Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕಿನಿಂದ ಆಗುವ ಸಾವಿನ ಸಂಖ್ಯೆ...

ಕೊರೋನ ಸೋಂಕಿನಿಂದ ಆಗುವ ಸಾವಿನ ಸಂಖ್ಯೆ ಕಡಿಮೆ ಮಾಡಲು ಆದ್ಯತೆ: ಟಿ.ಎಂ.ವಿಜಯ ಭಾಸ್ಕರ್

ವಾರ್ತಾಭಾರತಿವಾರ್ತಾಭಾರತಿ9 May 2020 10:55 PM IST
share
ಕೊರೋನ ಸೋಂಕಿನಿಂದ ಆಗುವ ಸಾವಿನ ಸಂಖ್ಯೆ ಕಡಿಮೆ ಮಾಡಲು ಆದ್ಯತೆ: ಟಿ.ಎಂ.ವಿಜಯ ಭಾಸ್ಕರ್

ಬೆಂಗಳೂರು, ಮೇ 9: ಕೊರೋನ ವೈರಸ್ ಸೋಂಕಿನ ವಿರುದ್ಧದ ಹೋರಾಟವನ್ನು ಮುಂದಿನ ಹಂತಕ್ಕೆ ಒಯ್ಯುತ್ತಿದ್ದು, ಗಂಭೀರ ರೋಗಿಗಳಿಗೆ ಶೀಘ್ರವಾಗಿ ಚಿಕಿತ್ಸೆ ನೀಡುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಜತೆಗೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಸಾವಿನ ಸಂಖ್ಯೆ ಕಡಿಮೆ ಮಾಡುವ ಕ್ರಮಗಳ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸಲಹೆ ಮಾಡಿದ್ದಾರೆ.

ಇತ್ತೀಚೆಗೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಮೇಲ್ಕಂಡ ಕ್ರಮದಿಂದ ರಾಜ್ಯದಲ್ಲಿ ಕೋವಿಡ್-19 ರೋಗಿಗಳ ಸಾವಿನ ದರವನ್ನು ಕಡಿಮೆ ಮಾಡಲು ನೆರವಾಗಲಿದೆ. ದೈನಂದಿನ ಆಧಾರದ ಮೇಲೆ ತೀವ್ರ ಉಸಿರಾಟದ ಅಸ್ವಸ್ಥತೆಗಳು(ಎಸ್‍ಎಆರ್‍ಐ) ಇರುವ ರೋಗಿಗಳು ಮತ್ತು ಗಂಭೀರ ಸ್ಥಿತಿಯಲ್ಲಿರುವ ರೋಗಿಗಳು ಹಾಗೂ ಐಸಿಯುನಲ್ಲಿರುವ ರೋಗಿಗಳ ವಿವರಗಳನ್ನು ದಾಖಲಿಸಿ ಗಮನಹರಿಸಲು ನೋಡಲ್ ಮತ್ತು ಉಪ ನೋಡಲ್ ಅಧಿಕಾರಿಗಳ ನಾಮನಿರ್ದೇಶನ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಾವು ಸೂಚನೆಯನ್ನು ನೀಡಿದ್ದೇವೆ ಎಂದರು.

ಪ್ರಸ್ತುತ ಚಿಕಿತ್ಸಾ ಶಿಷ್ಟಾಚಾರಗಳ ಮೇಲೆ ನಿಯೋಜಿತ ಆಸ್ಪತ್ರೆಗಳಲ್ಲಿ ಕೋವಿಡ್-19ರ ತಂಡಗಳಿಗೆ ತರಬೇತಿ ನಡೆಸಲು ಗಂಭೀರ ಆರೈಕೆ ಬೆಂಬಲ ತಂಡಕ್ಕೆ ಅಗತ್ಯ ಸಿದ್ಧತೆಗಳನ್ನು ನಾವು ಮಾಡಿರುತ್ತೇವೆ. ಉತ್ತಮವಾದ ರೋಗಿಯ ಆರೈಕೆಗಾಗಿ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಆರೈಕೆಯ ಬೆಂಬಲದ ತಂಡದ ಜೊತೆಗೆ ತಮ್ಮ ಸಂವಾದಗಳನ್ನು ಸರಳಗೊಳಿಸಿಕೊಳ್ಳಲು ಜಿಲ್ಲಾ ಸಮಿತಿಗಳನ್ನು ನಾವು ರಚಿಸಿದ್ದೇವೆ ಎಂದು ವಿಜಯ್ ಭಾಸ್ಕರ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಮಾತನಾಡಿ, ಎಲ್ಲ ರೋಗಿಗಳಿಗೆ ಪಲ್ಸ್ ಆಕ್ಸಿಮೀಟರ್‍ಗಳ ಬಳಕೆಯನ್ನು ಪರಿಣತರ ವೈದ್ಯರ ತಂಡ ಶಿಫಾರಸ್ಸು ಮಾಡಿದೆ. ಎಲ್ಲ ರೋಗಿಗಳು ಸಿಸಿಎಸ್‍ಟಿ ಮೂಲಕ ಅಗತ್ಯವಾಗಿ ಸಾಗುವಂತೆ ಮಾಡಲಾಗಿದೆ. ಶ್ವಾಸಕೋಶಗಳ ಸಮಸ್ಯೆ ಇರುವ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಬೇಕು ಎಂದೂ ನಾವು ಸಲಹೆ ನೀಡಿದ್ದೇವೆ.

