Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಚಾರಿ ಫೀವರ್ ಕ್ಲಿನಿಕ್ ಗೆ...

ಸಂಚಾರಿ ಫೀವರ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 May 2020 4:34 PM IST
share
ಸಂಚಾರಿ ಫೀವರ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಬೆಂಗಳೂರು : ಕೋವಿಡ್ 19 ತಪಾಸಣೆ ಮಾಡುವ ಸಂಚಾರಿ ಫೀವರ್ ಕ್ಲಿನಿಕ್ ಗಳನ್ನು ಸಾರ್ವಜನಿಕರು  ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ಹೌಸ್ ಜಾಯ್ ಸಂಸ್ಥೆ, ಆಕ್ಟ್  ಕೋವಿಡ್ ಫಂಡ್ ಹಾಗೂ ಮತ್ತಿತರ ಪಾಲುದಾರರು ಅಭಿವೃದ್ಧಿಪಡಿಸಿರುವ ಸಂಚಾರಿ ಫೀವರ್ ಕ್ಲಿನಿಕ್ ಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಳೆಯ  ಬಸ್ಸುಗಳನ್ನು  ಸಂಚಾರಿ ಕ್ಲಿನಿಕ್ ಗಳಾಗಿ ಮಾರ್ಪಡಿಸಲಾಗಿದೆ.  ಸಂಚಾರಿ ಫೀವರ್ ಕ್ಲಿನಿಕ್ ಗಳು ಸಂಪೂರ್ಣವಾಗಿ ಸುಸಜ್ಜಿತವಾದ ಸೌಲಭ್ಯ ಗಳನ್ನು ಹೊಂದಿದ್ದು, ಹಾಸಿಗೆಗಳು ಹಾಗೂ ಸಮಾಲೋಚನೆಗೆಂದು ಎರಡು ಪ್ರತ್ಯೇಕ ವಲಯಗಳನ್ನು ಹೊಂದಿದೆ. ಕೆಂಪು ವಲಯಗಳಲ್ಲಿ ಗರಿಷ್ಠ ನಿವಾಸಿಗಳ ತಪಾಸಣೆ ಮಾಡಲಿದೆ.  ಸಂಚಾರಿ ಫೀವರ್ ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಮೂವರು ದಾದಿಯರು  ಹಾಗೂ ಒಬ್ಬ ಲಾಬ್ ಟೆಕ್ನಿಷಿಯನ್ ಹಾಗೂ ಸ್ವಯಂ ಸೇವಾ ಕಾರ್ಯಕರ್ತರು ಇರುತ್ತಾರೆ. ಈ ರೀತಿಯ ತಂಡವನ್ನು ಹೊಂದಿದ  4 ಸಂಚಾರಿ ಫೀವರ್ ಕ್ಲಿನಿಕ್ ಗಳು ನಿಯಂತ್ರಣಾ ವಲಯ ಗಳನ್ನು ಒಳಗೊಂಡಂತೆ ಬೆಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸಲಿದೆ ಎಂದು ಸಿಎಂ ವಿವರಿಸಿದರು.

ತಪಾಸಣೆಯಲ್ಲಿ ಕೊರೋನ ಧೃಢಪಟ್ಟವರ ಮಾಹಿತಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಲಾಗುವುದು ಎಂದ ಅವರು ಆಸ್ಪತ್ರೆಗೆ ಭೇಟಿ ನೀಡಲು ಸಾಧ್ಯವಾಗದ ನಾಗರಿಕರು, ಈ  ಸಂಚಾರಿ ಫೀವರ್ ಕ್ಲಿನಿಕ್ ಗಳಲ್ಲಿಯೇ ಪರೀಕ್ಷೆಗೊಳಪಡಬಹುದು. ಗಂಟಲು ದ್ರವ ಮಾದರಿ ಸಂಗ್ರಹಕ್ಕೂ ಸಂಚಾರಿ ಫೀವರ್ ಕ್ಲಿನಿಕ್ ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಕೊರೋನ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅತ್ಯಧಿಕ ತಪಾಸಣೆಗಳ ಅಗತ್ಯವಿದೆ.  ಇದಕ್ಕಾಗಿ ಮೊಬೈಲ್‌ ಬೂತ್‌ಗಳನ್ನು ರಾಜ್ಯ ಸರ್ಕಾರ ಆರಂಭಿಸಿದೆ ಎಂದು ತಿಳಿಸಿದರು.

ಕೋವಿಡ್ 19 ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಖಾಸಗಿ ಸಂಸ್ಥೆಗಳು ಕೈಜೋಡಿಸಿರುವುದು ಸ್ವಾಗತಾರ್ಹ.  ಈ ನಿಟ್ಟಿನಲ್ಲಿ ಹೌಸ್ ಜಾಯ್ ಸಂಸ್ಥೆಯ ಸಂಚಿತ್ ಗೌರವ್ ಮತ್ತು ಎಸ್.ಆರ್.ಎಲ್ ಡೈಗನೊಸ್ಟಿಕ್ಸ್ ನ ಮುಹಮ್ಮದ್ ನಿಯಮತುಲ್ಲಾ ಮತ್ತು ಡಾ. ಕುನಾಲ್ ಶರ್ಮಾ, ಸಂಸದ ತೇಜಸ್ವಿ ಸೂರ್ಯ ಹಾಗೂ ಎಲ್ಲ ಪಾಲುದಾರರ ಪ್ರಯತ್ನ ಶ್ಲಾಘನೀಯ ಎಂದರು.

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್,  ಸಂಸದ ತೇಜಸ್ವಿ ಸೂರ್ಯ, ಹೌಸ್ ಜಾಯ್ ಸಂಸ್ಥೆಯ ಸಂಚಿತ್ ಗೌರವ್ ಮತ್ತು ಎಸ್.ಆರ್.ಎಲ್ ಡೈಗನೊಸ್ಟಿಕ್ಸ್ ನ ಮೊಹಮದ್ ನಿಯಮತುಲ್ಲಾ, ಡಾ. ಕುನಾಲ್ ಶರ್ಮಾ,  ಹಾಗೂ ACT ಕೋವಿಡ್ ಫಂಡ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X