Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಉಷ್ಣ, ನಿರ್ಜಲೀಕರಣ, ಮಲಬದ್ಧತೆಯಿಂದ...

ಉಷ್ಣ, ನಿರ್ಜಲೀಕರಣ, ಮಲಬದ್ಧತೆಯಿಂದ ಮುಕ್ತಿ ಪಡೆಯಲು ಇದನ್ನು ಸೇವಿಸಿ

ವಾರ್ತಾಭಾರತಿವಾರ್ತಾಭಾರತಿ8 May 2020 10:19 PM IST
share

ಉರಿಬಿಸಿಲಿನ ಈ ದಿನಗಳಲ್ಲಿ ಚೇತರಿಸಿಕೊಳ್ಳಲು ತಣ್ಣನೆಯ ಮತ್ತು ಶಕ್ತಿದಾಯಕ ಪೇಯಗಳನ್ನು ಸೇವಿಸುವುದು ಅಗತ್ಯವಾಗಿದೆ. ಇಂತಹ ಹಲವಾರು ಪೇಯಗಳ ಪೈಕಿ ಮಜ್ಜಿಗೆಯು ಬೇಸಿಗೆಯಲ್ಲಿ ಹಲವಾರು ಆರೋಗ್ಯಲಾಭಗಳನ್ನು ನೀಡುತ್ತದೆ. ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದಾದ ಮಜ್ಜಿಗೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವಾರು ಕಾಯಿಲೆಗಳನ್ನು ದೂರವಿರಿಸಬಹುದು.

ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಕಡಿಮೆಯಾಗಿರುವವರು ಮಜ್ಜಿಗೆಯನ್ನು ಅತ್ಯಗತ್ಯವಾಗಿ ಸೇವಿಸಬೇಕು. ಅದರಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳು,ಕಾರ್ಬೊಹೈಡ್ರೇಟ್‌ಗಳು ಮತ್ತು ಲ್ಯಾಕ್ಟಿಕ್ ಆಮ್ಲ ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಆಯುರ್ವೇದದಲ್ಲಿ ಮಜ್ಜಿಗೆಯನ್ನು ಸಾತ್ವಿಕ ಆಹಾರ ಎಂದು ಪರಿಗಣಿಸಲಾಗಿದೆ. ಮೊಸರಿನಿಂದ ತಯಾರಾಗುವ ಈ ಪೇಯವು ಆರೋಗ್ಯಕ್ಕೆ ಅತ್ಯಂತ ಲಾಭಕಾರಿಯಾಗಿದೆ. ಭಾರೀ ಅಥವಾ ಹೆಚ್ಚು ಮಸಾಲೆಯುಕ್ತ ಊಟದ ಪರಿಣಾಮವಾಗಿ ಆ್ಯಸಿಡಿಟಿ ಉಂಟಾದಾಗ ಒಂದು ಗ್ಲಾಸ್ ಮಜ್ಜಿಗೆಯನ್ನು ಕುಡಿದುಬಿಡಿ,ಅದು ಹೊಟ್ಟೆಗೆ ಅತ್ಯಂತ ಹಿತಕರವಾಗಿರುತ್ತದೆ. ನಮ್ಮ ತಲೆಗೂದಲು ಮತ್ತು ಚರ್ಮದ ಆರೋಗ್ಯಕ್ಕೂ ಪೂರಕವಾಗಿರುವ ಮಜ್ಜಿಗೆಯ ಈ ಐದು ಆರೋಗ್ಯಲಾಭಗಳು ನಿಮಗೆ ಗೊತ್ತಿರಲಿ.

