Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ...

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕರಿಬ್ಬರ ಮೇಲೆ ಹಲ್ಲೆಗೈದ ಪೊಲೀಸರು; ವಿಡಿಯೋ ವೈರಲ್

ಪೊಲೀಸರ ಮುಂದೆಯೇ ಥಳಿಸಿದ ಸ್ಥಳೀಯ: ಸಿಬ್ಬಂದಿಯ ವರ್ತನೆಗೆ ಭಾರೀ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 May 2020 7:52 PM IST
share
ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕರಿಬ್ಬರ ಮೇಲೆ ಹಲ್ಲೆಗೈದ ಪೊಲೀಸರು; ವಿಡಿಯೋ ವೈರಲ್

ಓರ್ವ ವಶಕ್ಕೆ, ಪೊಲೀಸರಿಗಾಗಿ ಹುಡುಕಾಟ: ಡಿಸಿಪಿ

ಬೆಂಗಳೂರು, ಮೇ.9: ರಾಜಧಾನಿ ಬೆಂಗಳೂರಿನಲ್ಲಿ ಯುವಕರಿಬ್ಬರನ್ನು ಗುರಿಯಾಗಿಸಿಕೊಂಡು, ಪೊಲೀಸ್ ಸಿಬ್ಬಂದಿ ಗಂಭೀರ ಹಲ್ಲೆ ನಡೆಸಿ, ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಗರದ ಪಾದರಾಯನಪುರ ನಿವಾಸಿಗಳಾದ ಮುಹಮ್ಮದ್ ಶಾಹೀದ್(18) ಹಾಗೂ ಹುಸೈಫ್ ಎಂಬುವರ ಮೇಲೆ ಇಲ್ಲಿನ ಕೊಡಿಗೇಹಳ್ಳಿ ಪೊಲೀಸ್  ಠಾಣೆಯ ಇಬ್ಬರು ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳದಲ್ಲಿಯೇ ಗುಂಪು ಹಲ್ಲೆಗೂ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಠಾಣೆಗೆ ದೂರು: ಶುಕ್ರವಾರ ಬೆಳಗ್ಗೆ ಇಲ್ಲಿನ ಜಕ್ಕೂರು ಜಂಕ್ಷನ್ ಬಳಿ ಸ್ನೇಹಿತ ಯಾಸರ್ ಎಂಬಾತನನ್ನು ಮುಹಮ್ಮದ್ ಶಾಹೀದ್ ಹಾಗೂ ಹುಸೈಫ್ ಭೇಟಿ ಮಾಡಲು ಸ್ಕೂಟರ್ ನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಸಹಕಾರ ನಗರದಲ್ಲಿ ಕೆಲ ಯುವಕರು ಬೈಕ್ ಗಳಲ್ಲಿ ವೀಲ್ಹಿಂಗ್ ಮಾಡುತ್ತಿದ್ದು, ಅವರನ್ನು ಸಾರ್ವಜನಿಕರು ಹಿಡಿಯಲು ಮುಂದಾಗಿದ್ದಾರೆ. ಇದೇ ಮಾರ್ಗವಾಗಿ ಈ ಇಬ್ಬರನ್ನು ನೋಡಿದ ಕೆಲವರು, ಇವರು ಸಹ ವೀಲ್ಹಿಂಗ್ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಹಿಡಿಯಲು ಮುಂದಾಗಿದ್ದಾರೆ.

