Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಿನ್ನಲು ಆಹಾರ ಇಲ್ಲದೆ ಕಾಲ್ನಡಿಗೆಯಲ್ಲೇ...

ತಿನ್ನಲು ಆಹಾರ ಇಲ್ಲದೆ ಕಾಲ್ನಡಿಗೆಯಲ್ಲೇ ಊರಿಗೆ ಹೊರಟ ತೆಲಂಗಾಣ ಕಾರ್ಮಿಕರು !

ಗರ್ಭಿಣಿ ಸಹಿತ 40 ಮಂದಿಯ ಗುಂಪು ; ತಹಶೀಲ್ದಾರ್‌ರಿಂದ ಮನವೊಲಿಕೆ

ವಾರ್ತಾಭಾರತಿವಾರ್ತಾಭಾರತಿ11 May 2020 9:49 PM IST
share
ತಿನ್ನಲು ಆಹಾರ ಇಲ್ಲದೆ ಕಾಲ್ನಡಿಗೆಯಲ್ಲೇ ಊರಿಗೆ ಹೊರಟ ತೆಲಂಗಾಣ ಕಾರ್ಮಿಕರು !

ಮಣಿಪಾಲ, ಮೇ 11: ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ವಾರಗಳಿಂದ ತಿನ್ನಲು ಆಹಾರ ಇಲ್ಲದ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಗರ್ಭಿಣಿ ಸಹಿತ 40 ಮಂದಿ ತೆಲಂಗಾಣದ ಕೂಲಿ ಕಾರ್ಮಿಕರನ್ನು ಪೊಲೀಸರು ಇಂದು ಸಂಜೆ ಮಣಿಪಾಲದಲ್ಲಿ ತಡೆದಿದ್ದು, ಎರಡು ಮೂರು ದಿನಗಳಲ್ಲಿ ಬಸ್ ಮೂಲಕ ಕಳುಹಿಸುವ ಭರವಸೆ ನೀಡಿದ ಬಳಿಕ, ಎಲ್ಲ ಕಾರ್ಮಿಕರು ತಮ್ಮ ಟೆಂಟ್‌ಗಳಿಗೆ ವಾಪಾಸ್ಸಾಗಿದ್ದಾರೆ.

ತೆಲಂಗಾಣ ಮೂಲದ ಸುಮಾರು 48 ಮಂದಿ ಕೂಲಿ ಕಾರ್ಮಿಕರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ಕೂಲಿ ಕೆಲಸ ಮಾಡುತ್ತಿದ್ದು, ಇವರೆಲ್ಲ ರೈಲ್ವೆ ನಿಲ್ದಾಣದ ಸಮೀಪವೇ ಟೆಂಟ್ ಹಾಕಿ ವಾಸ ಮಾಡುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಇವರನ್ನು ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಕರೆದುಕೊಂಡು ಬಂದಿದ್ದ ಗುತ್ತಿಗೆದಾರ ಸಂಬಳದ ಬದಲು ಊಟ ನೀಡುತ್ತಿದ್ದ ಎನ್ನಲಾಗಿದೆ.
ಆದರೆ ಕಳೆದ ಎರಡು ವಾರಗಳಿಂದ ಊಟ ನೀಡುವುದನ್ನು ನಿಲ್ಲಿಸಿದ್ದ ಗುತ್ತಿಗೆದಾರ ನಾಪತ್ತೆಯಾಗಿದ್ದ. ಗರ್ಭಿಣಿ ಸಹಿತ ಮಹಿಳೆಯರು ಹಾಗೂ ಮಕ್ಕಳಿರುವ ಈ ಕಾರ್ಮಿಕರ ಗುಂಪು ಅನ್ನ, ಆಹಾರ ಇಲ್ಲದೆ ಪರದಾಡುವಂತಾಯಿತು. ಈ ಹಿನ್ನೆಲೆಯಲ್ಲಿ ಇವರಲ್ಲಿ ಕೆಲವು ಕಾರ್ಮಿಕರು 900 ಕಿ.ಮೀ. ದೂರದ ತಮ್ಮ ಊರಿಗೆ ಕಾಲ್ನಡಿಗೆಯಲ್ಲಿಯೇ ಹೊರಟಿದ್ದರು.

ಇವರ ಗುಂಪಿನಲ್ಲಿ ಗರ್ಭಿಣಿ ಸಹಿತ 18 ಮಹಿಳೆಯರು ಹಾಗೂ 12 ಸಣ್ಣ ಪ್ರಾಯದ ಮಕ್ಕಳಿದ್ದರು. ಮಣಿಪಾಲ ಮೂಲಕ ನಡೆದುಕೊಂಡು ಹೋಗುತ್ತಿದ್ದ ಇವರನ್ನು ಪೊಲೀಸರು ಮಣಿಪಾಲದಲ್ಲಿ ಗಮನಿಸಿ, ವಿಚಾರಿಸಿದರು. ಬಳಿಕ ಸ್ಥಳಕ್ಕೆ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಸಹಿತ ಇತರ ಅಧಿಕಾರಿ ಗಳು ಆಗಮಿಸಿದರು. ಸ್ಥಳೀಯ ನಗರಸಭೆ ಸದಸ್ಯರು, ವಿದ್ಯಾರ್ಥಿ ಗಳು, ಪೊಲೀಸರು ಸ್ಥಳದಲ್ಲಿ ಜಮಾಯಿಸಿ, ಕಾರ್ಮಿಕರನ್ನು ಮನವೊಲಿಸುವ ಕೆಲಸ ಮಾಡಿದರು.