► ತೂಕವನ್ನು ಇಳಿಸುತ್ತದೆ

ಶರೀರದ ತೂಕವನ್ನು ಇಳಿಸಿಕೊಳ್ಳಲು ಬಯಸುವವರಿಗೆ ಮಜ್ಜಿಗೆಯು ಎಲ್ಲಕ್ಕಿಂತ ಅತ್ಯುತ್ತಮ ಪೇಯವಾಗಿದೆ. ಮಜ್ಜಿಗೆಯಲ್ಲಿ ಅತ್ಯಂತ ಕಡಿಮೆ ಕ್ಯಾಲರಿಗಳು ಇರುತ್ತವೆ,ಕೊಬ್ಬು ಇರುವುದಿಲ್ಲ. ಅದು ಸಮೃದ್ಧ ಪೋಷಕಾಂಶಗಳು ಮತ್ತು ಕಿಣ್ವಗಳನ್ನು ಒಳಗೊಂಡಿದೆ. ಇದು ಶರೀರಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ ಮತ್ತು ಶರೀರಕ್ಕೆ ಅಗತ್ಯವಾದ ದ್ರವಾಂಶವನ್ನು ಒದಗಿಸುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ಪೊಟ್ಯಾಷಿಯಂ ಸೇರಿದಂತೆ ಹಲವಾರು ಖನಿಜಗಳು,ಪ್ರೋಟಿನ್ ಮತ್ತು ವಿಟಾಮಿನ್‌ಗಳು ಶರೀರದಲ್ಲಿ ಶಕ್ತಿ ಮಟ್ಟವನ್ನು ಕಾಯ್ದುಕೊಳ್ಳಲು ನೆರವಾಗುತ್ತವೆ. ಹಸಿವನ್ನು ನಿಯಂತ್ರಿಸಲು ಇದು ಅದ್ಭುತ ಪೇಯವಾಗಿದೆ.

► ನಿರ್ಜಲೀಕರಣವನ್ನು ತಡೆಯುತ್ತದೆ

ನಮ್ಮ ಶರೀರದಿಂದ ಅತಿಯಾದ ಪ್ರಮಾಣದಲ್ಲಿ ದ್ರವಗಳು ಹೊರಗೆ ಹಾಕಲ್ಪಟ್ಟಾಗ ತಲೆ ಸುತ್ತುವಿಕೆ ಮತ್ತು ಸಂಪೂರ್ಣ ಶಕ್ತಿಗುಂದಿದ ಅನುಭವವಾಗುತ್ತದೆ. ಈ ಸ್ಥಿತಿಯನ್ನು ನಿರ್ಜಲೀಕರಣ ಎನ್ನಲಾಗುತ್ತದೆ. ನಿರ್ಜಲೀಕರಣವು ಸಾಮಾನ್ಯವಾಗಿ ಬೇಸಿಗೆಯ ದಿನಗಳಲ್ಲಿ ಅತಿಯಾದ ತಾಪಮಾನದಿಂದಾಗಿ ಉಂಟಾಗುತ್ತದೆ. ಬೆವರುವಿಕೆ,ವಾಂತಿ ಮತ್ತು ಅತಿಸಾರ ಇತ್ಯಾದಿಗಳು ನಿರ್ಜಲೀಕರಣದ ಕೆಲವು ಸಾಮಾನ್ಯ ಲಕ್ಷಣಗಳಾಗಿವೆ. ಒಂದು ಗ್ಲಾಸ್ ಮಜ್ಜಿಗೆಗೆ ಕೊಂಚ ಉಪ್ಪು,ಜೀರಿಗೆ ಮತ್ತು ಕರಿಮೆಣಸಿನ ಹುಡಿಯನ್ನು ಸೇರಿಸಿಕೊಂಡು ಸೇವಿಸಿದರೆ ಬೇಸಿಗೆಯ ದಿನಗಳಲ್ಲಿ ನಿರ್ಜಲೀಕರಣದಿಂದ ಪಾರಾಗಬಹುದು. ಈ ಪೇಯವು ಸಮೃದ್ಧ ವಿದ್ಯುದ್ವಿಚ್ಛೇದ್ಯಗಳನ್ನು ಒಳಗೊಂಡಿರುತ್ತದೆ ಮತ್ತು ಇವು ಶರೀರದಲ್ಲಿ ನೀರಿನ ನಷ್ಟವನ್ನು ಸರಿದೂಗಿಸುತ್ತವೆ.

