Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಲಿಕಾನ್ ಸಿಟಿಯಲ್ಲಿ ಅಧಿಕವಾಗುತ್ತಿರುವ...

ಸಿಲಿಕಾನ್ ಸಿಟಿಯಲ್ಲಿ ಅಧಿಕವಾಗುತ್ತಿರುವ ಚರ್ಮರೋಗದ ಸಮಸ್ಯೆ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ9 May 2020 11:36 PM IST
share

ಬೆಂಗಳೂರು, ಮೇ 9: ರಾಜ್ಯದ ರಾಜಧಾನಿ, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಮಾಲಿನ್ಯದ ಪ್ರಮಾಣ ಅಧಿಕವಾಗುತ್ತಿದ್ದು, ಚರ್ಮರೋಗದ ಸಮಸ್ಯೆಗಳು ಹೆಚ್ಚಳವಾಗುತ್ತಿರುವುದು ವರದಿಯೊಂದರಿಂದ ಬಯಲಾಗಿದೆ.

ಹೆಚ್ಚಿನ ಸಂಖ್ಯೆಯ ನಗರ ನಿವಾಸಿಗಳು ಚರ್ಮದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇಂತಹ ಅನಾರೋಗ್ಯದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಮತ್ತು ಇದು ಅನೇಕ ರೀತಿಯ ಚರ್ಮದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ಮುಂಬಯಿ ನಿವಾಸಿಯಾಗಿದ್ದ ಕರಿಷ್ಮಾ ಮಲ್ಲನ್ ಎಂಬುವವರು ಬೆಂಗಳೂರಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಾಗ ತುಂಬಾ ಸಂತೋಷಪಟ್ಟಿದ್ದರು. 2019ರ ಜುಲೈನಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ ತಿಂಗಳೊಳಗಾಗಿ ಆಕೆಗೆ ಚರ್ಮದ ಅಲರ್ಜಿಯು ಉಲ್ಬಣಿಸಿತು. ವೈದ್ಯರನ್ನು ಕಂಡು ಸಲಹೆ ಪಡೆದಾಗ ಆಕೆಗೆ ಅಟೋಪಿಕ್ ಡರ್ಮಟೈಟಿಸ್ ಇದೆಯೆಂದು ಮತ್ತು ಇದು ಧೂಳು ಮತ್ತು ವಾಯುಮಾಲಿನ್ಯದಿಂದಾಗಿ ಉಂಟಾಗುತ್ತದೆ ಎಂಬುದನ್ನೂ ತಿಳಿಸಲಾಯಿತು.

ಕರಿಷ್ಮಾ ತನ್ನ ಕಚೇರಿಗೆ ಹೋಗಿಬರುವುದಕ್ಕಾಗಿ ದಿನದಲ್ಲಿ ಕೇವಲ ಅರ್ಧಗಂಟೆಯಷ್ಟೇ ಪ್ರಯಾಣದಲ್ಲಿರುತ್ತಾರೆ. ಆದರೂ ಆಕೆಯಲ್ಲಿ ಒಣಚರ್ಮ, ಸೀನು, ಉಸಿರಾಟದ ಸಮಸ್ಯೆಗಳು, ಶೀತ, ಕಣ್ಣಿನಲ್ಲಿ ತುರಿಕೆ, ಉಸಿರಾಟದ ಸಮಸ್ಯೆಗಳು ಕಾಡತೊಡಗಿದೆ. ಬೆಂಗಳೂರು ನಗರದಲ್ಲಿ ಮಾಲಿನ್ಯ ಹೆಚ್ಚುತ್ತಿರುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಅಧ್ಯಯನವೊಂದು ಹೇಳಿದೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಅಧ್ಯಯನವೊಂದರ ಪ್ರಕಾರ ‘ಭಾರತದಲ್ಲಿ 10 ಕೋಟಿಗೂ ಅಧಿಕ ಅಲರ್ಜಿಕ್ ರಿನಿಟಿಸ್(ಇದರಿಂದ ಕಣ್ಣಿನಲ್ಲಿ ನೀರು ಬರುತ್ತಲೇ ಇರುವುದು, ಸೀನುವಿಕೆ ಮತ್ತು ಇತರ ರೋಗ ಲಕ್ಷಗಳನ್ನು ಹೊಂದಿರುತ್ತದೆ) ರೋಗಿಗಳಿದ್ದಾರೆ. ಬೆಂಗಳೂರಿನಲ್ಲಿ ಈ ರೋಗತಪಾಸಣೆ ನಡೆಸಿದವರಲ್ಲಿ 68% ರೋಗಿಗಳಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಹೆಚ್ಚುತ್ತಿರುವ ಧೂಳು ಮಾಲಿನ್ಯವೇ ಇದಕ್ಕಿರುವ ಸಾಮಾನ್ಯ ಹಾಗೂ ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನ ತಿಳಿಸಿದೆ.

ಬೆಂಗಳೂರು ಮೂಲದ ಚರ್ಮರೋಗ ವೈದ್ಯ ಡಾ. ಕೆ. ಶ್ರೀನಿವಾಸಮೂರ್ತಿ ಅವರ ನೀಡುವ ಮಾಹಿತಿ ಪ್ರಕಾರ ಅವರಲ್ಲಿಗೆ ಬರುವ ಹೆಚ್ಚಿನ ರೋಗಿಗಳಿಗೆ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುವುದಕ್ಕೆ ಮುಖ್ಯ ಕಾರಣವೇ ವಾಯುಮಾಲಿನ್ಯ. 2010ರಲ್ಲಿ ಈಗಿರುವ ಅಂತಹ ರೋಗಿಗಳ ಸಂಖ್ಯೆಯ ಶೇ.20 ರಷ್ಟಿದ್ದರು ಎಂಬುದಾಗಿ ಹೇಳಿದ್ದಾರೆ.

