Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಅರಿಯದ ಕನ್ನಡಿಗನಿಂದ ತುಳುಲಿಪಿಗಾಗಿ...

ತುಳು ಅರಿಯದ ಕನ್ನಡಿಗನಿಂದ ತುಳುಲಿಪಿಗಾಗಿ ಆ್ಯಪ್ ಅಭಿವೃದ್ಧಿ!

ವಾರ್ತಾಭಾರತಿವಾರ್ತಾಭಾರತಿ8 May 2020 5:57 PM IST
share
ತುಳು ಅರಿಯದ ಕನ್ನಡಿಗನಿಂದ ತುಳುಲಿಪಿಗಾಗಿ ಆ್ಯಪ್ ಅಭಿವೃದ್ಧಿ!

ಉಡುಪಿ, ಮೇ 8: ತುಳು ಭಾಷೆ ಅರಿಯದ ಬೆಂಗಳೂರಿನ ಸಾಫ್ಟವೇರ್ ಉದ್ಯೋಗಿಯೊಬ್ಬರು, ಭಾಷೆಯ ಮೇಲಿನ ಆಸಕ್ತಿಯಿಂದ, ಅದರ ಲಿಪಿ ಬರೆಯಲು ಅನುಕೂಲವಾಗುವಂತೆ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ.

ತುಳು ಭಾಷೆ ಮಾತನಾಡಲು ಬಾರದ, ಸರಿಯಾಗಿ ಅರ್ಥ ಮಾಡಿಕೊಳ್ಳದ ದಾವಣಗೆರೆಯ ಲೋಹಿತ್ ಶಿವಮೂರ್ತಿ, ಅತ್ಯಂತ ಪ್ರಾಚೀನ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಲಿಪಿ ಬರೆಯಲು ‘ಪದ-ತುಳು’ ಎಂಬ ಆ್ಯಪ್‌ನ್ನು ರಚಿಸಿದ್ದು, ವಿಶೇಷ ಸಾಧನೆ ಮಾಡಿದ್ದಾರೆ.

2012ರಲ್ಲಿ ಕರಾವಳಿಯಲ್ಲಿ ನಡೆದ ತುಳು ಸಾಹಿತ್ಯ ಸಮ್ಮೇಳನದಲ್ಲಿ ಅಕಸ್ಮಿಕ ವಾಗಿ ಪಾಲ್ಗೊಂಡಿದ್ದ ಲೋಹಿತ್ ಶಿವಮೂರ್ತಿ, ತನ್ನಲ್ಲಿ ಮೂಡಿದ ಚಿಂತನೆಯ ಹಿನ್ನೆಲೆ ತುಳುಲಿಪಿಗೆ ಸಂಬಂಧಿಸಿ ಹಿರಿಯ ವಿಜ್ಞಾನಿ ಕೆ.ಪಿ.ರಾವ್ ಅವರೊಂದಿಗೆ ಮಾತುಕತೆ ನಡೆಸಿದರು. ಹೀಗೆಕಣಾದ ಎಂಬ ತಂಡದಿಂದ ಸಿದ್ಧವಾದ ತುಳು ಯುನಿಕೋಡ್ ಫಾಂಟ್(ತುಳುಸಿರಿ) ಬಳಸಿಕೊಂಡು ಆ್ಯಪ್‌ನ್ನು ಅಭಿವೃದ್ಧಿ ಪಡಿಸುವಲ್ಲಿ ಲೋಹಿತ್ ಯಶಸ್ವಿಯಾಗಿದ್ದಾರೆ.

ಆ್ಯಪ್ ಪ್ಲೇಸ್ಟೋರ್‌ನಲ್ಲಿ ಲಭ್ಯ: ಗೂಗಲ್ ಆ್ಯಂಡ್ರಾಯ್ಡ್ ಪ್ಲೇಸ್ಟೋರ್‌ನಲ್ಲಿ ಪದ-ತುಳು ಆ್ಯಪ್ ಲಭ್ಯವಿದೆ. ಆ್ಯಪ್ ಡೌನ್‌ಲೋಡ್ ಮಾಡಿ ಇಂಗ್ಲಿಷ್ ಅಕ್ಷರದಲ್ಲಿ ತುಳುವನ್ನು ಟೈಪ್ ಮಾಡಿದಾಗ ತುಳು ಲಿಪಿ ಅಕ್ಷರಗಳಾಗಿ ಪರಿವರ್ತನೆಯಾಗುತ್ತದೆ. ಇದನ್ನು ಸರಳವಾಗಿ ಬಳಸಲು ಅನುಕೂಲವಾಗುವಂತೆ ರೂಪಿಸಲಾಗಿದೆ.

ಲಿಪಿಗಳಿಗೆ ಸಂಬಂಧಿಸಿದ ಸಾಫ್ಟ್‌ವೇರ್‌ಗಳನ್ನು ಅಭಿವೃದ್ಧಿಪಡಿಸುವುದು ಲೋಹಿತ್ ಹವ್ಯಾಸ ಆಗಿದೆ. ಇವರಿಗೆ ಭಾಷೆ ಮತ್ತು ಲಿಪಿಗಳ ಬಗ್ಗೆ ಇರುವ ಅತೀವ ಪ್ರೀತಿ, ಅಭಿಮಾನವೇ ಅರಿಯದ ತುಳುಭಾಷೆಗೆ ಆ್ಯಪ್ ರಚನೆ ಮಾಡಲು ಮೂಲ ಕಾರಣವಾಗಿದೆ. ಇವರು ಈ ಹಿಂದೆ ರೂಪಿಸಿದ ಪದ - ಕನ್ನಡ ಆ್ಯಪ್ ಕೂಡ ಸಾಕಷ್ಟು ಸುದ್ದಿ ಮಾಡಿತ್ತು.

‘ತುಳು ಭಾಷೆ ಗೊತ್ತಿಲ್ಲದಿದ್ದರೂ ಅದಕ್ಕೊಂದು ಆ್ಯಪ್ ಅಭಿವೃದ್ಧಿಪಡಿಸುವಂತೆ ಆಗಿರುವುದಕ್ಕೆ ತುಂಬಾ ಖುಷಿ ಆಗುತ್ತದೆ. ಈ ಆ್ಯಪ್‌ನಲ್ಲಿ ಇನ್ನೂ ಸುಧಾರಣೆ ಕೆಲಸಗಳು ನಡೆಯುತ್ತಿವೆ. ಈ ಆ್ಯಪ್‌ನಲ್ಲಿ ಟೈಪ್ ಮಾಡಿರುವ ಅಕ್ಷರಗಳನ್ನು ಸ್ಕ್ರೀನ್‌ಶಾಟ್ ತೆಗೆದು ಬೇರೆ ಕಡೆಗಳಲ್ಲಿ ಪೋಸ್ಟ್ ಮಾಡಬಹುದಾಗಿದೆ ಎಂದು ಲೋಹಿತ್ ಶಿವಮೂರ್ತಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X