Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್.ಎ.ರಾಮದಾಸ್ ವಿರುದ್ಧ ಮತ್ತೆ...

ಎಸ್.ಎ.ರಾಮದಾಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ10 May 2020 11:07 PM IST
share
ಎಸ್.ಎ.ರಾಮದಾಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ

ಮೈಸೂರು,ಮೇ.10: ನಗರದ ವಿದ್ಯಾರಣ್ಯಪುರಂ ನಲ್ಲಿರುವ ಸೂಯೇಜ್ ಫಾರಂ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನುಡುವಿನ ಶೀತಲ ಸಮರ ಮುಂದುವರಿದಿದೆ.

ಸೂಯೇಜ್ ಫಾರಂನ ಕಸ ವಿಲೇವಾರಿ ಸಂಬಂಧ ಮಹರಾಷ್ಟ್ರದ ನಾಗಪುರ ಮಾದರಿಯಲ್ಲಿ ನಿರ್ಮಾಣ ಮಾಡುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ನಿಯೋಗ ಭೇಟಿ ನೀಡಿ ವರದಿ ನೀಡಿರುವ ಮಾಹಿತಿ ನನಗೆ ಇಲ್ಲ ಎಂದಿದ್ದ ಶಾಸಕ ಎಸ್.ರಾಮದಾಸ್ ವಿರುದ್ಧ ಗರಂ ಆಗಿರುವ ಸಂಸದ ಪ್ರತಾಪ್ ಸಿಂಹ, ಯೋಜನೆ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳನ್ನು ರವಿವಾರ ಮಾಧ್ಯಮಗಳಿಗೆ ತೋರಿಸಿ ತಿರುಗೇಟು ನೀಡಿದ್ದಾರೆ.

ಅಲ್ಲದೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಸುಯೋಜ್ ಫಾರಂ ಕಾಮಗಾರಿ ನಡೆಯುವ ಪ್ರದೇಶಕ್ಕೆ 5 ನವೆಂಬರ್ 2019 ರಂದು ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ನೇತೃತ್ವದಲ್ಲಿ ಭೇಟಿ ನೀಡಿದ್ದೆವು. ಅಲ್ಲಿ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ವಿ.ಸೋಮಣ್ಣನವರು ಸ್ಥಳದಲ್ಲೇ ಜಿಲ್ಲಾಧಿಕಾರಿ ಅಭಿರಾಜ್ ಜಿ.ಶಂಕರ್ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚನೆ ಮಾಡಿ ನವೆಂಬರ್ 25 ರೊಳಗೆ ವರದಿ ನೀಡುವಂತೆ ಸೂಚಿಸಿದ್ದರು. ಆ ಸಭೆಗೆ ಶಾಸಕ ರಾಮದಾಸ್ ಅವರನ್ನು ಸಚಿವ ಸೋಮಣ್ಣ ಖುದ್ದಾಗಿ ಆಹ್ವಾನಿಸಿದ್ದರು. ಬಳಿಕ 2020 ಜನವರಿ 3 ರಂದು ನಡೆಯುವ ಕೆಡಿಪಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನವಾಗಬೇಕು, ಅಷ್ಟರಲ್ಲಿ ನಾಗ್ಪುರ ಪ್ಲಾಂಟ್‍ಗೆ ಪ್ರತ್ಯಕ್ಷ ಭೇಟಿ ನೀಡಿ ಅಭಿಪ್ರಾಯ ತಿಳಿಸಬೇಕೆಂದು ಸೋಮಣ್ಣ ಸೂಚಿಸಿದ್ದರು.

ಹೀಗಾಗಿ ಮೇಯರ್, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರನ್ನು ಒಳಗೊಂಡ ತಂಡ ಡಿಸೆಂಬರ್ 31 ರಂದು ನಾಗಪುರ ಪ್ಲಾಂಟ್‍ಗೆ ಹೋಗಿ ಜನವರಿ 3 ರ ಸಭೆಯಲ್ಲಿ ಸಕಾರಾತ್ಮಕ ಅಭಿಪ್ರಾಯ ಕೊಟ್ಟಿದ್ದರು. ನಂತರ ಮೂರು ತಿಂಗಳ ಕಾಲ ಸತತವಾಗಿ ನಗರಾಭಿವೃದ್ಧಿ ಇಲಾಖೆ ಮತ್ತು ಹಣಕಾಸು ಇಲಾಖೆಗೆ ಅಲೆದು ಟೆಂಡರ್ ಕರೆದು ಕಾಮಗಾರಿ ಆರಂಭಿಸುವ ಹಂತಕ್ಕೆ ತಂದಿದ್ದೇವೆ. ಇದನ್ನು ಹೊರತಾಗಿ ಇನ್ನೇನು ಮಾಡಲು ಸಾಧ್ಯವಿದೆ ಹೇಳಿ. ಐದೇ ತಿಂಗಳಲ್ಲಿ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದೆ ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಜನರ ಕಷ್ಟ ಪರಿಹಾರ ಮಾಡಲೇಬೇಕೆಂಬ ಕಾಳಜಿಯಿಂದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಸೋಮಣ್ಣನವರು ಕರೆದ ಸಭೆಗೆ ಬರಲು ಸಾಧ್ಯವಾಗುವುದಾದರೆ ಉಳಿದವರಿಗೆ ಏನು ಸಮಸ್ಯೆಯಿತ್ತು? ಮೂರು ಸಭೆಗಳಲ್ಲಿ ಕನಿಷ್ಠ ಒಂದಕ್ಕಾದರೂ ಬರಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕಳೆದ 30-35 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದರೂ ಯಾರಿಂದಲೂ ಪರಿಹಾರ ಕಾಣದ ಸೂಯೇಜ್ ಫಾರಂ ದುರ್ವಾಸನೆ ಬೀರುವ ಎರಡೂವರೆ ಲಕ್ಷ ಟನ್ ಕಸದ ನಿರ್ಮೂಲನೆಗೆ, ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮುಂದಾಳತ್ವದಲ್ಲಿ ಕಳೆದ 5 ತಿಂಗಳಿನಿಂದ ಮಾಡಿದ ಪ್ರಾಮಾಣಿಕ ಪ್ರಯತ್ನದ ಪತ್ರಿಕಾ ವರದಿ ನೋಡಿ ಎಂದು ಪ್ರತಾಪ್ ಸಿಂಹ ಛೇಡಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X