Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೌಕಾಪಡೆ ಹಡಗಿನಲ್ಲಿ ಮಾಲ್ದೀವ್ಸ್‌ನಿಂದ...

ನೌಕಾಪಡೆ ಹಡಗಿನಲ್ಲಿ ಮಾಲ್ದೀವ್ಸ್‌ನಿಂದ 698 ಭಾರತೀಯರ ಆಗಮನ

ವಾರ್ತಾಭಾರತಿವಾರ್ತಾಭಾರತಿ10 May 2020 10:19 PM IST
share
ನೌಕಾಪಡೆ ಹಡಗಿನಲ್ಲಿ ಮಾಲ್ದೀವ್ಸ್‌ನಿಂದ 698 ಭಾರತೀಯರ ಆಗಮನ

ಹೊಸದಿಲ್ಲಿ,ಮೇ 10: ಕೊರೋನಾ ವೈರಸ್ ಹರಡುವಿಕೆ ತಡೆಯಲು ವಿದೇಶ ಪ್ರಯಾಣಗಳಿಗೆ ನಿರ್ಬಂಧ ಹೇರಲಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನೌಕಾಪಡೆಯು ದ್ವೀಪರಾಷ್ಟ್ರ ಮಾಲ್ದೀವ್ಸ್‌ನಲ್ಲಿ ಸಿಲುಕಿದ್ದ 698 ಮಂದಿ ಭಾರತೀಯರನ್ನು ರವಿವಾರ ಯಶಸ್ವಿಯಾಗಿ ತಾಯ್ನಿಡಿಗೆ ಕರೆತಂದಿದೆ.

ಐಎನ್‌ಎಸ್ ಜಲಾಶ್ವ ಹೆಸರಿನ ಯುದ್ಧನೌಕೆಯು, ಮಾಲ್ದೀವ್ಸ್‌ನಿಂದ ಇಂದು ಬೆಳಗ್ಗೆ 9:00ರ ವೇಳೆಗೆ ಕೇರಳದ ಕೊಚ್ಚಿಯ ಬಂದರಿಗೆ ತಲುಪಿದೆ.

ಮೇ 8ರಂದು ಮಾಲ್ದೀವ್ಸ್ ರಾಜಧಾನಿ ಮಾಲೆಯಿಂದ ಪ್ರಯಾಣ ಆರಂಭಿಸಿದ ಈ ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರಲ್ಲಿ 19 ಮಂದಿ ಗರ್ಭಿಣಿಯರು ಕೂಡಾ ಇದ್ದರು.

‘‘ಮಾಲ್ದೀವ್ಸ್‌ನಿಂದ ಆಗಮಿಸಿದ ತಂಡದಲ್ಲಿ 595 ಪುರುಷರು ಹಾಗೂ 103 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 10 ವರ್ಷಕ್ಕಿಂತ ಕೆಳಗಿನ 14 ಮಂದಿ ಮಕ್ಕಳು , 19 ಮಂದಿ ಗರ್ಭಿಣಿಯರು ಕೂಡಾ ಇದ್ದಾರೆ. ಬಹುತೇಕ ಪ್ರಯಾಣಿಕರು ತಮಿಳುನಾಡು ಹಾಗೂ ಕೇರಳೀಯರಾಗಿದ್ದಾರೆ. ಇತರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಾಗರಿಕರು ಕೂಡಾ ಇರುವುದಾಗಿ ಕೊಚ್ಚಿ ಬಂದರು ಆಡಳಿತವು ಹೇಳಿಕೆಯೊಂದರಲ್ಲಿ ತಿಳಿಸಿದೆ.

‘‘ನಾವೀಗ ಸುರಕ್ಷಿತರಾಗಿದ್ದೇವೆ. ನಮಗೆ ಉತ್ತಮ ಅನುಭವವಾಗಿದೆ. ಈ ಸಿಬ್ಬಂದಿಯು ಅತ್ಯಂತ ಸ್ನೇಹಯುತವಾಗಿ ವರ್ತಿಸಿದರು. ನಮ್ಮನ್ನು ಅವರು ಚೆನ್ನಾಗಿ ನೋಡಿಕೊಂಡಿದ್ದಾರೆ’’ ಹಡಗಿನಲ್ಲಿ ಆಗಮಿಸಿದ ಪ್ರಯಾಣಿಕರೊಬ್ಬರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಮಾಲ್ಡೀವ್ಸ್‌ನಿಂದ ಸ್ವದೇಶಕ್ಕೆ ವಾಪಸಾಗುತ್ತಿರುವ ಭಾರತೀಯರನ್ನು ಕರೆತರುವ ಸೇವೆಗಾಗಿ ಭಾರತ ಸರಕಾರವು ಪ್ರತಿಒಬ್ಬ ಪ್ರಯಾಣಿಕನಿಗೆ 40 ಡಾಲರ್ (ಅಂದಾಜು 3021 ರೂ.) ಶುಲ್ಕವನ್ನು ವಿಧಿಸಿತ್ತು.

ಲಾಕ್‌ಡೌನ್‌ನಿಂದಾಗಿ ಹೊರದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರಕಾರ ಹಮ್ಮಿಕೊಂಡಿರುವ ಬೃಹತ್ ಕಾರ್ಯಾಚರಣೆ ‘ವಂದೇಭಾರತ್ ಮಿಶನ್’ ನ ಭಾಗವಾಗಿ ನೌಕಾಪಡೆಯು ಮಾಲ್ದೀವ್ಸ್‌ನಿಂದ ಭಾರತೀಯರನ್ನು ಕರೆತಂದಿದೆ.

  ಭಾರತೀಯ ನೌಕಾಪಡೆಯ ಇನ್ನೊಂದು ಯುದ್ಧ ನೌಕೆ ಐಎನ್‌ಎಸ್ ಮಗರ್ ರವಿವಾರ ಮಾಲೆಗೆ ಆಗಮಿಸಿದೆ. ಮಾಲ್ಡೀವ್ಸ್‌ನಲ್ಲಿರುವ 27 ಭಾರತೀಯರ ಪೈಕಿ ಸುಮಾರು 4 ಸಾವಿರ ಮಂದಿ ಈ ಹಡಗಿನಲ್ಲಿ ಸ್ವದೇಶಕ್ಕೆ ಮರಳುವುದಕ್ಕಾಗಿ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ.

 ಭಾರತೀಯ ನೌಕಾಪಡೆಯು ಒಟ್ಟು 12 ರಾಷ್ಟ್ರಗಳಿಂದ ಸುಮಾರು 15 ಸಾವಿರ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X