Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎನ್‌ಎಂಸಿ ಹೆಲ್ತ್‌ ನ ಮುಖ್ಯ ಹಣಕಾಸು...

ಎನ್‌ಎಂಸಿ ಹೆಲ್ತ್‌ ನ ಮುಖ್ಯ ಹಣಕಾಸು ಅಧಿಕಾರಿ ಕುಟುಂಬ ಸಮೇತ ಭಾರತಕ್ಕೆ ಪಲಾಯನ: ವರದಿ

ತೆರವು ಕಾರ್ಯಾಚರಣೆಯ ಮೊದಲ ವಿಮಾನದಲ್ಲೇ ಪ್ರಯಾಣ

ವಾರ್ತಾಭಾರತಿವಾರ್ತಾಭಾರತಿ10 May 2020 11:37 PM IST
share
ಎನ್‌ಎಂಸಿ ಹೆಲ್ತ್‌ ನ ಮುಖ್ಯ ಹಣಕಾಸು ಅಧಿಕಾರಿ ಕುಟುಂಬ ಸಮೇತ ಭಾರತಕ್ಕೆ ಪಲಾಯನ: ವರದಿ

ದುಬೈ, ಮೇ 10: ಭಾರೀ ಪ್ರಮಾಣದ ಹಣಕಾಸು ಅವ್ಯವಹಾರಗಳಿಗಾಗಿ ತನಿಖೆಯನ್ನು ಎದುರಿಸುತ್ತಿರುವ ಎನ್‌ಎಂಸಿ ಹೆಲ್ತ್‌ನ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಸುರೇಶ್ ಕೃಷ್ಣಮೂರ್ತಿ ಅಬುಧಾಬಿಯಿಂದ ಭಾರತಕ್ಕೆ ಮರಳಿದ್ದಾರೆ ಎಂದು khaleejtimes.com ರವಿವಾರ ವರದಿ ಮಾಡಿದೆ.

ಯುಎಇಯಲ್ಲಿ ಸಿಕ್ಕಿಹಾಕಿಕೊಂಡು ಸಂಕಷ್ಟ ಎದುರಿಸುತ್ತಿದ್ದ ಭಾರತೀಯರ ತೆರವಿಗಾಗಿ ನಿಯೋಜಿಸಲಾಗಿದ್ದ ಮೊದಲ ವಿಮಾನದಲ್ಲೇ ಅವರು ತನ್ನ ಪತ್ನಿ, ಮೂವರು ಮಕ್ಕಳು ಮತ್ತು ಮನೆಗೆಲಸದ ಮಹಿಳೆಯೊಂದಿಗೆ ಯುಎಇ ತೊರೆದಿದ್ದಾರೆ ಎಂದು ಕಂಪೆನಿಗೆ ನಿಕಟವಾಗಿರುವ ಮೂಲವೊಂದು ತಿಳಿಸಿದೆ ಎಂದು khaleejtimes.com ಹೇಳಿದೆ. ಅವರು ಮೇ 7ರಂದು ಏರ್ ಇಂಡಿಯ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕೇರಳದ ಕೊಚ್ಚಿಗೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ.

ಅಬುಧಾಬಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಿ. ಆರ್. ಶೆಟ್ಟಿ ಒಡೆತನದ ಎನ್‌ಎಂಸಿ ಹೆಲ್ತ್ ಕಂಪೆನಿಯು ಬ್ಯಾಂಕ್‌ಗಳಿಗೆ ತಪ್ಪು ಮಾಹಿತಿಗಳನ್ನು ನೀಡಿ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಗಾಧ ಪ್ರಮಾಣದ ಸಾಲ ಪಡೆದು ವಂಚಿಸಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಹಿನ್ನೆಲೆಯಲ್ಲಿ ಲಂಡನ್ ಹೈಕೋರ್ಟ್ ಕಂಪೆನಿಯ ಆಡಳಿತವನ್ನು ಆಡಳಿತಗಾರರ ಸುಪರ್ದಿಗೆ ಒಪ್ಪಿಸಿದೆ.

360ಕ್ಕೂ ಅಧಿಕ ಭಾರತೀಯರೊಂದಿಗೆ ಕೃಷ್ಣಮೂರ್ತಿ ಮತ್ತು ಅವರ ಕುಟುಂಬದ ತೆರವು ಕಾರ್ಯಾಚರಣೆಯಲ್ಲಿ ಅನುಸರಿಸಲಾಗಿರುವ ನಿಯಮಗಳು, ಪಾರದರ್ಶಕತೆ ಮತ್ತು ಆದ್ಯತೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಅತ್ಯಂತ ಹೆಚ್ಚು ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ ತೆರವು ಕಾರ್ಯಾಚರಣೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿತ್ತು.

“ತುರ್ತು ಕಾರಣಗಳಿಗಾಗಿ ನಾನು ಭಾರತಕ್ಕೆ ವಾಪಸಾದೆ ಎಂಬುದಾಗಿ ಶುಕ್ರವಾರ ಬೆಳಗ್ಗೆ (ಮೊದಲ ವಿಮಾನ ಹಾರಿದ ಮರುದಿನ) ಅವರು ಕೇರಳದಿಂದ ಸಂದೇಶ ಕಳುಹಿಸಿದರು. ನಾನು ಜೂನ್‌ನಲ್ಲಿ ಯುಎಇಗೆ ಮರಳುತ್ತೇನೆ ಎಂದು ಅವರು ಹೇಳಿದರು. ಅವರು ತನ್ನ ಇಡೀ ಕುಟುಂಬದೊಂದಿಗೆ ಯುಎಇಯಿಂದ ಹೊರಟಿದ್ದಾರೆ” ಎಂದು ಕಂಪೆನಿಯ ಮೂಲವೊಂದು ತಿಳಿಸಿದೆ.

ಕಂಪೆನಿ ನಡೆಸಿದೆ ಎನ್ನಲಾದ ಅವ್ಯವಹಾರಗಳ ಹಿನ್ನೆಲೆಯಲ್ಲಿ ಕಾನೂನು ಕ್ರಮಕ್ಕೆ ಹೆದರಿ ಅವರು ಪರಾರಿಯಾಗಿರಬಹುದು ಎಂದು ಇನ್ನೊಂದು ಮೂಲ ತಿಳಿಸಿದೆ.

ಅವರ ಕುಟುಂಬ ಈಗ ಆಲಪ್ಪುಳದಲ್ಲಿರುವ ಅವರ ಮನೆಯಲ್ಲಿದೆ. ಹಿರಿಯ ಮಗ ಸರಕಾರಿ ಕ್ವಾರಂಟೈನ್‌ನಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X