೂ ಬದ್ಧವಾಗಿ ನಡೆದುಕೊಂಡಿದೆ. ಪವಿತ್ರ ರಮಝಾನ್‌ನಲ್ಲಿ ಮಸೀದಿಗಳಲ್ಲಿ ಜಮಾತ್ ಆಗಿ ನಿರ್ವಹಿಸುವ ನಮಾಝ್ ಳನ್ನು ಮನೆಯಲ್ಲಿಯೇ ನಿರ್ವಹಿಸಲಾಗಿದೆ. ಆದಾಗ್ಯೂ ಕೆಲವು ಬಟ್ಟೆ ವ್ಯಾಪಾರಿಗಳ ಒತ್ತಡಕ್ಕೆ ಮಣಿದು ಜವುಳಿ ಅಂಗಡಿಗಳನ್ನು ತೆರೆಯಲು ಅನುಮತಿ ಕೊಟ್ಟಿರುವುದು ಅಕ್ಷಮ್ಯ. ಜಿಲ್ಲಾಡಳಿತವು ತನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳೂರು ಸೆಂಟ್ರಲ್ ಕಮಿಟಿ: ರಮಝಾನ್‌ನಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯುವುದು ಬೇಡ. ಅತ್ಯಂತ ಸರಳವಾಗಿಯೇ ಈದ್ ಹಬ್ಬ ಆಚರಿಸುವೆವು ಎಂದು ಮುಸ್ಲಿಂ ಸಮುದಾಯವು ಈಗಾಗಲೆ ಹೇಳಿಕೊಂಡಿವೆ. ಅದರಲ್ಲೂ ಗೌರವಾನ್ವಿತ ಖಾಝಿಗಳು ಕೂಡ ರಮಝಾನ್ ಮುಗಿಯುವವರೆಗೆ ಬಟ್ಟೆ ಅಂಗಡಿಗಳನ್ನು ತೆರೆಯುವುದು ಬೇಡ ಎಂದು ದ.ಕ.ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಆದರೂ ಜಿಲ್ಲಾಡಳಿತವು ಉದ್ದೇಶಪೂರ್ವಕವಾಗಿ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟು ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಎಸಗಲು ಮುಂದಾಗಿದೆ. ಜಿಲ್ಲಾಡಳಿತದ, ಜಿಲ್ಲಾ ಉಸ್ತುವಾರಿ ಸಚಿವರ ಈ ನಡೆ ಖಂಡನೀಯ ಎಂದು ಮಂಗಳೂರು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲಿ ಹಸನ್ ತಿಳಿಸಿದ್ದಾರೆ.

ಮುಸ್ಲಿಂ ಜಸ್ಟೀಸ್ ಫಾರಂ: ದ.ಕ.ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದರೂ ಕೂಡ ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಅದನ್ನು ಗಂಭೀರವಾಗಿ ಪರಿಗಣಿಸದೆ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟು ಮುಸ್ಲಿಂ ಸಮುದಾಯಕ್ಕೆ ನೋವನ್ನುಂಟು ಮಾಡಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಈ ಕೊರೋನ ರೋಗಕ್ಕೆ ಮನೆಯೇ ಔಷಧಿಯಾಗಿರುತ್ತದೆ. ಆದರೆ ಜಿಲ್ಲಾಡಳಿತವು ಪ್ರಭಾವಿಗಳ ಮಾತನ್ನು ಅಥವಾ ವ್ಯಾಪಾರಿಗಳ ಮನವಿಗೆ ಸ್ಪಂದಿಸಿ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡಿರುವುದು ಖಂಡನೀಯ ಎಂದು ಮುಸ್ಲಿಂ ಜಸ್ಟೀಸ್ ಫಾರಂ ಕಾರ್ಯದರ್ಶಿ ವಹಾಬ್ ಕುದ್ರೋಳಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X