Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕೆಲವೇ ಸೆಕೆಂಡ್‌ಗಳಲ್ಲಿ ಎಲ್ಲವೂ ಮುಗಿದು...

‘ಕೆಲವೇ ಸೆಕೆಂಡ್‌ಗಳಲ್ಲಿ ಎಲ್ಲವೂ ಮುಗಿದು ಹೋಯಿತು’: ಕರಾಳ ರಾತ್ರಿಯ ಅನುಭವ

ವಾರ್ತಾಭಾರತಿವಾರ್ತಾಭಾರತಿ9 May 2020 11:25 PM IST
share
‘ಕೆಲವೇ ಸೆಕೆಂಡ್‌ಗಳಲ್ಲಿ ಎಲ್ಲವೂ ಮುಗಿದು ಹೋಯಿತು’: ಕರಾಳ ರಾತ್ರಿಯ ಅನುಭವ

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ದುರಂತದಲ್ಲಿ ಉಳಿದುಕೊಂಡ ವಲಸೆ ಕಾರ್ಮಿಕರೊಬ್ಬರು, ತಮ್ಮ ಕಣ್ಣೆದುರಿಗೇ ಸಹವರ್ತಿಗಳು ಶವವಾದ ಭಯಾನಕ ಘಟನೆಯನ್ನು ವಿವರಿಸುವುದೂ ಅಸಾಧ್ಯ ಎಂದು ಹೇಳಿದ್ದಾರೆ.

16 ಮಂದಿ ಸಹಚರರ ಶವದೊಂದಿಗೆ ಮಧ್ಯಪ್ರದೇಶದಲ್ಲಿರುವ ತಮ್ಮ ಹುಟ್ಟೂರಿಗೆ ವಾಪಸ್ಸಾಗುತ್ತಿರವ ಶಿವಮಾನ್‌ಸಿಂಗ್, ಈ ದುರಂತದ ಬಳಿಕ ನಿದ್ದೆ ಬರುತ್ತಿಲ್ಲ. ಕಣ್ಣು ಮುಚ್ಚಿದರೆ ಆ ಭಯಾನಕ ದುರಂತದ ಚಿತ್ರಣವೇ ಕಣ್ಣಿಗೆ ಕಟ್ಟುತ್ತದೆ ಎಂದು ಹೇಳಿದರು.

ಶುಕ್ರವಾರ ಮುಂಜಾನೆ ಈ ದುರಂತ ಸಂಭವಿಸಿದ ಬಳಿಕ ಹಲವು ಘಟನೆಗಳಾಗಿವೆ. ನಾನು ಸಂಪೂರ್ಣ ಬಳಲಿದ್ದರೂ, ರಾತ್ರಿ ನಿದ್ದೆ ಬರುತ್ತಿಲ್ಲ. ಆ ಭಯಾನಕ ಘಟನೆಯ ಚಿತ್ರಗಳೇ ಚಿತ್ತಪಟದಲ್ಲಿ ತುಂಬಿವೆ. ನನ್ನ ಕಣ್ಣೆದುರೇ ಅನಾವರಣಗೊಂಡ ದುರಂತವನ್ನು ಮರೆಯಲು ಸಾಧ್ಯವಿಲ್ಲ

ರೈಲು ದುರಂತದ ಸುದ್ದಿ ತಿಳಿದ ತಕ್ಷಣ ಕುಟಂಬದವರು ನನಗೆ ಪದೇ ಪದೇ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಚಾರ್ಜ್ ಮುಗಿದಿದ್ದರಿಂದ ಫೋನ್ ಆಫ್ ಆಗಿತ್ತು. ಘಟನೆ ಬಳಿಕ ಅಧಿಕಾರಿಗಳಿಗೆ ಮೃತಪಟ್ಟವರನ್ನು ಗುರುತಿಸುವಲ್ಲಿ ಮತ್ತು ಪ್ರಶ್ನೆಗಳಿಗೆ ಉತ್ತರಿಸುವಲ್ಲೇ ನಿರತನಾಗಿದ್ದೆ ಎಂದು ವಿವರಿಸಿದರು.

ಔರಂಗಾಬಾದ್‌ನ ಪಕ್ಕದ ಜಲ್ನಾ ಜಿಲ್ಲೆಯ ಉಕ್ಕು ಸ್ಥಾವರವೊಂದರಲ್ಲಿ ಸಿಂಗ್ ಹಾಗೂ 19 ಮಂದಿ ಕಾರ್ಮಿಕರು ಉದ್ಯೋಗದಲ್ಲಿದ್ದರು. ಲಾಕ್‌ಡೌನ್ ಕಾರಣದಿಂದ ಮಧ್ಯಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಇವರು 36 ಕಿಲೋಮೀಟರ್ ನಡೆದು ಕರ್ಮಡ್ ಸಮೀಪ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದರು. ನಿದ್ದೆಯಲ್ಲಿದ್ದ ಇವರ ಮೇಲೆ ಸರಕು ಸಾಗಾಣಿಕೆ ರೈಲು ಹರಿದು 16 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ನಾಲ್ಕು ಮಂದಿ ಪಾರಾಗಿದ್ದರು.

ನನಗೆ ಕಾಲು ನೋವು ಇದ್ದುದರಿಂದ ಇತರರಿಗಿಂತ ನಿಧಾನವಾಗಿ ನಡೆಯುತ್ತಿದ್ದೆ. ಘಟನೆಯ ಸ್ಥಳಕ್ಕೆ ನಾವು ಬಂದಾಗ ಅಲ್ಲೇ ನಿದ್ದೆ ಮಾಡಲು ನಿರ್ಧರಿಸಿದೆವು. ನಾನು ಸ್ವಲ್ಪ ದೂರದಲ್ಲಿ ಮಲಗಿದ್ದೆ. ವೇಗವಾಗಿ ಬರುವ ರೈಲಿನ ಸದ್ದು ಕೇಳಿಸಿದಾಗ ಎಚ್ಚರವಾಯಿತು. ಕೂಗಿಕೊಳ್ಳಲು ಪ್ರಯತ್ನಿಸಿದೆ. ಆದರೆ ಕೆಲವೇ ಸೆಕೆಂಡ್‌ಗಳಲ್ಲಿ ಎಲ್ಲವೂ ಮುಗಿದು ಹೋಗಿತ್ತು

ತವರು ರಾಜ್ಯಕ್ಕೆ ಮರಳಲು ಪಾಸ್‌ಗಾಗಿ ನಾವು ಪ್ರಯತ್ನಿಸಿದ್ದೆವು. ಆದರೆ ಯಾವುದೇ ಪ್ರತಿಕ್ರಿಯೆ ಸಿಕ್ಕಲಿಲ್ಲ. ಪತ್ನಿ ಹಾಗೂ ಮಕ್ಕಳು ಊರಿನಲ್ಲಿದ್ದು, ಕಾಲ್ನಡಿಗೆಯಲ್ಲೇ ಊರಿಗೆ ಮರಳಲು ನಿರ್ಧರಿಸಿದೆವು ಎಂದು ಘಟನೆಯಲ್ಲಿ ಉಳಿದುಕೊಂಡ ವೀರೇಂದ್ರ ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X