Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಂಡ್ಯ: ವಲಸೆ ಕಾರ್ಮಿಕರನ್ನು ಅಕ್ರಮವಾಗಿ...

ಗುಂಡ್ಯ: ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಕರೆದೊಯ್ಯುತ್ತಿದ್ದ 2 ಲಾರಿಗಳಿಗೆ ತಡೆ

ಉತ್ತರ ಭಾರತದ 120 ಕಾರ್ಮಿಕರು ಮತ್ತೆ ಮಂಗಳೂರಿಗೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ9 May 2020 1:49 PM IST
share
ಗುಂಡ್ಯ: ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಕರೆದೊಯ್ಯುತ್ತಿದ್ದ 2 ಲಾರಿಗಳಿಗೆ ತಡೆ

ನೆಲ್ಯಾಡಿ, ಮೇ 9: ಎರಡು ಲಾರಿಗಳಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಮಾರ್ಗವಾಗಿ ಉತ್ತರ ಭಾರತದತ್ತ ಹೊರಟಿದ್ದ 120 ವಲಸೆ ಕಾರ್ಮಿಕರನ್ನು ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆದು ಮತ್ತೆ ಮಂಗಳೂರಿಗೆ ಕಳುಹಿಸಿದ ಘಟನೆ ವರದಿಯಾಗಿದೆ.

ಉತ್ತರ ಭಾರತ ಮೂಲದ 120 ಕಾರ್ಮಿಕರನ್ನು ಹೇರಿಕೊಂಡು ಹರ್ಯಾಣ ನೋಂದಣಿಯ ಎರಡು ಲಾರಿಗಳು ಬೆಂಗಳೂರು ಮಾರ್ಗವಾಗಿ ಉತ್ತರ ಭಾರತದತ್ತ ಹೊರಟಿತ್ತು. ಎರಡೂ ಲಾರಿಗಳಿಗೆ ಮೇಲ್ಭಾಗದಲ್ಲಿ ಟರ್ಪಾಲ್ ಹೊದಿಸಲಾಗಿದ್ದು, ಅಗತ್ಯ ವಸ್ತುಗಳ ಸಾಗಾಟದ ಸ್ಟಿಕ್ಕರ್ ಸಹ ಅಂಟಿಸಲಾಗಿತ್ತೆನ್ನಲಾಗಿದೆ. ಮೇ 8ರಂದು ಮುಂಜಾನೆ 3 ಗಂಟೆ ಸುಮಾರಿಗೆ ಗುಂಡ್ಯ ಚೆಕ್‌ಪೋಸ್ಟ್ ತಲುಪಿದ ಈ ಲಾರಿಗಳನ್ನು ಪೊಲೀಸರು ತಪಾಸಣೆ ನಡೆಸಿದಾಗ ಅಕ್ರಮವಾಗಿ ಜನರನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲಾರಿಗಳನ್ನು ಪೊಲೀಸರು ತಡೆದು ಅದರಲ್ಲಿದ್ದ ಕಾರ್ಮಿಕರನ್ನು ಗುಂಡ್ಯ ಪಿಲಿಕಜೆ ಶಾಲೆಗೆ ಕರೆದೊಯ್ದರು. ಆದರೆ ಕಾರ್ಮಿಕರು ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ಪಟ್ಟುಹಿಡಿದು ಕುಳಿತಿದ್ದರು.

ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಮಧ್ಯಾಹ್ನದ ವೇಳೆಗೆ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಮನವೊಲಿಸಲು ಪ್ರಯತ್ನಿಸಿದರು. ಈ ವೇಳೆ ಮಾತನಾಡಿದ ಕಾರ್ಮಿಕರು, ಮಂಗಳೂರಿಗೆ ಬಟ್ಟೆ ವ್ಯಾಪಾರಕ್ಕೆಂದು ನಾವು ಬಂದಿದ್ದೇವೆ. ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೇ ತಿಂಗಳಿನಿಂದ ಕೆಲಸವೂ ಇಲ್ಲದೇ ಹಣವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದೇವೆ. ವಾಸ್ತವ್ಯಕ್ಕೆ ಸರಿಯಾದ ವ್ಯವಸ್ಥೆಯೂ ಇಲ್ಲ. ಆದ್ದರಿಂದ ನಮ್ಮನ್ನು ಊರಿಗೆ ಕಳುಹಿಸಿಕೊಡಬೇಕು ಎಂದು ಪಟ್ಟು ಹಿಡಿದರು.

ಇದಕ್ಕೆ ಒಪ್ಪದ ಸಹಾಯಕ ಆಯುಕ್ತರು, ನೀವು ಹೊರ ರಾಜ್ಯಕ್ಕೆ ಪ್ರಯಾಣಿಸಲು ಇಲ್ಲಿನ ಜಿಲ್ಲಾಧಿಕಾರಿಯಿಂದ ಅನುಮತಿ ಪತ್ರ ಪಡೆದುಕೊಳ್ಳಬೇಕು. ನಂತರ ನಿಮ್ಮ ಊರಿನ ಜಿಲ್ಲಾಧಿಕಾರಿಗಳಿಂದಲೂ ಅನುಮತಿ ಸಿಗಬೇಕು. ಕೊರೋನ ಹರಡದಂತೆ ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಿನ ಕ್ರಮಗಳಿರುವುದರಿಂದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅನುಮತಿ ಪತ್ರವಿಲ್ಲದೇ ಹೋಗುವಂತಿಲ್ಲ. ಆದ್ದರಿಂದ ಜಿಲ್ಲಾಡಳಿತದಿಂದ ಅನುಮತಿ ಪಡೆದು ಬಳಿಕ ನಿಮ್ಮೂರಿಗೆ ಕಳುಹಿಸಿಕೊಡಲಾಗುವುದು. ಅಲ್ಲಿಯ ತನಕ ಮಂಗಳೂರಿನಲ್ಲಿ ತಂಗಲು ಹಾಗೂ ಊಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕೊನೆಗೆ ಕಾರ್ಮಿಕರು ಇದಕ್ಕೆ ಒಪ್ಪಿದರು. ಬಳಿಕ ಅವರಿಗೆ ಮತ್ತೆ ಮಂಗಳೂರಿಗೆ ತೆರಳಲು ಮೂರು ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಯಿತು. ಸುಬ್ರಹ್ಮಣ್ಯ ದೇವಸ್ಥಾನದಿಂದ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಈ ನಡುವೆ ಯಾವುದೇ ಅನುಮತಿ ಇಲ್ಲದೇ ಕಾರ್ಮಿಕರನ್ನು ತುಂಬಿಸಿಕೊಂಡು ಸಾಗಾಟ ಮಾಡಿದ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆಯೂ ಸಹಾಯಕ ಆಯುಕ್ತರು ಪೊಲೀಸರಿಗೆ ಸೂಚಿಸಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X