► ಮೂಳೆಗಳನ್ನು ಬಲಗೊಳಿಸುತ್ತದೆ

ಮಜ್ಜಿಗೆಯನ್ನು ಸೇವಿಸುವುದರಿಂದ ಅಧಿಕ ಪ್ರಮಾಣದಲ್ಲಿ ಕ್ಯಾಲ್ಸಿಯಂ ನಮ್ಮ ಶರೀರಕ್ಕೆ ಲಭಿಸುತ್ತದೆ. ನಮ್ಮ ಶರೀರಕ್ಕೆ ದಿನವೊಂದಕ್ಕೆ 1,000 ಎಂ.ಜಿ.ಕ್ಯಾಲ್ಸಿಯಂ ಅಗತ್ಯವಿದೆ. ಒಂದು ಕಪ್ ಮಜ್ಜಿಗೆಯಲ್ಲಿ ಸುಮಾರು 284 ಎಂ.ಜಿ.ಕ್ಯಾಲ್ಸಿಯಂ ಇರುತ್ತದೆ ಮತ್ತು ಇದು ನಮ್ಮ ದೈನಂದಿನ ಅಗತ್ಯದ ಶೇ.28ರಷ್ಟನ್ನು ಪೂರೈಸುತ್ತದೆ. ನಮಗೆ ವಯಸ್ಸಾಗುತ್ತ ಹೋದಂತೆ ಮೂಳೆಗಳ ಸಾಂದ್ರತೆಯೂ ಕಡಿಮೆಯಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಸೇವನೆ ಎಲ್ಲ ವಯೋಮಾನದವರಲ್ಲಿಯೂ ಮೂಳೆಗಳನ್ನು ಸದೃಢವಾಗಿರಿಸುತ್ತದೆ.

► ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ವೈದ್ಯಕೀಯ ಮಾರ್ಗಸೂಚಿಗಳಂತೆ ರಕ್ತದೊತ್ತಡವು 130/80 ಎಂಎಂಎಚ್‌ಜಿಗಿಂತ ಹೆಚ್ಚಾಗಿದ್ದರೆ ಅದು ಹೈಪರ್‌ಟೆನ್ಶನ್ ಅಥವಾ ಅಧಿಕ ರಕ್ತದೊತ್ತಡ ಎಂದು ಕರೆಸಿಕೊಳ್ಳುತ್ತದೆ. ಮಜ್ಜಿಗೆಯಲ್ಲಿ ಸಮೃದ್ಧವಾಗಿರುವ ಬಯೊಆ್ಯಕ್ಟಿವ್ ಪ್ರೋಟಿನ್ ರಕ್ತದೊತ್ತಡವನ್ನು ತಗ್ಗಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಸಂಶೋಧನೆಗಳು ಬೆಟ್ಟು ಮಾಡಿವೆ. ಅದು ಬ್ಯಾಕ್ಟೀರಿಯಾ ನಿರೋಧಕ ಮತ್ತು ವೈರಾಣು ನಿರೋಧಕವೂ ಆಗಿದೆ. ಪ್ರತಿದಿನ ಮಜ್ಜಿಗೆಯನ್ನು ಸೇವಿಸುವುದರಿಂದ ರಕ್ತದೊತ್ತಡವು ನಿಯಂತ್ರಣದಲ್ಲಿರುತ್ತದೆ ಮತ್ತು ಯಾವುದೇ ಹೃದಯ ಸಮಸ್ಯೆಗಳು ಉಂಟಾಗುವುದಿಲ್ಲ.

► ಮಲಬದ್ಧತೆಯನ್ನು ನಿವಾರಿಸುತ್ತದೆ

ಮಜ್ಜಿಗೆಯು ಶತಮಾನಗಳಿಂದಲೂ ವಾಯು ತೊಂದರೆ ಮತ್ತು ಮಲಬದ್ಧತೆಯನ್ನು ನಿವಾರಿಸಲು ಬಳಕೆಯಾಗುತ್ತಿದೆ. ಸಮತೋಲನವಿಲ್ಲದ ಆಹಾರವು ಅತಿಸಾರ ಅಥವಾ ಮಲಬದ್ಧತೆಯನ್ನು ಉಂಟು ಮಾಡುತ್ತದೆ. ಮಜ್ಜಿಗೆಯಲ್ಲಿ ನಾರು ಇರುವುದರಿಂದ ಅದರ ಸೇವನೆಯು ಕರುಳಿನ ಚಲನವಲನಗಳನ್ನು ಕ್ರಮಬದ್ಧಗೊಳಿಸುತ್ತದೆ ಮತ್ತು ಮಲಬದ್ಧತೆಯಿಂದ ಮುಕ್ತಿ ನೀಡುತ್ತದೆ. ಜೊತೆಗೆ ಜೀರ್ಣಾಂಗವನ್ನು ಮರಳಿ ಸುಸ್ಥಿತಿಗೆ ತರಲೂ ನೆರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X