Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಿವಾಸಿ ಕನ್ನಡಿಗರಿಗೆ ಕೇರಳ‌ ಮಾದರಿಯ...

ಅನಿವಾಸಿ ಕನ್ನಡಿಗರಿಗೆ ಕೇರಳ‌ ಮಾದರಿಯ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಿ : ಇಬ್ರಾಹೀಂ ಕನ್ನಂಗಾರ್

ವಾರ್ತಾಭಾರತಿವಾರ್ತಾಭಾರತಿ11 May 2020 5:21 PM IST
share

ಮಂಗಳೂರು, ಮೇ 11: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಅತಂತ್ರರಾಗಿರುವ ಅನಿವಾಸಿ ಕನ್ನಡಿಗರಿಗೆ ಮಂಗಳೂರಿನಲ್ಲಿ ಕೇರಳ ಮಾದರಿಯ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಎನ್‌ಆರ್‌ಐ ಕಾಂಗ್ರೆಸ್ ಸೆಲ್ ಸೌದಿ ಅರೇಬಿಯಾ ಪೂರ್ವ ಪ್ರಾಂತದ ಸಂಯೋಜಕ ಇಬ್ರಾಹೀಂ ಕನ್ನಂಗಾರ್ ಆಗ್ರಹಿಸಿದ್ದಾರೆ.

'ವಾರ್ತಾಭಾರತಿ' ಜೊತೆ ಮಾತನಾಡಿದ ಅವರು ಗಲ್ಫ್ ರಾಷ್ಟ್ರಗಳಿಂದ ಸುಮಾರು 1ಲಕ್ಷಕ್ಕೂ ಅಧಿಕ ಕನ್ನಡಿಗರು ತವರಿಗೆ ಮರಳಲು ಆಸಕ್ತರಾಗಿದ್ದಾರೆ. ಕೇಂದ್ರ ಸರಕಾರ ಈ ಬಗ್ಗೆ ಎಲ್ಲಾ ವ್ಯವಸ್ಥೆ ಕಲ್ಪಿಸಿದೆ ಎಂದು ಹೇಳಿಕೊಂಡಿವೆ. ಆದರೆ ನಮಗೆ ಇನ್ನೂ ಇಲ್ಲಿನ ರಾಯಭಾರಿ ಕಚೇರಿಯಿಂದ ಅಧಿಕೃತವಾಗಿ ಯಾವುದೇ ಸೂಚನೆ ಬಂದಿಲ್ಲ. ಇದರಿಂದ ತವರಿಗೆ ಮರಳಲು ಅಸಕ್ತರಾಗಿ ರುವ ಅನಿವಾಸಿ‌ ಕನ್ನಡಿಗರು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ.

ಈ‌ ಮಧ್ಯೆ ಮಂಗಳೂರಿನಲ್ಲಿ ಕಲ್ಪಿಸಲಾಗುವ ಕ್ವಾರಂಟೈನ್‌ಗೆ ದಿನವೊಂದಕ್ಕೆ ಕನಿಷ್ಟ ‌2 ಸಾವಿರ ರೂ. ದರ ನಿಗದಿಪಡಿಸಿರುವ ಬಗ್ಗೆ ಮಾಹಿತಿ ಇದೆ. ಅಂದರೆ ಕನಿಷ್ಟ 2 ವಾರದ ಕ್ವಾರಂಟೈನ್‌ಗೆ  30 ಸಾವಿರ‌ ರೂ.  ಪಾವತಿಸಬೇಕಾಗುತ್ತದೆ. ಲಾಕ್‌ಡೌನ್‌ನಿಂದ ಅತಂತ್ರರಾಗಿ‌ ತವರಿಗೆ ಮರಳಲು‌ ಬಯಸಿರುವವರು ದುಡಿಯುವ ವರ್ಗ. ಈಗಾಗಲೆ‌ ದುಡಿಮೆಯಿಲ್ಲದೆ ಕಷ್ಟದ ದಿನಗಳನ್ನು ಕಳೆದಿರುವವರಿಗೆ ಕನಿಷ್ಟ ‌30 ಸಾವಿರ ಪಾವತಿಸಲು ಸಾಧ್ಯವಾಗದು. ಹಾಗಾಗಿ ಕೇರಳ ಮಾದರಿಯ ‌ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಬೇಕು ಎಂದು ಇಬ್ರಾಹೀಂ ಕನ್ನಂಗಾರ್ ಒತ್ತಾಯಿಸಿದ್ದಾರೆ.

ಕೇರಳದಲ್ಲಿ ಎಲ್ಲವೂ ಉಚಿತವಾಗಿದೆ. ಅದನ್ನು‌ ಕರ್ನಾಟಕದಲ್ಲಿ‌ ಪಾಲಿಸದಿದ್ದರೆ ಕಾರ್ಮಿಕ ವರ್ಗದ ಗಾಯದ ಮೇಲೆ ಬರೆ ಎಳೆದಂತಾಗಬಹುದು. ಕೆಲಸವಿಲ್ಲದೆ, ಮನೆಗೂ ಏನನ್ನೂ ಕಳುಹಿಸಿಕೊಡಲಾಗದೆ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರಿಗೆ ನೆರವು ನೀಡಬೇಕು. ಸೌದಿ ಅರೇಬಿಯಾದಲ್ಲೇ ಸುಮಾರು 30 ಸಾವಿರ ಮಂದಿ ಅನಿವಾಸಿ ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನಾಡಿನ ಆರ್ಥಿಕತೆಗೆ ಸಾಕಷ್ಟು‌ ಕೊಡುಗೆ ನೀಡಿರುವ ಅನಿವಾಸಿ ಕನ್ನಡಿಗರನ್ನು ಕಷ್ಟ ಕಾಲದಲ್ಲಿ ಕೈ ಬಿಡಬಾರದು ಎಂದು ಇಬ್ರಾಹೀಂ ಕನ್ನಂಗಾರ್ ಮನವಿ‌ ಮಾಡಿದ್ದಾರೆ.

ಮೇ 12ರಂದು ಸಂಜೆ ದುಬೈಯಿಂದ ಅತಂತ್ರ ಕನ್ನಡಿಗರನ್ನು ಹೊತ್ತ ವಿಮಾನವು ರಾತ್ರಿ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ. ಅವರ ಕ್ವಾರಂಟೈನ್‌ಗೆ ಮಂಗಳೂರಿನಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ವಾರಂಟೈನ್‌ನಲ್ಲಿರುವ ಯಾರಿಗೂ ಕನಿಷ್ಟ ದರ ನಿಗದಿಪಡಿಸಿಲ್ಲ. ಉಚಿತ ಸೌಲಭ್ಯವೂ ಇದೆ. ಕೆಲವರು ಇಂತಹದೇ ಲಾಡ್ಜ್/ಹೊಟೇಲಲ್ಲಿ  ತಂಗಲು ಬಯಸಿದರೆ ಅದನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕೆ ತಗಲುವ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ಅನಿವಾಸಿ ಕನ್ನಡಿಗರಿಗೆ ಕಲ್ಪಿಸಲಾದ ಕ್ವಾರಂಟೈನ್ ‌ವ್ಯವಸ್ಥೆಯ ಜವಾಬ್ದಾರಿ ವಹಿಸಿಕೊಂಡಿರುವ ಮನಪಾ ಅಧಿಕಾರಿ ಮಧು ಮನೋಹರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X