Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವೈರಸ್ ಮಾನವ ದೇಹ ವ್ಯವಸ್ಥೆಗೆ...

ಕೊರೋನ ವೈರಸ್ ಮಾನವ ದೇಹ ವ್ಯವಸ್ಥೆಗೆ ಹೆಚ್ಚೆಚ್ಚು ಹೊಂದಿಕೊಂಡು ಬರುತ್ತಿದೆ

ಲಂಡನ್ ವಿಜ್ಞಾನಿಗಳ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ7 May 2020 8:55 PM IST
share
ಕೊರೋನ ವೈರಸ್ ಮಾನವ ದೇಹ ವ್ಯವಸ್ಥೆಗೆ ಹೆಚ್ಚೆಚ್ಚು ಹೊಂದಿಕೊಂಡು ಬರುತ್ತಿದೆ

ಲಂಡನ್, ಮೇ 7: ನೂತನ-ಕೊರೋನ ವೈರಸ್ ಕಳೆದ ವರ್ಷದ ಅಕ್ಟೋಬರ್ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ಚೀನಾದಲ್ಲಿ ಕಾಣಿಸಿಕೊಂಡಿತು ಹಾಗೂ ಬಳಿಕ ಕ್ಷಿಪ್ರವಾಗಿ ಜಗತ್ತಿನಾದ್ಯಂತ ಹರಡಿತು.

ಈ ವೈರಸ್ ವೇಗವಾಗಿ ಹರಡುತ್ತಿರುವಂತೆಯೇ ಮಾನವನ ದೇಹ ವ್ಯವಸ್ಥೆಗೆ ಹೆಚ್ಚೆಚ್ಚು ಹೊಂದಿಕೊಂಡು ಬರುತ್ತಿದೆ ಎನ್ನವುದು ವೈರಸ್‌ನ ವಂಶವಾಹಿ ಅಧ್ಯಯನದಿಂದ ತಿಳಿದು ಬಂದಿದೆ ಎಂದು ಲಂಡನ್ ನ ವಿಜ್ಞಾನಿಗಳು ಹೇಳಿದ್ದಾರೆ.

ವಿಜ್ಞಾನಿಗಳು ನಡೆಸಿದ 7,500ಕ್ಕೂ ಹೆಚ್ಚು ಜನರ ಮಾದರಿಗಳ ಅಧ್ಯಯನದ ವೇಳೆ ಸುಮಾರು 200 ಮಾದರಿಗಳಲ್ಲಿ ವೈರಸ್‌ನ ವಂಶವಾಹಿಗಳಲ್ಲಿ ಪರಿವರ್ತನೆಯಾಗಿರುವುದು ಇದನ್ನು ಸೂಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘‘ಕೋವಿಡ್-19 ಸಾಂಕ್ರಾಮಿಕವು 2019 ಅಕ್ಟೋಬರ್ 6 ಮತ್ತು ಡಿಸೆಂಬರ್ 11ರ ನಡುವಿನ ಅವಧಿಯಲ್ಲಿ ಆರಂಭಗೊಂಡಿದೆ. ಈ ಅವಧಿಯಲ್ಲಿ ವೈರಸ್ ಪ್ರಾಣಿಯೊಂದರಿಂದ ಮಾನವನಿಗೆ ಬಂದಿದೆ ಎನ್ನುವುದನ್ನು ಫೈಲೋಜನೆಟಿಕ್ ಅಧ್ಯಯನವು ತಿಳಿಸಿದೆ’’ ಎಂದು ಫ್ರಾಂಕೋಯಿಸ್ ಬಲೂಸ್ ನೇತೃತ್ವದ ಸಂಶೋಧನಾ ತಂಡವು ‘ಇನ್‌ಫೆಕ್ಷನ್, ಜನೆಟಿಕ್ಸ್ ಆ್ಯಂಡ್ ಎವಲೂಶನ್’ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯೊಂದರಲ್ಲಿ ಬರೆದಿದೆ.

ಸಾಮಾನ್ಯವಾಗಿ ವೈರಸ್‌ಗಳಲ್ಲಿ ಸಂಭವಿಸುವಂತೆ, ಈ ನೂತನ-ಕೊರೋನ ವೈರಸ್ ಕೂಡ ಹಿಂದೆಯೂ ರೂಪಾಂತರಗೊಳ್ಳುತ್ತಿತ್ತು ಮತ್ತು ಈಗಲೂ ರೂಪಾಂತರಗೊಳ್ಳುತ್ತಿದೆ ಎನ್ನುವುದು ವೈಜ್ಞಾನಿಕ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ ಎಂದರು.

‘‘ಎಲ್ಲ ವೈರಸ್‌ಗಳು ಸಹಜವಾಗಿಯೇ ರೂಪಾಂತರಗೊಳ್ಳುತ್ತವೆ. ರೂಪಾಂತರಗಳು ಅವುಗಳಷ್ಟಕ್ಕೇ ಕೆಟ್ಟದೇನಲ್ಲ. ಹಾಗೂ ನೂತನ-ಕೊರೋನ ವೈರಸ್ ನಿರೀಕ್ಷೆಗಿಂತ ವೇಗವಾಗಿ ಅಥವಾ ನಿಧಾನವಾಗಿ ರೂಪಾಂತರಗೊಳ್ಳುತ್ತಿವೆ ಎನ್ನುವುದನ್ನು ಸಮರ್ಥಿಸುವ ಪುರಾವೆಗಳಿಲ್ಲ’’ ಎಂದು ವರದಿ ಹೇಳಿದೆ.

‘‘ನೂತನ-ಕೊರೋನ ವೈರಸ್ ಹೆಚ್ಚು ಅಥವಾ ಕಡಿಮೆ ಮಾರಕ ಮತ್ತು ಸಾಂಕ್ರಾಮಿಕವಾಗುತ್ತಿದೆಯೇ ಎನ್ನುವುದನ್ನು ಸದ್ಯಕ್ಕೆ ಹೇಳಲು ನಮಗೆ ಸಾಧ್ಯವಿಲ್ಲ’’ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X