Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬುಕ್ಕಿಗಳ ಭೇಟಿ ವಿವರ ಬಹಿರಂಗಕ್ಕೆ ಉಮರ್...

ಬುಕ್ಕಿಗಳ ಭೇಟಿ ವಿವರ ಬಹಿರಂಗಕ್ಕೆ ಉಮರ್ ಅಕ್ಮಲ್ ನಕಾರ: ಪಿಸಿಬಿ

ವಾರ್ತಾಭಾರತಿವಾರ್ತಾಭಾರತಿ11 May 2020 11:12 AM IST
share
ಬುಕ್ಕಿಗಳ ಭೇಟಿ ವಿವರ ಬಹಿರಂಗಕ್ಕೆ ಉಮರ್ ಅಕ್ಮಲ್ ನಕಾರ: ಪಿಸಿಬಿ

ಕರಾಚಿ, ಮೇ 11: ಪಾಕಿಸ್ತಾನದ ಬ್ಯಾಟ್ಸ್ ಮನ್ ಉಮರ್ ಅಕ್ಮಲ್ ಅವರು ಶಿಸ್ತು ಸಮಿತಿಯ ಮುಂದೆ ಶಂಕಿತ ಬುಕ್ಕಿಗಳನ್ನು ಎರಡು ಬಾರಿ ಭೇಟಿಯಾಗಿ ಮಾತುಕತೆ ನಡೆಸಿರುವ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಇದು ವಿಚಾರಣೆಯ ನಂತರ ಅವರಿಗೆ ಮೂರು ವರ್ಷಗಳ ನಿಷೇಧವನ್ನು ನೀಡಿತು ಎಂದು ಪಿಸಿಬಿ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಅಕ್ಮಲ್ ಅವರು ಲಾಹೋರ್‌ನ ಡಿಫೆನ್ಸ್ ಹೌಸಿಂಗ್ ಸೊಸೈಟಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಭೇಟಿಯಾಗಿದ್ದಾರೆ ‘‘ಡಿಎಚ್‌ಎಯಲ್ಲಿ ಸ್ನೇಹಿತರು ಆಯೋಜಿಸಿದ ಪಾರ್ಟಿಗಳಲ್ಲಿ ಈ ಇಬ್ಬರು ಮಹನೀಯರು ತಮ್ಮನ್ನು ಭೇಟಿಯಾದರು ಎಂದು ಉಮರ್ ಹೇಳಿಕೊಂಡಿದ್ದಾರೆ. ಆದರೆ ಈ ಭೇಟಿಯಲ್ಲಿ ಚರ್ಚಿಸಿದ ವಿಷಯವನ್ನು ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳಿಗೆ ಹೇಳಲು ನಿರಾಕರಿಸಿದ್ದಾರೆ’’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೂಲಗಳು ತಿಳಿಸಿವೆ.

ಕರಾಚಿಯಲ್ಲಿ ಕಳೆದ ಫೆಬ್ರವರಿಯಲ್ಲಿ ಭ್ರಷ್ಟಾಚಾರ ನಿಗ್ರಹ ವಿಭಾಗದ ಅಧಿಕಾರಿಗಳು ತಮ್ಮ ವರದಿಯನ್ನು ಮೊದಲ ಬಾರಿಗೆ ಮಂಡಿಸಿದಾಗ ಅಕ್ಮಲ್ ಅವರು ಬುಕ್ಕಿಗಳ ಭೇಟಿಯನ್ನು ವರದಿ ಮಾಡದಿರುವ ಮೂಲಕ ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಂಡರು. ಆದರೆ ಯಾವುದೇ ವಿವರಗಳನ್ನು ನೀಡುವುದರಿಂದ ಜಾರಿಕೊಂಡರು. ಪಿಸಿಬಿ ಭ್ರಷ್ಟಾಚಾರ ನಿಗ್ರಹ ಸಂಹಿತೆಯಡಿ ಎರಡು ಆರೋಪಗಳಲ್ಲಿ ಅಕ್ಮಲ್ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಕಾರಣದಿಂದಾಗಿ ಕಳೆದ ಎಪ್ರಿಲ್ 27ರಿಂದ 2023ರ ಫೆಬ್ರವರಿ 19ರವರೆಗೆ ಕ್ರಿಕೆಟ್ ಚಟುವಟಿಕೆಗಳಿಗೆ ಅವರಿಗೆ ನಿಷೇಧ ಹೇರಲಾಗಿದೆ.

