Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಚ್ 18ರಿಂದ ಜರ್ಮನ್ ಪ್ರಜೆಗೆ ವಿಮಾನ...

ಮಾರ್ಚ್ 18ರಿಂದ ಜರ್ಮನ್ ಪ್ರಜೆಗೆ ವಿಮಾನ ನಿಲ್ದಾಣದಲ್ಲೇ ವಾಸ

ವಾರ್ತಾಭಾರತಿವಾರ್ತಾಭಾರತಿ11 May 2020 9:43 AM IST
share
ಮಾರ್ಚ್ 18ರಿಂದ ಜರ್ಮನ್ ಪ್ರಜೆಗೆ ವಿಮಾನ ನಿಲ್ದಾಣದಲ್ಲೇ ವಾಸ

ಹೊಸದಿಲ್ಲಿ : ಸ್ಟೀವನ್ ಸ್ಪಿಲ್‌ಬರ್ಗ್ ಅವರ ದ ಟರ್ಮಿನಲ್ ಚಿತ್ರದಲ್ಲಿ ಟಾಮ್ ಹಾಕಿನ್ಸ್ ನಿರ್ವಹಿಸಿದ್ದ ವಿಕ್ಟರ್ ನವೋಸ್ಕಿಯ ಎಂಬ ಪಾತ್ರದ ಪಾಡು ಈ ಜರ್ಮನ್ ಪ್ರಜೆಗೆ ಅಕ್ಷರಶಃ ಬಂದಿದೆ. 40 ವರ್ಷ ವಯಸ್ಸಿನ ಎಡ್ಗರ್ಡ್ ಝೀಬತ್‌ಗೆ ಕಳೆದ 54 ದಿನಗಳಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ವಾಸ!

ಮಾರ್ಚ್ 18ರಂದು ಹನೋಯಿಯಿಂದ ಇಸ್ತಾಂಬುಲ್‌ಗೆ ತೆರಳುವ ಮಾರ್ಗಮಧ್ಯದಲ್ಲಿ ದೆಹಲಿಯಲ್ಲಿ ಸಿಕ್ಕಿಹಾಕಿಕೊಂಡರು. ಕೋವಿಡ್-19 ಹಿನ್ನೆಲೆಯಲ್ಲಿ ಅಂದು ಭಾರತ ಟರ್ಕಿಗೆ ಹೋಗುವ ಹಾಗೂ ಟರ್ಕಿಯಿಂದ ಆಗಮಿಸುವ ಎಲ್ಲ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಿತು. ನಾಲ್ಕು ದಿನಗಳ ಬಳಿಕ ಭಾರತ ಎಲ್ಲ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಿದೆ. ಮಾರ್ಚ್ 25ರಂದು ದೇಶವ್ಯಾಪಿ ಲಾಕ್‌ಡೌನ್ ಘೋಷಿಸಿದ್ದು, ಇದು ಮೇ 17ರವರೆಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಝೀಬತ್ ವಿಮಾನ ನಿಲ್ದಾಣದಲ್ಲೇ ಕಾಲ ಕಳೆಯುವಂತಾಗಿದೆ.

ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಹಾಕಿಕೊಂಡ ಇತರ ಪ್ರಯಾಣಿಕರಿಗೆ ಹೋಲಿಸಿದರೆ ಝೀಬತ್ ಪ್ರಕರಣ ಸಂಕೀರ್ಣ. ಈತ ತನ್ನ ದೇಶದಲ್ಲಿ ಅಪರಾಧ ದಾಖಲೆ ಹೊಂದಿದ್ದಾನೆ. ಈತ ಬೇರೆ ದೇಶದಲ್ಲಿ ಇರುವ ಕಾರಣದಿಂದ ಜರ್ಮನಿ ಇವರನ್ನು ಕಸ್ಟಡಿಗೆ ಪಡೆಯಲು ನಿರಾಕರಿಸಿದೆ ಎಂದು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈತನ ಅಪರಾಧ ದಾಖಲೆ ಹಿನ್ನೆಲೆಯಲ್ಲಿ ವೀಸಾ ನೀಡಲು ಭಾರತ ಕೂಡಾ ನಿರಾಕರಿಸಿದ್ದು, ಝೀಬತ್ ಅವರ ತ್ರಿಶಂಕು ಸ್ಥಿತಿಗೆ ಕಾರಣ. ಈ ಬಗ್ಗೆ ಜರ್ಮನ್ ರಾಜಭಾರ ಕಚೇರಿಗೆ ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಯೇಟ್ನಾಂನಿಂದ ವೀಟ್‌ಜೆಟ್ ಏರ್ ವಿಮಾನದಲ್ಲಿ ಮಾರ್ಚ್ 18ರಂದು ಆಗಮಿಸಿದ ಝೀಬತ್ ಇಸ್ತಾಂಬುಲ್‌ಗೆ ಹೋಗುವ ಸಲುವಾಗಿ ದೆಹಲಿಯಲ್ಲಿ ಬೇರೆ ವಿಮಾನ ಏರಬೇಕಿತ್ತು. ತಾನು ಹೋಗಬೇಕಾದ ಸ್ಥಳಕ್ಕೆ ತೆರಳುವ ಎಲ್ಲ ವಿಮಾನಗಳು ರದ್ದಾಗಿರುವುದು ಆಗಷ್ಟೇ ಅವರ ಗಮನಕ್ಕೆ ಬಂತು ಎಂದು ಹೇಳಲಾಗಿದೆ.

