Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನುಮತಿ ಇಲ್ಲದೆ ಅಕ್ರಮ ಪ್ರವೇಶ:...

ಅನುಮತಿ ಇಲ್ಲದೆ ಅಕ್ರಮ ಪ್ರವೇಶ: ಸ್ಥಳೀಯರಿಂದ ತೀವ್ರ ವಿರೋಧ

ಗಂಗೊಳ್ಳಿ ಬಂದರಿನಲ್ಲಿ ಭಟ್ಕಳದ ಬೋಟುಗಳ ಲಂಗರಿಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ7 May 2020 6:40 PM IST
share
ಅನುಮತಿ ಇಲ್ಲದೆ ಅಕ್ರಮ ಪ್ರವೇಶ: ಸ್ಥಳೀಯರಿಂದ ತೀವ್ರ ವಿರೋಧ

ಗಂಗೊಳ್ಳಿ, ಮೇ 7: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಯಾವುದೇ ಅನುಮತಿ ಇಲ್ಲದೆ ಲಂಗರು ಹಾಕಲು ಭಟ್ಕಳದಿಂದ ಬಂದ ಎಂಟು ಪರ್ಸಿನ್ ಬೋಟುಗಳನ್ನು ಗಂಗೊಳ್ಳಿ ಮೀನುಗಾರಿಕಾ ಇಲಾಖಾಧಿಕಾರಿಗಳು ವಾಪಾಸ್ಸು ಕಳುಹಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಭಟ್ಕಳದ ಮೀನುಗಾರರು ಅಲ್ಲಿನ ಬಂದರಿನಲ್ಲಿ ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ಪ್ರತಿವರ್ಷ ತಮ್ಮ ಬೋಟುಗಳನ್ನು ಮಳೆಗಾಲದ ರಜೆಯಲ್ಲಿ ಗಂಗೊಳ್ಳಿ ಬಂದರಿನಲ್ಲಿ ಲಂಗರು ಹಾಕುತ್ತಿದ್ದರೆನ್ನಲಾಗಿದೆ. ಅದರಂತೆ ಇಂದು ಬೆಳಗ್ಗೆ 10:30ರ ಸುಮಾರಿಗೆ ಎಂಟು ಬೋಟುಗಳಲ್ಲಿ ಒಟ್ಟು 21 ಮಂದಿ ಮೀನುಗಾರರು ಬಂದರಿನ ಮ್ಯಾಂಗನೀಸ್ ವರ್ಫ್‌ಗೆ ಬಂದಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ನೂರಾರು ಸಂಖ್ಯೆಯ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಹೊರಜಿಲ್ಲೆಯ ಬೋಟು ಗಳನ್ನು ನಿಲ್ಲಿಸಲು ವಿರೋಧ ವ್ಯಕ್ತಪಡಿಸಿದರು. ಕೊರೋನ ವೈರಸ್‌ಗೆ ಸಂಬಂಧಿಸಿ ಕೆಂಪು ವಲಯದಲ್ಲಿರುವ ಭಟ್ಕಳದಿಂದ ಯಾವುದೇ ಅನುಮತಿ ಇಲ್ಲದೆ ಬಂದಿ ರುವ ಮೀನುಗಾರರೊಂದಿಗೆ ಸ್ಥಳೀಯರು ವಾಗ್ವಾದಕ್ಕೆ ಇಳಿದರು.

ಕೊರೋನ ಹರಡುವ ಭೀತಿ ವ್ಯಕ್ತಪಡಿಸಿದ ಸ್ಥಳೀಯರು, ಯಾವುದೇ ಕಾರಣಕ್ಕೂ ಇಲ್ಲಿ ಬೋಟುಗಳನ್ನು ನಿಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದ ಬಂದರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣ ವಾಯಿತು. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಈ ಕುರಿತು ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ಅಂಜನಾದೇವಿ ಹಾಗೂ ಗಂಗೊಳ್ಳಿ ಕರಾವಳಿ ಕಾವಲು ಪಡೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಎಲ್ಲ ಬೋಟುಗಳನ್ನು ಪರಿಶೀಲಿಸಿ, ಮೀನುಗಾರರನ್ನು ವಿಚಾರಿಸಿದರು.

ಕೊರೋನ ಭೀತಿಯ ಹಿನ್ನೆಲೆಯಲ್ಲಿ ಹೊರಜಿಲ್ಲೆಯಿಂದ ಯಾವುದೇ ಬೋಟುಗಳು ಜಿಲ್ಲಾಡಳಿತದ ಅನುಮತಿ ಇಲ್ಲದೆ ಜಿಲ್ಲೆಯ ಯಾವುದೇ ಬಂದರುಗಳಿಗೆ ಬರಲು ಅವಕಾಶ ಇಲ್ಲದಿರುವುದರಿಂದ ಅನುಮತಿ ಪತ್ರಗಳಿಲ್ಲದ ಈ ಎಲ್ಲ ಬೋಟುಗಳನ್ನು ಮೀನುಗಾರಿಕಾ ಇಲಾಖಾಧಿಕಾರಿಗಳ ನಿರ್ದೇಶನದಂತೆ ಕರಾವಳಿ ಕಾವಲು ಪಡೆಯ ಪೊಲೀಸರು ಮಧ್ಯಾಹ್ನ 12:30ರ ಸುಮಾರಿಗೆ ಗಂಗೊಳ್ಳಿ ಬಂದರಿನಿಂದ ವಾಪಾಸ್ಸು ಭಟ್ಕಳಕ್ಕೆ ಕಳುಹಿಸಿದರು.

ಆರೋಗ್ಯ ತಪಾಸಣೆ ಮಾಡದೆ ಮತ್ತು ಯಾವುದೇ ಅನುಮತಿ ಪತ್ರ ಇಲ್ಲದೆ ಜಿಲ್ಲೆಯ ಒಳಗೆ ಪ್ರವೇಶಿಸಿದ ಭಟ್ಕಳದ ಬೋಟುಗಳನ್ನು ಗಂಗೊಳ್ಳಿ ಬಂದರಿ ನಲ್ಲಿ ಲಂಗರು ಹಾಕಲು ಅವಕಾಶ ನೀಡದೆ ವಾಪಾಸ್ಸು ಕಳುಹಿಸಲಾಗಿದೆ. ಸ್ಥಳೀಯರು ಈ ಬಗ್ಗೆ ಗಮನಕ್ಕೆ ತಂದ ತಕ್ಷಣ ಆರೋಗ್ಯ ಅಧಿ ಕಾರಿಗಳಿಗೆ ಮಾಹಿತಿ ನೀಡಿದೆ. ಅವರು ಕೂಡ ಹೊರಜಿಲ್ಲೆಯ ಬೋಟುಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಎಂದು ಸೂಚನೆ ನೀಡಿ ದರು. ಅದೇ ರೀತಿ ಸ್ಥಳೀಯರು ಕೂಡ ಈ ಬಗ್ಗೆ ಭೀತಿ ವ್ಯಕ್ತಪಡಿಸಿದ್ದರು. ಎಲ್ಲ ಎಂಟು ಬೋಟುಗಳನ್ನು ಮತ್ತು ಅದರಲ್ಲಿದ್ದ 21 ಮೀನುಗಾರರನ್ನು ವಿಚಾರಿಸಿ ಹಿಂದೆ ಕಳುಹಿಸಿದ್ದೇವೆ.
-ಅಂಜನಾದೇವಿ, ಉಪನಿರ್ದೇಶಕಿ, ಮೀನುಗಾರಿಕಾ ಇಲಾಖೆ, ಗಂಗೊಳ್ಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X