Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್ ಜೊತೆ ಬದುಕುವುದನ್ನು...

ಕೊರೋನ ವೈರಸ್ ಜೊತೆ ಬದುಕುವುದನ್ನು ಕಲಿಯಬೇಕಿದೆ: ದಿಲ್ಲಿ ಸಿಎಂ ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ10 May 2020 11:34 PM IST
share
ಕೊರೋನ ವೈರಸ್ ಜೊತೆ ಬದುಕುವುದನ್ನು ಕಲಿಯಬೇಕಿದೆ: ದಿಲ್ಲಿ ಸಿಎಂ ಕೇಜ್ರಿವಾಲ್

ಹೊಸದಿಲ್ಲಿ, ಮೇ 10: ಕೊರೋನ ವೈರಸ್ ಜೊತೆ ಬದುಕುವುದನ್ನು ಕಲಿಯಬೇಕಿದೆ ಎಂದು ದಿಲ್ಲಿಗರಿಗೆ ರವಿವಾರ ನೆನಪಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು,ನಗರದಲ್ಲಿಯ ಸುಮಾರು ಶೇ.75ರಷ್ಟ್ಟು ಕೋವಿಡ್-19 ರೋಗಿಗಳು ಲಕ್ಷಣರಹಿತರಾಗಿದ್ದಾರೆ ಅಥವಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದ್ದಾರೆ. ರೋಗಿಗಳ ಬಿಡುಗಡೆ ಕುರಿತಂತೆ ಕೇಂದ್ರ ಸರಕಾರವು ಶನಿವಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯಂತೆ ಈ ರೋಗಿಗಳಿಗೆ ತಮ್ಮ ಮನೆಗಳಲ್ಲಿಯೇ ಚೇತರಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

‘ದಿಲ್ಲಿಯಲ್ಲಿ ಈವರೆಗೆ ವರದಿಯಾದ ಒಟ್ಟು 6,923 ಕೊರೋನ ವೈರಸ್ ಪ್ರಕರಣಗಳಲ್ಲಿ 2,069 ರೋಗಿಗಳು ಚೇತರಿಸಿಕೊಂಡಿದ್ದಾರೆ. 73 ಜನರು ಮೃತಪಟ್ಟಿದ್ದಾರೆ. ಮೃತರ ಪೈಕಿ ಶೇ.82ರಷ್ಟು ಜನರು 50 ವರ್ಷಕ್ಕೂ ಹೆಚ್ಚಿನ ವಯೋಮಾನದವರಾಗಿದ್ದರು. ಹಿರಿಯ ಪ್ರಜೆಗಳು ಹೆಚ್ಚು ಅಪಾಯ ಎದುರಿಸುತ್ತಿದ್ದಾರೆ. ನಾವು ಹಿರಿಯರ ಬಗ್ಗೆ ಕಾಳಜಿ ವಹಿಸಬೇಕಿದೆ. ಅವರು ಮನೆಯಿಂದ ಹೊರಗೆ ಹೋಗುವುದನ್ನು ನಿವಾರಿಸಬೇಕು ’ಎಂದು ವೀಡಿಯೊ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದರು.

‘ಸದ್ಯ ಕೇವಲ 1,463 ರೋಗಿಗಳು ಮಾತ್ರ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಲಕ್ಷಣರಹಿತರು ಮತ್ತು ಸೌಮ್ಯ ಲಕ್ಷಣಗಳನ್ನು ಹೊಂದಿರುವರನ್ನು ಆಸ್ಪತ್ರೆಗಳಿಂದ ಬಿಡುಗಡೆಗೊಳಿಸಲಾಗಿದ್ದು,ಅವರು ಚೇತರಿಕೆಯ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ತಂಡಗಳು ಅವರ ಮನೆಗಳಿಗೆ ಭೇಟಿ ನೀಡುತ್ತಿವೆ. ಇಂತಹ ರೋಗಿಗಳು ತಮ್ಮ ಮನೆಗಳಲ್ಲಿ ಪ್ರತ್ಯೇಕ ಕೋಣೆ ಹೊಂದಿಲ್ಲದಿದ್ದರೆ ಅವರನ್ನು ಕೋವಿಡ್-19 ಕೇರ್ ಸೆಂಟರ್‌ಗಳಲ್ಲಿ ದಾಖಲಿಸಲಾಗುವುದು. ಕೋವಿಡ್-19ರ ವಿರುದ್ಧದ ಹೋರಾಟದಲ್ಲಿ ಸಂಪನ್ಮೂಲಗಳ ಕೊರತೆಯಾಗದಂತೆ ಖಾಸಗಿ ಆ್ಯಂಬುಲನ್ಸ್‌ಗಳ ಸೇವೆಯನ್ನು ಪಡೆದಿದ್ದೇವೆ ’ಎಂದರು. ದಿಲ್ಲಿ ಭಾರತದಲ್ಲಿ ಅತ್ಯಂತ ಹೆಚ್ಚಿನ ಕೊರೋನ ವೈರಸ್ ಪ್ರಕರಣಗಳು ದಾಖಲಾಗಿರುವ ಮೂರನೇ ನಗರವಾಗಿದೆ.

‘ದಿಲ್ಲಿಯಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿದೆ. ನಾವೀಗ ಕೊರೋನ ವೈರಸ್ ಜೊತೆ ಬದುಕುವುದನ್ನು ಕಲಿಯಬೇಕಿದೆ ’ಎಂದು ಕೇಜ್ರಿವಾಲ್ ಹೇಳಿದರು. ಕಳೆದ ವಾರ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದ್ದ ಸಂದರ್ಭದಲ್ಲಿಯೂ ಕೇಜ್ರಿವಾಲ್ ಈ ಮಾತನ್ನು ಹೇಳಿದ್ದರು.

ಕೊರೋನ ವಾರಿಯರ್ಸ್‌ಗಳ ಹಿತರಕ್ಷಣೆಗಾಗಿ ತನ್ನ ಸರಕಾರವು ತೆಗೆದುಕೊಂಡಿರುವ ಕ್ರಮಗಳನ್ನು ಟೀಕಿಸಿರುವ ಪ್ರತಿಪಕ್ಷಗಳ ವಿರುದ್ಧ ದಾಳಿನಡೆಸಿದ ಕೇಜ್ರಿವಾಲ್,‘ಕೊರೋನ ವಾರಿಯರ್‌ಗಳು ಅನಾರೋಗ್ಯಕ್ಕೆ ಗುರಿಯಾದರೆ ಅವರನ್ನು ನೋಡಿಕೊಳ್ಳಲು ಪಂಚತಾರಾ ಹೋಟೆಲ್‌ಗಳನ್ನು ಸರಕಾರವು ಕಾಯ್ದಿರಿಸಿದೆ. ಅವರ ಕಾಳಜಿ ವಹಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ಇದಕ್ಕಾಗಿ ಪ್ರತಿಪಕ್ಷಗಳು ನಮ್ಮನ್ನು ಟೀಕಿಸುತ್ತಿರುವುದು ವಿಚಿತ್ರವಾಗಿದೆ ’ಎಂದು ಯಾವುದೇ ಪಕ್ಷವನ್ನು ಹೆಸರಿಸದೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X