ವರ್ಗಾಂತರ ಪ್ರಯಾಣಿಕರಿಗೆ ಮೀಸಲಿದ್ದ ಜಾಗದಲ್ಲಿ ಬೇರೆ ಬೇರೆ ದಿನ ಆಗಮಿಸಿದ ಇಂಥ ನಾಲ್ಕು ಮಂದಿ ಪ್ರಯಾಣಿಕರ ಜತೆ ಒಂದು ವಾರವನ್ನು ಝೀಬತ್ ಕಳೆದರು. ಈ ಹಿನ್ನೆಲೆಯಲ್ಲಿ ಇಬ್ಬರು ಶ್ರೀಲಂಕಾ ನಾಗರಿಕರು, ಮಾಲ್ಡೀವ್ಸ್ ಹಾಗೂ ಫಿಲಿಫೀನ್ಸ್‌ನ ತಲಾ ಒಬ್ಬರು ನಾಗರಿಕರು ಮತ್ತು ಝೀಬತ್ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಆಯಾ ದೇಶದ ರಾಜಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದರು ಎಂದು ಮೂಲಗಳು ವಿವರಿಸಿವೆ.

ಇತರ ನಾಲ್ಕು ಮಂದಿ ಪ್ರಯಾಣಿಕರಿಗೆ ಆಯಾ ರಾಯಭಾರ ಕಚೇರಿಗಳು ಕ್ವಾರಂಟೈನ್ ವ್ಯವ್ಥೆ ಮಾಡಿವೆ. ಆದರೆ ಜರ್ಮನಿ ರಾಯಭಾರ ಕಚೇರಿ ಭಾರತೀಯ ಇಮಿಗ್ರೇಶನ್ ಬ್ಯೂರೊಗೆ ಮಾಹಿತಿ ನೀಡಿ, ಝೀಬತ್ ಕುಖ್ಯಾತ ಅಪರಾಧಿಯಾಗಿದ್ದು, ಹಲವು ಪ್ರಕರಣಗಳು ಆತನ ವಿರುದ್ಧ ಇವೆ. ಈತ ವಿದೇಶಿ ನೆಲದಲ್ಲಿ ಇರುವ ಕಾರಣ ಕಸ್ಟಡಿಗೆ ಪಡೆಯುವಂತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿತ್ತು. ದೆಹಲಿ ಪೊಲೀಸರಿಗೆ ಕೂಡಾ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಅಪರಾಧ ಹಿನ್ನೆಲೆ ಕಾರಣದಿಂದ ಭಾರತ ಕೂಡಾ ಇವರಿಗೆ ವೀಸಾ ನೀಡಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಅತಂತ್ರ ಹಾಗೂ ಅಕ್ರಮವಾಗಿ ವಿಮಾನ ನಿಲ್ದಾಣದಲ್ಲೇ ಕಳೆಯುವಂತಾಗಿದೆ. ವಾಸ್ತವವಾಗಿ ಅಂತರರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣದ ಟ್ರಾನ್ಸಿಸ್ಟ್ ಏರಿಯಾದಲ್ಲಿ ಒಂದು ದಿನ ಮಾತ್ರ ಉಳಿದುಕೊಳ್ಳಲು ಅವಕಾಶವಿದೆ. ಝೀಬತ್ ಭಾರತೀಯ ವೀಸಾಗೆ ಅರ್ಜಿ ಸಲ್ಲಿಸಿಲ್ಲ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X