Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ...

ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಡಿ.ಕೆ.ಶಿವಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ11 May 2020 9:48 PM IST
share
ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಡಿ.ಕೆ.ಶಿವಕುಮಾರ್ ಆರೋಪ

ಬೆಂಗಳೂರು, ಮೇ 11: ಕೋವಿಡ್-19 ಪರಿಸ್ಥಿತಿ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕರ್ನಾಟಕಕ್ಕೆ ವಾಪಸ್ ಮರಳಲು ಇಚ್ಛಿಸುವವರಿಗೆ ರೈಲು ಸೇವೆ ಕಲ್ಪಿಸಿ, ಅವರ ಟಿಕೆಟ್ ದರವನ್ನು ಕಾಂಗ್ರೆಸ್ ಪಕ್ಷ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೈರುತ್ಯ ರೈಲ್ವೇ ವಿಭಾಗೀಯ ವ್ಯವಸ್ಥಾಪಕ ಅಶೋಕ್ ವರ್ಮಾ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ಆರಂಭವಾದ ಒಂದೂವರೇ ತಿಂಗಳ ಹಿಂದೆಯೇ ಕೇರಳ ಸರಕಾರ 20 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಪ್ರಕಟಿಸಿತು. ಈ ವಿಚಾರವಾಗಿ ವಿಶೇಷ ಅಧಿವೇಶನ ಕರೆದು ಎಲ್ಲ ವರ್ಗದ ಜನರಿಗೆ, ಉದ್ಯೋಗಿಗಳಿಂದ ಹಿಡಿದು, ಉದ್ಯೋಗದಾತರು, ಅಸಂಘಟಿತ ಕಾರ್ಮಿಕರು, ರೈತರು, ಕೈಗಾರಿಕೆಗಳು ಎಲ್ಲರ ಹಿತ ಕಾಯಲು ನೆರವಾಗುವಂತೆ 50 ಸಾವಿರ ಕೋಟಿಯ ವಿಶೇಷ ಪ್ಯಾಕೇಜ್ ಅನ್ನು ಬಜೆಟ್‍ನಲ್ಲಿ ಪ್ರಕಟಿಸಿ ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆದರೆ, ಸರಕಾರ ಇದನ್ನು ಕೇಳಿಸಿಕೊಳ್ಳುತ್ತಿಲ್ಲ. ಸರಕಾರದ ಬಳಿ ದುಡ್ಡಿದೆ. ಬಜೆಟ್ ಪುನರ್ ಪರಿಶೀಲಿಸಿ ಅನುದಾನವನ್ನು ನೀಡಲು ಹೆಚ್ಚು ಸಮಸ್ಯೆ ಇಲ್ಲ. ಆಡಳಿತ ಪಕ್ಷದ ನಾಯಕರು ತಮ್ಮ ಜೇಬಿನಿಂದ ದುಡ್ಡು ಹಾಕುವ ಅಗತ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಯಾವ ವರ್ಗಕ್ಕೆ ಎಷ್ಟು ಕೊಡಬೇಕು ಎಂಬುದನ್ನಷ್ಟೇ ತೀರ್ಮಾನಿಸಬೇಕಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ನೀಡಿ, ಯಾರು ಹೊರಗಡೆಯಿಂದ ಬಂದಿದ್ದಾರೋ ಅವರಿಗೆ ಸರಿಯಾಗಿ ಆಹಾರ ಕಿಟ್, ಹಣ ನೀಡಿದ್ದರೆ ಅವರೇಕೆ ಲಕ್ಷಾಂತರ ಸಂಖ್ಯೆಯಲ್ಲಿ ವಾಪಸ್ ಹೋಗುತ್ತಿದ್ದರು ? ಅವರನ್ನು ಸರಿಯಾಗಿ ನೋಡಿಕೊಳ್ಳದೇ, ಆಹಾರ ಕಿಟ್‍ಗಳನ್ನು ತಮ್ಮ ಕಾರ್ಯಕರ್ತರಿಗೆ ಹಂಚಿದ ಪರಿಣಾಮ ಇಂದು ಈ ಸ್ಥಿತಿ ನಿರ್ಮಾಣವಾಗಿದೆ. ಈ ಸ್ಥಿತಿ ಕೊರೋನ ವಿಚಾರದಲ್ಲೂ ರಾಜಕಾರಣ ಮಾಡಿದೆಯೇ ಹೊರತು ನಿಜವಾದ ಶ್ರಮಿಕರ ನೆರವಿಗೆ ಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್‍ನಿಂದ ಅಳಿಲು ಸೇವೆ: ಮೇ 12ರಿಂದ ರೈಲು ಸೇವೆ ಆರಂಭವಾಗಲಿದೆ. ರಾಜ್ಯದಿಂದ ಹೊಸದಿಲ್ಲಿಗೆ ಒಂದು ರೈಲೂ ಹೋಗತ್ತಿದೆ. ಇದಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಠೇವಣಿ ಇಟ್ಟಿದೆ. ನಮ್ಮ ದೇಶವನ್ನು ಕಟ್ಟುತ್ತಿರುವ ಕಾರ್ಮಿಕರನ್ನು ಕರೆತರಲು ಕಾಂಗ್ರೆಸ್ ಕೂಡ ಅಳಿಲು ಸೇವೆ ಮಾಡಲಿದೆ. ಹೀಗಾಗಿ, ಇಂದು ನೈರುತ್ಯ ರೈಲ್ವೇ ವಿಭಾಗೀಯ ವ್ಯವಸ್ಥಾಪಕ ಅಶೋಕ್ ವರ್ಮಾ ಅವರನ್ನು ಭೇಟಿ ಮಾಡಿ ಕನ್ನಡಿಗರನ್ನು ವಾಪಸ್ ಕರೆತರಲು ಅಗತ್ಯ ರೈಲು ಸೇವೆ ನೀಡಿ. ಅದಕ್ಕೆ ತಗಲುವ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಮನವಿ ಮಾಡಲಾಗಿದೆ. ಈ ಮನವಿಗೆ ಅಧಿಕಾರಿಗಳೂ ಸ್ಪಂದಿಸಿದ್ದು, ಮೇಲಾಧಿಕಾರಿಗಳ ಜತೆ ಚರ್ಚಿಸಿ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅವರು ಹೇಳಿದಾಗ ಪಕ್ಷದಿಂದಲೇ ಹಣ ಕಟ್ಟಲಾಗುತ್ತದೆ ಎಂದು ತಿಳಿಸಿದರು.

ನೈರುತ್ಯ ರೈಲ್ವೆಯ ಅಧಿಕಾರಿಗೆ ಮನವಿ ಸಲ್ಲಿಸುವಾಗ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಸಂಸದ ಡಿ.ಕೆ.ಸುರೇಶ್, ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X