ಈ ವೇಳೆ ಗಾಬರಿಗೊಂಡ ಮುಹಮ್ಮದ್ ಶಾಹೀದ್ ಹಾಗೂ ಹುಸೈಫ್, ಸ್ಕೂಟರ್ ಚಾಲನೆ ಮಾಡಿಕೊಂಡು ತೆರಳಿದಾಗ, ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಇವರನ್ನು ಹಿಡಿದು, ಮರದ ದೊಣ್ಣೆ ಮತ್ತು ಕಾಲಿನಿಂದ ಒದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಮುಹಮ್ಮದ್  ಶಾಹೀದ್ ನೀಡಿರುವ ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಅಷ್ಟೇ ಅಲ್ಲದೆ, ಅಲ್ಲಿದ್ದ ಸಾರ್ವಜನಿಕರು ಹಲ್ಲೆ ನಡೆಸುವಂತೆ ಪೊಲೀಸರೇ ಸಹಾಯ ಮಾಡಿದ್ದಾರೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ಶಾಹೀದ್ ಮತ್ತು ಹುಸೈಫ್, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಶನಿವಾರ ಇಲ್ಲಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ವಿಡಿಯೋ ವೈರಲ್
ಯುವಕರಿಬ್ಬರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿರುವ ಪೇದೆಗಳ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಅಧಿಕಾರವನ್ನು  ದುರುಪಯೋಗಪಡಿಸಿಕೊಂಡು ಉದ್ದೇಶ ಪೂರ್ವಕವಾಗಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಗಂಭೀರ ಹಲ್ಲೆ ನಡೆಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆ ಆಗಿವೆ.

ಬಂಧಿಸಿ, ತನಿಖೆ ನಡೆಸಬೇಕು.
ಘಟನೆ ಸಂಬಂಧ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಆದರೆ, ಇಲ್ಲಿನ ಪೊಲೀಸ್ ಪೇದೆಗಳೇ ಯುವಕರನ್ನು ಗುರಿಯಾಗಿಸಿಕೊಂಡು  ದಂಡಿಸಿರುವುದು ಸೂಕ್ತ ಕ್ರಮವಲ್ಲ. ಈ ಸಂಬಂಧ ಪೊಲೀಸ್ ಪೇದೆಗಳನ್ನು ಈ ಕೂಡಲೇ ಬಂಧಿಸಿ, ಉನ್ನತ ತನಿಖೆ ನಡೆಯಬೇಕು.
-ಇಮ್ರಾನ್ ಪಾಷಾ, ಬಿಬಿಎಂಪಿಯ ಜೆಡಿಎಸ್ ಸದಸ್ಯ

ನಾವು ತಪ್ಪು ಮಾಡಿಲ್ಲ: ಮುಹಮ್ಮದ್ ಶಾಹೀದ್
ನಾವು ವೀಲ್ಹಿಂಗ್ ಮಾಡಿಲ್ಲ. ಆದರೂ, ನಮ್ಮ ಮೇಲೆ ಪೊಲೀಸರು ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿಯೇ ಹಲ್ಲೆ ನಡೆಸಿದರು. ಕ್ಷಮೆಯಾಚಿಸಿದರೂ, ಚಿತ್ರಹಿಂಸೆ ನೀಡಿದರು ಎಂದು ದೂರುದಾರ ಮುಹಮ್ಮದ್ ಶಾಹೀದ್ ಕಣ್ಣೀರು ಹಾಕಿದರು.

ಓರ್ವ ವಶಕ್ಕೆ, ಪೊಲೀಸರಿಗಾಗಿ ಹುಡುಕಾಟ:ಡಿಸಿಪಿ
ಯುವಕರಿಬ್ಬರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ವಿಡಿಯೊ ದೃಶ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಗಾಯಾಳು ಯುವಕರನ್ನು ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಹೊಯ್ಸಳ ವಾಹನದ ಸಿಬ್ಬಂದಿ ಕರೆತಂದಿದ್ದರು. ತಪ್ಪಿತಸ್ಥರು ಎನ್ನಲಾದ ಪೇದೆಗಳಿಗಾಗಿ ಹುಡುಕಾಟ ನಡೆಸಲಾಗಿದೆ.
-ಭೀಮಶಂಕರ್ ಗುಳೇದ್, ಡಿಸಿಪಿ, ಈಶಾನ್ಯ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X