ಎರಡು ಮೂರು ವರ್ಷಗಳ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಕ್ಮಲ್‌ಗೆ 14 ದಿನಗಳ ಕಾಲಾವಕಾಶವಿದೆ ಮತ್ತು ಅದನ್ನು ಕೇಳಲು ಪಿಸಿಬಿ ಸ್ವತಂತ್ರ ವಿಚಾರಣಾ ಸಮಿತಿಯನ್ನು ನೇಮಿಸುತ್ತದೆ. ಅಕ್ಮಲ್ ಈ ಬಗ್ಗೆ ಕೆಲವು ವಕೀಲರೊಂದಿಗೆ ಸಮಾಲೋಚಿಸಲು ಪ್ರಾರಂಭಿಸಿದ್ದಾರೆ ಮತ್ತು ಮೇಲ್ಮನವಿ ಸಲ್ಲಿಸಲಿದ್ದಾರೆಂದು ಅಕ್ಮಲ್ ಅವರ ಆಪ್ತ ಮೂಲಗಳು ತಿಳಿಸಿವೆ.

ಎಪ್ರಿಲ್ 27ರಂದು ಶಿಸ್ತು ಸಮಿತಿ ವಿಚಾರಣೆಯ ಮೊದಲು ಅಕ್ಮಲ್ ಸಹ ಸಂಘರ್ಷದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪಿಸಿಬಿ ತಿಳಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಸಮಿತಿಯ ಅಧ್ಯಕ್ಷ, ನ್ಯಾಯಮೂರ್ತಿ (ನಿವೃತ್ತ) ಫಜಲ್-ಎ-ಮಿರಾನ್ ಚೌಹಾಣ್ ಅವರು ತಮ್ಮ ವಿವರವಾದ ತೀರ್ಪಿನಲ್ಲಿ ಅಕ್ಮಲ್ ಪಶ್ಚಾತ್ತಾಪವನ್ನು ತೋರಿಸಲಿಲ್ಲ ಅಥವಾ ಭ್ರಷ್ಟ ವಿಧಾನಗಳನ್ನು ವರದಿ ಮಾಡಲು ವಿಫಲವಾದ ಕಾರಣ ಕ್ಷಮೆಯಾಚಿಸದಿರುವುದನ್ನು ಗಮನಿಸಿದ್ದಾರೆ.

ಅಕ್ಮಲ್ ಅವರು ನ್ಯಾಯಮೂರ್ತಿ ಚೌಹಾಣ್ ಅವರಲ್ಲಿ ತಪ್ಪಿನ ಬಗ್ಗೆ ಮೃದು ಧೋರಣೆ, ದಂಡ ಮತ್ತು ನಿಷೇಧದಲ್ಲಿ ರಿಯಾಯತಿ ತೋರಿಸುವಂತೆ ಮನವಿ ಮಾಡಿದ್ದರು.

ಪಾಕಿಸ್ತಾನ ಸೂಪರ್ ಲೀಗ್‌ನ ಮುನ್ನಾ ದಿನದಂದು ಅಕ್ಮಲ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು. ಮಾರ್ಚ್ 17ರಂದು ಪಿಸಿಬಿ ಭ್ರಷ್ಟಾಚಾರ ನಿಗ್ರಹ ಸಂಹಿತೆಯ 2.4.4ನೇ ವಿಧಿ ಉಲ್ಲಂಘನೆ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಅಕ್ಮಲ್ ಪಾಕ್‌ನ ಈಗಿನ ನಾಯಕ ಬಾಬರ್ ಆಝಮ್ ಅವರ ಸೋದರ ಸಂಬಂಧಿಯಾಗಿದ್ದಾರೆ. ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕಮ್ರಾನ್ ಅಕ್ಮಲ್ ಅವರ ಕಿರಿಯ ಸಹೋದರ ಅಕ್ಮಲ್ ಅವರು ಅಕ್ಟೋಬರ್‌ನಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನ ಪರ ಆಡಿದ್ದರು. ಅವರು 16 ಟೆಸ್ಟ್, 121 ಏಕದಿನ ಮತ್ತು 84 ಟ್ವೆಂಟಿ-20 ಗಳಲ್ಲಿ ಕ್ರಮವಾಗಿ 1,003, 3,194 ಮತ್ತು 1,690 ರನ್ ಗಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X