ಸರಕಾರಿ ಆಸ್ಪತ್ರೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಕ್ಕಾಗಿ ಖಾಸಗಿ ಆಸ್ಪತ್ರೆಗಳಿಂದಲೂ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ರೋಗಿಯ ನಿರ್ವಹಣೆ ಕುರಿತು ಚರ್ಚೆ ನಡೆಸಲು ಜಿಲ್ಲೆಗಳಲ್ಲಿನ ಪರಿಣತರ ತಂಡದ ಜೊತೆಗೆ ತರಬೇತಿ ಅಧಿವೇಶನ ಸಿಸಿಎಸ್‍ಟಿ ಪರಿಣತರ ಸಮಿತಿ ನಡೆಸಲಿದೆ. ರೋಗಿಗಳಿಗಾಗಿ ಎರಡು ಅಥವಾ ಮೂರು ಹೈ ಫ್ಲೋ ನೇಸಲ್ ಕಾನೂಲಾ ಸಿಸ್ಟಮ್ಸ್ ಗಳನ್ನು ಪಡೆದುಕೊಳ್ಳಲು ಜಿಲ್ಲೆಗಳಿಗೆ ನಾವು ಸಲಹೆ ಮಾಡಿದ್ದೇವೆ ಮತ್ತು ರೋಗಿಗಳಿಗೆ ಹಸ್ತಕ್ಷೇಪರಹಿತ ನಾನ್ ಇನ್‍ವೇಸಿವ್ ವೆಂಟಿಲೇಷನ್‍ನ ಸಲಹೆ ನೀಡಲಾಗಿದೆ ಎಂದರು.

ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ಲಾಕ್‍ಡೌನ್ ತೆಗೆದುಹಾಕಿದ ನಂತರ ಕ್ಷಿಪ್ರಗತಿಯಲ್ಲಿ ಹೆಚ್ಚಿದ ಪ್ರಕರಣಗಳನ್ನು ನಿಭಾಯಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಸಂಸ್ಥೆಗಳನ್ನು ತೊಡಗಿಸಿಕೊಳ್ಳಲು ನಾವು ಯೋಚಿಸುತ್ತಿದ್ದೇವೆ. ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಅನುಸರಿಸಬೇಕಾದ ಪರೀಕ್ಷೆ ಮತ್ತು ಚಿಕಿತ್ಸಾ ಪಟ್ಟಿಯನ್ನು ವೈದ್ಯರಿಗೆ ನಾವು ಪೂರೈಸಲಿದ್ದೇವೆ ಎಂದರು.

ಕೋವಿಡ್-19ರಿಂದ ರೋಗಿಗಳು ಮೃತಪಟ್ಟ ನಂತರ ಶ್ವಾಸಕೋಶದ ಅಂಗಾಂಶ ಪರೀಕ್ಷೆಗಳನ್ನು ನಡೆಸಲು ಮತ್ತು ವೈದ್ಯಕೀಯ ಶವ ಪರೀಕ್ಷೆಗಳನ್ನು ನಡೆಸಲು ಪರವಾನಗಿ ಪಡೆಯುವುದಕ್ಕಾಗಿ ಐಸಿಎಂಆರ್‍ಗೆ ನಾವು ಅರ್ಜಿಯನ್ನು ಸಲ್ಲಿಸಲಿದ್ದೇವೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಹೆಚ್ಚಿನ ಪರಿಣಾಮಕಾರಿ ಆರೈಕೆಯನ್ನು ಪೂರೈಸಲು ಇದು ನೆರವಾಗುವುದಲ್ಲದೆ, ಸಾವಿನ ಸಂಖ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ' ಎಂದು ಪಾಂಡೆ ಹೇಳಿದರು.

ಸಭೆಯಲ್ಲಿ ಸಿಸಿಎಸ್‍ಟಿಯ ವಿಶೇಷ ಅಧಿಕಾರಿ ಮತ್ತು ಮುಖ್ಯಸ್ಥರು ಡಾ.ತ್ರಿಲೋಕ್ ಚಂದ್ರ, ಸಮಿತಿ ಸದಸ್ಯ ಸಾರ್ವಜನಿಕ ಆರೋಗ್ಯ ಪರಿಣತ ಡಾ.ಎಂ.ಕೆ.ಸುದರ್ಶನ್, ರಾಜೀವ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಸಚ್ಚಿದಾನಂದ, ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X