ವಾಯುಮಾಲಿನ್ಯದಿಂದಾಗಿ ದೇಹದ ಮೇಲೆ ಕೆಂಪು ದದ್ದುಗಳು ಬೀಳುವ ಮೂಲಕ ಅಲರ್ಜಿ ಉಂಟಾಗುತ್ತದೆ. ಅಟೊಪಿಕ್ ಎಸ್ಜಿಮಾದಲ್ಲಂತೂ ಕಣ್ಣಿನರೆಪ್ಪೆ ಹಾಗೂ ಕುತ್ತಿಗೆಯ ಭಾಗದಲ್ಲಿ ದದ್ದುಗಳು ಕಾಣಿಸಿಕೊಳ್ಳುತ್ತವೆ. ಗಾಳಿಯಲ್ಲಿ ಹರಡುವ ಪರಾಗಗಳಿಂದಾಗಿ ‘ಕಂಟಾಕ್ಟ್ ಡರ್ಮಟೈಟಿಸ್’ಗೆ ಕಾರಣವಾಗುತ್ತದೆ ಮತ್ತು ಇದರಿಂದಾಗಿ ಚರ್ಮವು ಕಪ್ಪಾಗುವುದು, ತುರಿಕೆ, ದದ್ದುಂಟಾಗುವುದು ಹಾಗೂ ಕಣ್ಣಿನಲ್ಲಿ ನೀರು ಬರುವುದು ಉಂಟಾಗುತ್ತದೆ ಎಂದು ಹೇಳಿದ್ದಾರೆ.

ಇಂಡಿಯನ್ ಇಸ್ಟಿಟ್ಯೂಟ್‍ನ ಪ್ರಾಧ್ಯಾಪಕ ಡಾ. ಹೆಚ್.ಪರಮೇಶ್ ಅವರ ಅಧ್ಯಯನ ಪ್ರಕಾರ `ಅಸ್ತಮಾ ರೋಗಿಗಳಲ್ಲಿ ಅಲರ್ಜಿಕ್‍ರಿನಿಟಿಸ್ ಸಂಭಾವ್ಯತೆಯು ಬೆಂಗಳೂರಿನ ಮಟ್ಟಿಗೆ 1999ರಲ್ಲಿ 75% ಇದ್ದಿದ್ದು, 2011ರಲ್ಲಿ ಅದು 99.6% ತಲುಪಿದೆ. ಜೊತೆಗೆ ಒಟಿಟಿಸ್ ಮೀಡಿಯಾ ಅಲರ್ಜಿಕ್‍ ರಿನಿಟಿಸ್(ಕಿವಿಯ ಸುತ್ತಲಿನ ಭಾಗದಲ್ಲಿ ಉಂಟಾಗುವ ಸೋಂಕು), ಸಿನುಸಿಟಿಸಿ ಅಲರ್ಜಿಕ್‍ರಿನಿಟಿಸ್(ಮೂಗಿನ ಸುತ್ತಲೂ ಹಬ್ಬುವ ಉಬ್ಬುವಿಕೆ), ಕರಕ್ಟಿವೀಸ್‍ಅಲರ್ಜಿಕ್‍ರಿನಿಟಿಸ್ (ಕಣ್ಣುಗುಡ್ಡೆಯ ಹೊರಪೊರೆ ಮತ್ತು ಒಳಕಣ್ಣುರೆಪ್ಪೆ ಉರಿಯೂತ) ಇವುಗಳು ಕೂಡಾ 22.5%, 34.8% ಮತ್ತು 27.5% ಕ್ರಮವಾಗಿ ದಾಖಲಾಗಿವೆ ಎಂದು 2011ರ ಅಧ್ಯಯನ ವರದಿ ಹೇಳುತ್ತಿದೆ ಎಂದು ತಿಳಿಸಿದ್ದಾರೆ.

ಅಲರ್ಜಿಗಳು ಕೇವಲ ಚರ್ಮವನ್ನಷ್ಟೇ ಬಾಧಿಸದೇ ಕಣ್ಣಿನಲ್ಲಿ ತುರಿಕೆ, ಕಫ, ಉಬ್ಬಸ ಮತ್ತು ಗೊರಕೆಗೂ ಕಾರಣವಾಗುತ್ತದೆ. ಮಕ್ಕಳು ಬಹುಬೇಗನೆ ಈ ಸೋಂಕುಗಳಿಗೆ ತುತ್ತಾಗುತ್ತಾರೆ ಎಂದು ಅಧ್ಯಯನ ವರದಿ ಹೇಳಿದೆ. ಅಲ್ಲದೆ, ನೇರಳಾತೀತ ವಿಕಿರಣ, ಕೆಲವು ಹೈಡ್ರೋಕಾರ್ಬನ್‍ಗಳು, ಸಾವಯವ ಸಂಯುಕ್ತಗಳು, ಓಝೋನ್, ಸಂಯುಕ್ತ ಸೂಕ್ಷ್ಮ ಕಣಗಳು ಹಾಗೂ ಧೂಮಪಾನದ ಹೊಗೆಯು ಚರ್ಮದ ಹೊರಪದರವನ್ನು ಬಾಧಿಸುತ್ತದೆ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X