Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಹಾರ ಕೋರಿ ಅರ್ಚಕರಿಂದ ಹೈಕೋರ್ಟ್ ಗೆ...

ಪರಿಹಾರ ಕೋರಿ ಅರ್ಚಕರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ10 May 2020 11:40 PM IST
share
ಪರಿಹಾರ ಕೋರಿ ಅರ್ಚಕರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ಬೆಳಗಾವಿ, ಮೇ 10: ಲಾಕ್‍ಡೌನ್ ಜಾರಿ ಹಿನ್ನೆಲೆಯಲ್ಲಿ ದೇಗುಲಗಳ ಅರ್ಚಕರು ರಾಜ್ಯ ಸರಕಾರಕ್ಕೆ ಪರಿಹಾರ ನೀಡುವಂತೆ ನಿರ್ದೇಶಿಸಲು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ರಾಜ್ಯದಲ್ಲಿ ಸುಮಾರು 35,500 ದೇಗುಲಗಳಿದ್ದು, ಆದಾಯಕ್ಕೆ ಅನುಗುಣವಾಗಿ ಎ, ಬಿ ಹಾಗೂ ಸಿ ಶ್ರೇಣಿಗಳೆಂದು ವಿಂಗಡಿಸಲಾಗಿದೆ. ಇಲ್ಲಿ ರಾಜ್ಯಕ್ಕೆ ವರಮಾನ ತಂದುಕೊಡುವ ಎ ಮತ್ತು ಬಿ ಶ್ರೇಣಿಗಳ ದೇವಾಲಯಗಳ ಅರ್ಚಕರಿಗೆ ಹಾಗೂ ಅಲ್ಲಿನ ಕೆಲಸಗಾರರಿಗೆ ರಾಜ್ಯ ಸರಕಾರ ಸಂಬಳ ನೀಡುತ್ತಿದೆ.

ಆದರೆ, ಹಳ್ಳಿಗಳಲ್ಲಿ ಕೇಂದ್ರೀಕೃತವಾಗಿರುವ ಶೇ.99ರಷ್ಟು ದೇವಸ್ಥಾನಗಳು ವರಮಾನ ತಂದುಕೊಡುತ್ತಿಲ್ಲ. ಹೀಗಾಗಿ, ಅಲ್ಲಿನ ಅರ್ಚಕರಿಗೆ ಹಾಗೂ ಸೇವಾನಿರತರಿಗೆ ದಿನಕ್ಕೆ ಕೇವಲ 131 ರೂ.ಗಳನ್ನು ದೇವರ ಪೂಜೆ, ದೇಗುಲ ನಿರ್ವಹಣೆ ಹಾಗೂ ಅರ್ಚಕರ ಕುಟುಂಬ ನಿರ್ವಹಣೆಗಾಗಿ ನೀಡಲಾಗುತ್ತಿದೆ. ಹೀಗಾಗಿ, ಈ ದೇಗುಲಗಳ ಅರ್ಚಕರು ಬರುವ ದಕ್ಷಿಣೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದರು. ಆದರೆ, ಕೊರೋನ ಲಾಕ್‍ಡೌನ್‍ನಿಂದಾಗಿ ಭಕ್ತರಿಲ್ಲದೇ ಅರ್ಚಕರು ಪರದಾಡುವಂತಾಗಿದೆ. ಅಲ್ಲದೆ, ದೇವರ ಪೂಜೆಗೆ ಭಕ್ತರ ಕೊಡುಗೆಗಳು ಸಿಗದೇ ಅದರ ಖರ್ಚನ್ನು ಕೂಡ ನಿರ್ವಹಿಸಲಾಗದೆ ಕಷ್ಟಪಡುತ್ತಿದ್ದಾರೆ.

ಇಲ್ಲಿ ಅರ್ಚಕರಿಗೆ ಹಾಗೂ ದೇವರ ಪೂಜೆಗೆ ಹಣ ನೀಡದೇ ಇರುವುದು ದೇವಾಲಯಗಳ ವ್ಯವಸ್ಥೆಗೆ ದೊಡ್ಡ ಪೆಟ್ಟುಕೊಟ್ಟಂತಾಗಿದೆ. ಎ ಮತ್ತು ಬಿ ಶ್ರೇಣಿಯ ಹೊರತಾಗಿ ಸಿ ಶ್ರೇಣಿಯ ಅರ್ಚಕರನ್ನು ಬೇರೆಯಾಗಿ ವರ್ಗೀಕರಿಸಿರುವುದು ಅನುಚ್ಛೇದ 14ರ ಸ್ಪಷ್ಟ ಉಲ್ಲಂಘನೆಯಾಗಿದೆ. ದೇವರ ಪೂಜೆಗೆ ಅಗತ್ಯವಿರುವ ಕನಿಷ್ಠ ಸಾಮಗ್ರಿಗಳನ್ನು ಒದಗಿಸುವಲ್ಲಿ ವಿಫಲರಾಗಿ, ದೈವತ್ವವನ್ನು ದುರ್ಬಲಗೊಳಿಸುವುದು, ಅನುಚ್ಛೇದ 21(ವ್ಯಕ್ತಿಯ ಜೀವನ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ರಕ್ಷಣೆಯ ಹಕ್ಕು) ಮತ್ತು ಅನುಚ್ಛೇದ 25(ಧರ್ಮಕ್ಕೆ ಸಂಬಂಧಿಸಿದ ವೃತ್ತಿ, ಪಾಲನೆ ಮತ್ತು ಪ್ರಚಾರದ ರಕ್ಷಣೆಯ ಹಕ್ಕು)ರ ಉಲ್ಲಂಘನೆಯಾಗಿದೆ. ದೇವಾಲಯಗಳನ್ನು ಸರಕಾರವೇ ಸ್ವಾಧೀನ ಪಡಿಸಿಕೊಂಡಿರುವುದರಿಂದ, ಅದರ ಅರ್ಚಕರು ಹಾಗೂ ದೇವರ ನಿರ್ವಹಣೆಯ ಜವಾಬ್ದಾರಿಯು ಸರಕಾರಕ್ಕೆ ಸೇರಿದ್ದಾಗಿದೆ. ಪದೇ ಪದೇ ಈ ವಿಚಾರದಲ್ಲಿ ರಾಜ್ಯ ಸರಕಾರಕ್ಕೆ ಅರ್ಚಕರು ಮನವಿ ಮಾಡಿದ್ದರೂ ಯಾವೊಂದು ಕ್ರಮಗಳನ್ನು ಕೈಗೊಂಡಿಲ್ಲ. ಈ ಎಲ್ಲ ಕಾರಣಗಳನ್ನು ಅರ್ಜಿಯಲ್ಲಿ ತಿಳಿಸಿರುವ ಇಂಡಿಕ್ ಕಲೆಕ್ಟೀವ್ ಟ್ರಸ್ಟ್ ತನ್ನ ಟ್ರಸ್ಟಿ ಶ್ರೀಹರಿ ಕುತ್ಸಾರ ಮೂಲಕ ರಾಜ್ಯ ಹೈಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಸಿ, ಸೂಕ್ತ ಪರಿಹಾರ ಒದಗಿಸಿ ಎಂದು ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X