ನನ್ನ ಸಹೋದರರ ಸಾವಿನ ಸುದ್ದಿ ಕೇಳಿ ಆಘಾತವಾಯಿತು: ರಾಹುಲ್ ಗಾಂಧಿ
ಹೊಸದಿಲ್ಲಿ, ಮೇ 8: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಗೂಡ್ಸ್ ರೈಲು ಹರಿದು 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದರು.
ನನ್ನ ಕಾರ್ಮಿಕರು ಹಾಗೂ ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವಾನ ಹೇಳುವೆ.ಅಪಘಾತದಲ್ಲಿ ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
Next Story