ಆದರೆ ಕೂಲಿಕಾರ್ಮಿಕರು ತಾವು ತಮ್ಮ ಊರಿಗೆ ಹೋಗುವುದಾಗಿ ಪಟ್ಟು ಹಿಡಿದರು. ಯಾರ ಮಾತು ಕೇಳಲು ಸಿದ್ಧರಿಲ್ಲದ ಕಾರ್ಮಿಕರು, ಊರಿಗೆ ಹೋಗಲು ಅವಕಾಶ ನೀಡಿ ಎಂದು ಅಂಗಲಾಚಿದರು. ಬಳಿಕ ತಹಶೀಲ್ದಾರ್ ಇವರಿಗೆ ಸೇವಾಸಿಂಧು ಮೂಲಕ ಪಾಸ್ ವ್ಯವಸ್ಥೆ ಒದಗಿಸಿ ಬಸ್ ಮೂಲಕ ಕಳುಹಿಸುವ ಭರವಸೆ ನೀಡಿದರು. ಇದಕ್ಕೆ ಒಪ್ಪಿದ ಕೂಲಿ ಕಾರ್ಮಿಕರು ಇಂದ್ರಾಳಿಯಲ್ಲಿರುವ ತಮ್ಮ ಟೆಂಟ್‌ಗೆ ವಾಪಾಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರಿಗೆ ಬೇಕಾದ ಪಡಿತರ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್, ನಗರಸಭೆ ಸದಸ್ಯ ಮಂಜುನಾಥ್ ಮಣಿಪಾಲ, ಮಾಜಿ ಸದಸ್ಯ ಮಹೇಶ್ ಠಾಕೂರು ಹಾಜರಿದ್ದರು.

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ಮುಖಂಡರಾದ ಸುಂದರ್ ಮಾಸ್ತರ್, ಶ್ಯಾಮ್‌ರಾಜ್ ಬಿರ್ತಿ, ಭಾಸ್ಕರ್ ಮಾಸ್ಟರ್, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರೊ.ಫಣಿರಾಜ್ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ತೆರಳಿ, ಕೂಲಿ ಕಾರ್ಮಿಕ ರನ್ನು ವಿಚಾರಿಸಿದ್ದು, ಅವರನ್ನು ಕೂಡಲೇ ಊರಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

‘ತೆಲಂಗಾಣದ ಕೂಲಿ ಕಾರ್ಮಿಕರನ್ನು ನಡೆದುಕೊಂಡು ಊರಿಗೆ ಹೋಗ ದಂತೆ ಮನವೊಲಿಸಿ ವಾಪಾಸ್ಸು ಕಳುಹಿಸಿದ್ದೇವೆ. ಇವರಿಗೆ ಬೇಕಾದ ಪಡಿತರ ವನ್ನು ಕೂಡ ನೀಡಲಾಗಿದೆ. ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ಎರಡು ಮೂರು ದಿನಗಳಲ್ಲಿ ಪಾಸ್ ಒದಗಿಸಲಾಗುವುದು. ಬಳಿಕ ಬಸ್ ವ್ಯವಸ್ಥೆ ಮಾಡಿ ತೆಲಂಗಾಣಕ್ಕೆ ಕಳುಹಿಸಿಕೊಡಲಾಗುವುದು. ಈ ಮಧ್ಯೆ ತೆಲಂಗಾಣದಿಂದಲೇ ಅನುಮತಿ ಪಡೆದು ಬಸ್ ಇಲ್ಲಿಗೆ ಬರುವುದಾಗಿ ಕಾರ್ಮಿಕರು ತಿಳಿಸಿದ್ದಾರೆ. ಅದನ್ನು ಕೂಡ ಪರಿಶೀಲನೆ ಮಾಡುತ್ತೇನೆ’

-ಪ್ರದೀಪ್ ಕುರ್ಡೆಕರ್, ತಹಶೀಲ್ದಾರ್, ಉಡುಪಿ.

‘ಲಾಕ್‌ಡೌನ್ ನಂತರ ನಮ್ಮನ್ನು ಕರೆದುಕೊಂಡು ಬಂದಿದ್ದ ಗುತ್ತಿಗೆದಾರರ ಊಟ ನೀಡುತ್ತಿದ್ದನು. ಆದರೆ ನಮಗೆ ಯಾವುದೇ ಸಂಬಳ ನೀಡುತ್ತಿರಲಿಲ್ಲ. ಆದರೆ ಕಳೆದ ಎರಡು ವಾರಗಳಿಂದ ಗುತ್ತಿಗೆದಾರ ಊಟ ನೀಡುವುದನ್ನು ನಿಲ್ಲಿಸಿದ್ದಾನೆ. ಇದರಿಂದ ನಾವೆಲ್ಲ ಊಟ ಇಲ್ಲದೆ ಪರದಾಡುವಂತಾಗಿದೆ. ಆದುದರಿಂದ ನಮ್ಮ ಊರಿಗೆ ಹೋಗಿ ಬದುಕಿಕೊಳ್ಳುತ್ತೇವೆ ಎಂಬ ಉದ್ದೇಶದಿಂದ ಯಾವುದೇ ವ್ಯವಸ್ಥೆ ಇಲ್ಲದಿದ್ದರೂ ಕಾಲ್ನಡಿಗೆಯಲ್ಲಿಯೇ ಹೊರಟಿದ್ದೇವೆ’
-ಕೂಲಿ ಕಾರ್ಮಿಕ, ತೆಲಂಗಾಣ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X